ಬ್ರೇಕಿಂಗ್ ನ್ಯೂಸ್
04-03-23 02:52 pm Source: news18 ಸಿನಿಮಾ
ಮಂಚು ಮನೋಜ್ ಅವರ ಎರಡನೇ ವಿವಾಹ ಇದಾಗಿದ್ದು ಮದುವೆ ಸಮಾರಂಭ ಮಂಚು ನಿಲಯದಲ್ಲಿ ಅದ್ಧೂರಿಯಾಗಿ ನೆರವೇರಿತು. ಭೂಮಾ ಮೌನಿಕಾ ರೆಡ್ಡಿ ಮಂಚು ಮನೋಜ್ ಸಪ್ತಪದಿ ತುಳಿದಿದ್ದಾರೆ. ಮದುವೆ ಫೋಟೋಗಳು ಇದೀಗ ಸಖತ್ ವೈರಲ್ ಆಗುತ್ತಿವೆ. ಮಾರ್ಚ್ 3 ರಂದು ನಡೆದ ಅದ್ಧೂರಿ ಕಲ್ಯಾಣದಲ್ಲಿ ಮಂಚು ಮನೋಜ್- ಭೂಮಾ ಮೌನಿಕಾ ರೆಡ್ಡಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರಿಗೂ ಇದು 2ನೇ ಮದುವೆ ಆಗಿದೆ. ಇಬ್ಬರೂ ತಮ್ಮ ಜೀವನದಲ್ಲಿ ಏಳು ಹೆಜ್ಜೆ ಇಡುತ್ತಾ ಹೊಸ ಅಧ್ಯಾಯವನ್ನು ಪ್ರಾರಂಭಿಸಿದ್ದಾರೆ. ಮನೋಜ್ ಮತ್ತು ಮೌನಿಕಾಗೆ ಶುಭಾಷಯಗಳು ಹರಿದು ಬರ್ತಿವೆ.
ಭೂಮಾ ಮೌನಿಕಾ ರೆಡ್ಡಿ ದಿವಂಗತ ಭೂಮಾ ನಾಗಿರೆಡ್ಡಿ ಮತ್ತು ಶೋಭಾ ರೆಡ್ಡಿ ಅವರ 2ನೇ ಪುತ್ರಿಯಾಗಿದ್ದಾರೆ. ಮೌನಿಕಾಳನ್ನು ಪ್ರೀತಿಸುತ್ತಿದ್ದ ಮಂಚು ಮನೋಜ್ ಈಗ ಅವಳಿಗೆ ಮೂರು ಗಂಟು ಹಾಕಿದ್ದಾರೆ. ಈ ಜೋಡಿಗೆ ಅನೇಕ ಸಿನಿ ಮತ್ತು ರಾಜಕೀಯ ಗಣ್ಯರು ಶುಭ ಕೋರುತ್ತಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಮಂಚು ಮನೋಜ್ ಮದುವೆ ಸುದ್ದಿ ಟ್ರೆಂಡಿಂಗ್ ಆಗಿತ್ತು. ಮೋಹನ್ ಬಾಬು ಈ ಮದುವೆ ಬೇಡ, ಮದುವೆಗೆ ನಾನು ಬರೋದಿಲ್ಲ ಎನ್ನುತ್ತಿದ್ದಾರೆ ಎಂದು ಸುದ್ದಿ ಹರಡಿತ್ತು. ಆದ್ರೆ ಮಹನ್ ಬಾಬು ಅವರು ತಮ್ಮ ಕಿರಿಯ ಪುತ್ರ ಮನೋಜ್ ಮದುವೆಯನ್ನು ಬಹಳ ಅದ್ಧೂರಿಯಾಗೇ ಮಾಡಿದ್ದಾರೆ.



ಭೂಮಾ ಮೌನಿಕಾ ರೆಡ್ಡಿ ಟಿಡಿಪಿ ನಾಯಕಿ ಭೂಮಾ ನಾಗಿರೆಡ್ಡಿ ಅವರ ಮಗಳಾಗಿರುವುದರಿಂದ ಅವರನ್ನು ಸೊಸೆಯಾಗಿ ಸ್ವೀಕರಿಸಲು ಮೋಹನ್ ಬಾಬು ಒಪ್ಪಲಿಲ್ಲ ಎಂಬ ವರದಿಗಳು ಹರಡಿದ್ದವು. ಆದರೆ ಮನೋಜ್ ಮದುವೆಯ ಫೋಟೋಗಳೊಂದಿಗೆ ಆ ಸುದ್ದಿಗಳೆಲ್ಲವೂ ಸುಳ್ಳು ಎಂಬುದು ಸ್ಪಷ್ಟವಾಗಿದೆ. ಈ ಹಿಂದೆ 2015 ರಲ್ಲಿ ಹೈದರಾಬಾದ್ನ ಪ್ರಣತಿ ರೆಡ್ಡಿ ಅವರನ್ನು ಮದುವೆಯಾಗಿದ್ದ ಮಂಚು ಮನೋಜ್, 4 ವರ್ಷಗಳ ಕಾಲ ಒಟ್ಟಿಗೆ ಇದ್ದರು. ಬಳಿಕ 2019 ರಲ್ಲಿ ವಿಚ್ಛೇದನ ಪಡೆದರು. ವೈಯಕ್ತಿಕ ಕಾರಣಗಳಿಂದ ಮಂಚು ಮನೋಜ್ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆದಿದ್ದಾರೆ. ಇದೀಗ ಮೌನಿಕಾ ಜೊತೆ ಮಂಚು ಮನೋಜ್ ಹೊಸ ಬಾಂಧವ್ಯಕ್ಕೆ ಕಾಲಿಟ್ಟಿದ್ದಾರೆ.



ಮೊದಲ ಪತ್ನಿಗೆ ವಿಚ್ಛೇದನ ನೀಡಿದ ಮನೋಜ್ 2ನೇ ಮದುವೆಗೆ ರೆಡಿಯಾಗುತ್ತಿರುವುದು ಭಾರೀ ಸುದ್ದಿಯಾಗಿತ್ತು. ಈ ಬಗ್ಗೆ ಅನೇಕ ವದಂತಿಗಳು ಹಬ್ಬಿದ್ದವು. ಆದರೆ ಅಂತಿಮವಾಗಿ ಮನೋಜ್-ಮೌನಿಕಾ ಮದುವೆಯ ಬಂಧದಿಂದ ಹೊಸ ಪ್ರಯಾಣವನ್ನು ಪ್ರಾರಂಭಿಸಿದ್ದು, ಅನೇಕರು ನವ ಜೋಡಿಗೆ ಶುಭಕೋರಿದ್ದಾರೆ.
Mohan Babu attended manchu manoj wedding with-bhuma mounika reddy.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm