ಬ್ರೇಕಿಂಗ್ ನ್ಯೂಸ್
21-02-23 01:18 pm Source: news18 ಸಿನಿಮಾ
ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023 ರಲ್ಲಿ ಕಾಂತಾರ ನಟ ರಿಷಬ್ ಶೆಟ್ಟಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರೆಡ್ ಕಾರ್ಪೆಟ್ ಮೇಲೆ ವಿನಮ್ರವಾಗಿ ಪ್ರಶಸ್ತಿಯೊಂದಿಗೆ ಪೋಸ್ ನೀಡುತ್ತಿರುವಾಗ, ಕಪ್ಪು ಅಂಗಿ ಮತ್ತು ಬಿಳಿ ಪಂಚೆಯೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುತ್ತಿದ್ದಾರೆ ಎಂದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕಾಂತಾರ ನಟ ರಿಷಬ್ ಶೆಟ್ಟಿ ತಮ್ಮ ಗೆಲುವನ್ನು ಕನ್ನಡದ ನಟ ಪುನೀತ್ ರಾಜ್ಕುಮಾರ್ ಮತ್ತು ನಿರ್ದೇಶಕ ಎಸ್ಕೆ ಭಗವಾನ್ ಅವರಿಗೆ ಅರ್ಪಿಸಿದ್ದಾರೆ.



ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಮತ್ತು ವಿಜಯ್ ಕಿರಂಗಂದೂರು ಅವರಿಗೆ ನಾನು ಆಭಾರಿಯಾಗಿದ್ದೇನೆ. ಒಟ್ಟಿಗೆ ಸೇರಿಕೊಂಡು ಹೆಚ್ಚು ಉತ್ತಮ ಚಿತ್ರಗಳನ್ನು ಮಾಡಬೇಕು ಎಂದು ರಿಷಬ್ ಅವರು ಹೇಳಿದ್ದಾರೆ. ಕಾಂತಾರದ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ ನನ್ನ ಜೀವನದ ಪಿಲ್ಲರ್ ನನ್ನ ಪತ್ನಿ ಪ್ರಗತಿ ಶೆಟ್ಟಿಗೆ ನಾನು ಸದಾ ಅಭಾರಿಯಾಗಿರುತ್ತೇನೆ. ನನ್ನ ಎಲ್ಲಾ ಕನಸುಗಳ ಜೊತೆ ಅವರು ಇರುತ್ತಾರೆ ಎಂದಿದ್ದಾರೆ.



ಯಾರು ನನ್ನ ಸಿನಿಮಾ ನೋಡಿ ಬೆಂಬಲಿಸಿದ್ದೀರೋ ಅವರೆಲ್ಲರಿಗೂ ನಾನು ತುಂಬು ಹೃದಯದಿಂದ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ. ರಿಷಬ್ ಶೆಟ್ಟಿ ಅವರು ಪಂಚೆ ಉಟ್ಟು ಪ್ರಶಸ್ತಿ ಸ್ವೀಕರಿಸಿದ್ದು ಜನರಿಗೆ ತುಂಬಾ ಇಷ್ಟ ಆಗಿದೆ. ಆ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇವೆ.
Actor Rishabh Shetty dedicates Dadasaheb Phalke award to Puneeth Rajkumar and sk Bhagavan.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm