ಬ್ರೇಕಿಂಗ್ ನ್ಯೂಸ್
18-02-23 03:28 pm Source: news18 ಸಿನಿಮಾ
ಧನುಷ್ ಇತ್ತೀಚೆಗೆ ವೆಂಕಿ ಅಟ್ಲೂರಿ ನಿರ್ದೇಶನದ ದ್ವಿಭಾಷಾ ಸಿನಿಮಾ ಮಾಡಿದ್ದಾರೆ. ತಮಿಳಿನಲ್ಲಿ 'ವಾತಿ' ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆಗೊಂಡಿದ್ದು, ತೆಲುಗಿನಲ್ಲಿ 'ಸಾರ್' ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆಯಾಗಿದೆ. ಟ್ರೇಲರ್ ಮತ್ತು ಟೀಸರ್ನಿಂದ ಕ್ರೇಜ್ ಕ್ರಿಯೇಟ್ ಮಾಡಿದ್ದ ಸಿನಿಮಾ ರಿಲೀಸ್ ಆದ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಇದೀಗ ಸಿನಿಮಾ ಪ್ರಮೋಷನ್ ಹಿನ್ನೆಲೆ ತೆಲುಗು ರಾಜ್ಯಗಳ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಈ ಸಿನಿಮಾವನ್ನು ಉಚಿತವಾಗಿ ತೋರಿಸಲು ಚಿತ್ರತಂಡ ಮುಂದಾಗಿದೆ. ಈ ಉಚಿತ ಶೋಗಳು ಕೆಲವು ಆಯ್ದ ಪ್ರದೇಶಗಳಲ್ಲಿ ಇರಲಿದೆ.


ಇನ್ನು ಈ ಸಿನಿಮಾದ ಥಿಯೇಟ್ರಿಕಲ್ ಬ್ಯುಸಿನೆಸ್ ವಿಚಾರಕ್ಕೆ ಬಂದರೆ ತೆಲುಗಿನ ಈ ಸಿನಿಮಾ ಮೊದಲ ದಿನವೇ ಎಪಿ ತೆಲಂಗಾಣದಲ್ಲಿ ಒಟ್ಟು 5.5 ಕೋಟಿ ಬ್ಯುಸಿನೆಸ್ ಮಾಡಿದೆ. ಹೀಗಾಗಿ ಈ ಸಿನಿಮಾ ಹಿಟ್ ಆಗಬೇಕಾದರೆ 6 ಕೋಟಿ ಶೇರ್ ಬೇಕು. ತಮಿಳಿನಲ್ಲಿ 35 ಕೋಟಿ ವರೆಗೂ ವ್ಯಾಪಾರ ಮಾಡಿದೆ ಎನ್ನಲಾಗ್ತಿದೆ. ಧನುಷ್ ಸಿನಿಮಾ ಎರಡು ತೆಲುಗು ರಾಜ್ಯಗಳಲ್ಲಿ 415 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.
ನಮ್ಮ ದೇಶದಲ್ಲಿ ಶಿಕ್ಷಣ ಎನ್ನುವುದು ಲಾಭದಾಯಕವಲ್ಲದ ಸೇವೆ ಎಂಬ ಕಥೆಯನ್ನು ಆಧರಿಸಿದೆ. ಗುಣಮಟ್ಟದ ಶಿಕ್ಷಣ ಬೇಕಾದರೆ ಹಣ ಖರ್ಚು ಮಾಡಬೇಕು. ಹಣ ಇರುವವನು ಡಿಗ್ರಿ ಖರೀದಿಸುತ್ತಾರೆ. ಹಣ ಕಡಿಮೆ ಇರುವವನು ಸಾಲ ಮಾಡಿದರೂ ಸಿಗಲ್ಲ. ದೇಶದಾದ್ಯಂತ ಶಿಕ್ಷಣವನ್ನು ವ್ಯಾಪಾರವಾಗಿ ಪರಿವರ್ತಿಸಿದವರ ವಿರುದ್ಧ ಸಾಮಾನ್ಯ ಸ್ಕೂಟ್ ಟೀಚರ್ ಮತ್ತು ಕೆಲವು ಕಾರ್ಪೊರೇಟ್ಗಳ ನಡುವೆ ನಡೆಯುವ ಹೋರಾಟವಾಗಿದೆ.


ಇದೀಗ ಪ್ರಸ್ತುತ ಶಿಕ್ಷಣ ಶ್ರೀಮಂತರ ಆಸ್ತಿಯಾಗಿದೆ. ಸಾಮಾನ್ಯ ವ್ಯಕ್ತಿ ಇದನ್ನೆಲ್ಲಾ ಹೇಗೆಲ್ಲಾ ಎದುರಿಸುತ್ತಾನೆ ಎನ್ನುವ ಕಥೆಯನ್ನು ವಾತಿ ಸಿನಿಮಾವೊಳಗೊಂಡಿದೆ. ಈ ಸಿನಿಮಾದಲ್ಲಿ ಈಗಿನ ಟ್ರೆಂಡ್ ಝೀರೋ ಫೀ.. ಜೀರೋ ಎಜುಕೇಶನ್.. ಮೋರ್ ಫೀ.. ಹೆಚ್ಚು ಎಜುಕೇಶನ್ ಬಗ್ಗೆ ತೋರಿಸಲಾಗಿದೆ.
ದೇಶದ ಶಿಕ್ಷಣ ವ್ಯವಸ್ಥೆ ಮೇಲೆ ಈ ಸಿನಿಮಾ ಮಾಡಲಾಗಿದೆ. ನಮ್ಮಲ್ಲಿರುವ ಉತ್ತಮ ಉಪನ್ಯಾಸಕರನ್ನು ಸರ್ಕಾರಿ ಕಾಲೇಜಿಗೆ ಕಳುಹಿಸಿ ಎಂದು ‘ವಾತಿ’ ಸಿನಿಮಾದಲ್ಲಿ ತೋರಿಸಲಾಗಿತ್ತು. 1990ರ ದಶಕದಲ್ಲಿ ದೇಶದಲ್ಲಿ ಉದಾರೀಕರಣಗೊಂಡ ಆರ್ಥಿಕ ನೀತಿಗಳಿಂದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಖಾಸಗಿ ಏಕಸ್ವಾಮ್ಯ ಹೆಚ್ಚಾಯಿತು.
ಕಾರ್ಪೊರೇಟ್ ಶಿಕ್ಷಣ ಸಂಸ್ಥೆಗಳು ಶಾಲೆಗಳನ್ನು ಹೇಗೆ ಆಳುತ್ತಿವೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ.. ಈ ಕಾರ್ಪೊರೇಟ್ ಶಿಕ್ಷಣ ಸಂಸ್ಥೆಗಳ ವಿರುದ್ಧ ತಿರುಗಿ ಬಿದ್ದ ಒಬ್ಬ ಸಾಮಾನ್ಯ ಶಿಕ್ಷಕನ ಅನುಭವಗಳೇ ಈ ಸಿನಿಮಾದ ಕಥೆ. ಅದರಲ್ಲೂ ವಿದ್ಯೆ ಎಂಬುದು ದೇವರ ಗುಡಿಯಲ್ಲಿ ನೈವೇದ್ಯವಿದ್ದಂತೆ, ಆದ್ರೆ ಅದನ್ನು ಈಗ ಪಂಚತಾರಾ ಹೋಟೆಲಿನಲ್ಲಿರುವ ತಿನಿಸಿನಂತೆ ಮಾರುತ್ತಿದ್ದೇನೆ ಎಂದು ಧನುಷ್ ಹೇಳುವ ಡೈಲಾಗ್ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿದೆ.


ತೆಲುಗಿನಲ್ಲಿ ಧನುಷ್ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮಾಡಿದ್ದಾರೆ. ತಿಲಕ್ ಎಂಬ ಉಪನ್ಯಾಸಕನ ಪಾತ್ರವನ್ನು ಧನುಷ್ ಬಾಲಗಂಗಾಧರ್ ಮಾಡಿದ್ದಾರೆ. ಒಟ್ಟಿನಲ್ಲಿ ಸಮಾಜದಲ್ಲಿ ಶಿಕ್ಷಣದ ಹೆಸರಿನಲ್ಲಿ ನಡೆಯುತ್ತಿರುವ ದರೋಡೆ ಬಗ್ಗೆ ಸಿನಿಮಾದಲ್ಲಿ ತೋರಿಸಿಕೊಟ್ಟಿದ್ದಾರೆ.
Dhanush Vaathi movie to be Screened freely to Government school teachers and students for Telugu states here are the Details.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
09-12-25 11:55 am
Udupi Correspondent
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
09-12-25 11:58 am
Mangalore Correspondent
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm