ಬ್ರೇಕಿಂಗ್ ನ್ಯೂಸ್
14-03-23 01:21 pm Source: news18 ಸಿನಿಮಾ
ಪುನೀತ್ ರಾಜ್ಕುಮಾರ್ ಅವರ ಕನಸಾಗಿದ್ದ ಗಂಧದ ಗುಡಿ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಯಶಸ್ವಿಯಾಗಿ ತೆರೆ ಮೇಲೆ ತಂದರು. ಜನರು ಕೂಡ ಅಷ್ಟೇ ಪ್ರೀತಿಯಿಂದ ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಮೆಚ್ಚಿಕೊಂಡ್ರು. ಕಳೆದ ವರ್ಷ ಅಕ್ಟೋಬರ್ 29ರಂದು ಗಂಧದ ಗುಡಿ ಸಿನಿಮಾ ತೆರೆ ಕಂಡಿತ್ತು. ಕಳೆದ ವರ್ಷ ಅಕ್ಟೋಬರ್ 29ಕ್ಕೆ ಪುನೀತ್ ನಿಧನರಾಗಿ 1 ವರ್ಷಗಳೇ ಕಳದು ಹೋಗಿದೆ. ಪುಣ್ಯ ಸ್ಮರಣೆಯ ಅಂಗವಾಗಿ ಗಂಧದ ಗುಡಿ ಸಿನಿಮಾವನ್ನು ರಿಲೀಸ್ ಮಾಡಲಾಯ್ತು.
ಸಿನಿಮಾ ಕೂಡ ಯಶಸ್ವಿ ಪ್ರದರ್ಶನ ಕಂಡಿತು. ಪುನೀತ್ ಕೊನೆಯ ಸಿನಿಮಾ ಎಂದು ಅಭಿಮಾನಿಗಳು ಅಷ್ಟೇ ಅಲ್ಲದೇ ಅನೇಕ ಗಣ್ಯರು, ರಾಜಕಾರಣಿಗಳು ಕೂಡ ಸಿನಿಮಾ ನೋಡಿದ್ರ. ನಾಡು-ನುಡಿಯ ಬಗ್ಗೆ ಪುನೀತ್ ರಾಜ್ಕುಮಾರ್ ಅವರಿಗೆ ಇದ್ದ ಅಭಿಮಾನವನ್ನು ಕೊಂಡಾಡಿದ್ರು,. ಗಂಧದ ಗುಡಿ ಸಾಕ್ಷ್ಯಚಿತ್ರ ರಿಲೀಸ್ ಆಗಿ ಕೆಲ ತಿಂಗಳುಗಳೇ ಕಳೆದು ಹೋಗಿದೆ. ಇಷ್ಟು ದಿನವಾದ್ರೂ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಒಟಿಟಿಯಲ್ಲಿ ರಿಲೀಸ್ ಮಾಡುವ ಬಗ್ಗೆ ಘೋಷಣೆ ಮಾಡಿರಲಿಲ್ಲ.


ಯಾವಾಗ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ಬರುತ್ತೆ ಎಂದು ಅಭಿಮಾನಿಗಳು ಕಾಯ್ತಿದ್ರು. ಕೊನೆಗೂ ಕಾಲ ಕೂಡಿ ಬಂದಿದ್ದು, ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನವೇ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಇಂದು (ಮಾರ್ಚ್ 14) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಕೂಡ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ತಮ್ಮ ಹುಟ್ಟುಹಬ್ಬದ ದಿನ ಅಪ್ಪು ಗಂಧದ ಗುಡಿ ಸಿನಿಮಾದ ಒಟಿಟಿ ರಿಲೀಸ್ ದಿನಾಂಕವನ್ನು ಘೋಷಿಸಿದ್ದು, ಪಿಆರ್ಕೆ ಪ್ರೊಡೆಕ್ಷನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.


ಮಾರ್ಚ್ 17ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಗಂಧದ ಗುಡಿ ರಿಲೀಸ್ ಆಗಲಿದೆ. ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನ ಅಭಿಮಾನಿಗಳು ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. ಥಿಯೇಟರ್ನಲ್ಲಿ ಪುನೀತ್ ಕೊನೆಯ ಸಿನಿಮಾ ಗಂಧದ ಗುಡಿಯನ್ನು ಮಿಸ್ ಮಾಡಿಕೊಂಡವರು ಇದೀಗ ಒಟಿಟಿಯಲ್ಲಿ ನೋಡಿ ಖುಷಿ ಪಡಬಹುದಾಗಿದೆ. ಮಾರ್ಚ್ 17ರಂದು ಪವರ್ ಸ್ಟಾರ್ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಕೂಡ ಕಾಯ್ತಿದ್ದಾರೆ.
Puneeth Rajkumar birthday is on march 17 Gandhad Gudi movie release in ott.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am