ಬ್ರೇಕಿಂಗ್ ನ್ಯೂಸ್
14-03-23 01:21 pm Source: news18 ಸಿನಿಮಾ
ಪುನೀತ್ ರಾಜ್ಕುಮಾರ್ ಅವರ ಕನಸಾಗಿದ್ದ ಗಂಧದ ಗುಡಿ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಯಶಸ್ವಿಯಾಗಿ ತೆರೆ ಮೇಲೆ ತಂದರು. ಜನರು ಕೂಡ ಅಷ್ಟೇ ಪ್ರೀತಿಯಿಂದ ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಮೆಚ್ಚಿಕೊಂಡ್ರು. ಕಳೆದ ವರ್ಷ ಅಕ್ಟೋಬರ್ 29ರಂದು ಗಂಧದ ಗುಡಿ ಸಿನಿಮಾ ತೆರೆ ಕಂಡಿತ್ತು. ಕಳೆದ ವರ್ಷ ಅಕ್ಟೋಬರ್ 29ಕ್ಕೆ ಪುನೀತ್ ನಿಧನರಾಗಿ 1 ವರ್ಷಗಳೇ ಕಳದು ಹೋಗಿದೆ. ಪುಣ್ಯ ಸ್ಮರಣೆಯ ಅಂಗವಾಗಿ ಗಂಧದ ಗುಡಿ ಸಿನಿಮಾವನ್ನು ರಿಲೀಸ್ ಮಾಡಲಾಯ್ತು.
ಸಿನಿಮಾ ಕೂಡ ಯಶಸ್ವಿ ಪ್ರದರ್ಶನ ಕಂಡಿತು. ಪುನೀತ್ ಕೊನೆಯ ಸಿನಿಮಾ ಎಂದು ಅಭಿಮಾನಿಗಳು ಅಷ್ಟೇ ಅಲ್ಲದೇ ಅನೇಕ ಗಣ್ಯರು, ರಾಜಕಾರಣಿಗಳು ಕೂಡ ಸಿನಿಮಾ ನೋಡಿದ್ರ. ನಾಡು-ನುಡಿಯ ಬಗ್ಗೆ ಪುನೀತ್ ರಾಜ್ಕುಮಾರ್ ಅವರಿಗೆ ಇದ್ದ ಅಭಿಮಾನವನ್ನು ಕೊಂಡಾಡಿದ್ರು,. ಗಂಧದ ಗುಡಿ ಸಾಕ್ಷ್ಯಚಿತ್ರ ರಿಲೀಸ್ ಆಗಿ ಕೆಲ ತಿಂಗಳುಗಳೇ ಕಳೆದು ಹೋಗಿದೆ. ಇಷ್ಟು ದಿನವಾದ್ರೂ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಒಟಿಟಿಯಲ್ಲಿ ರಿಲೀಸ್ ಮಾಡುವ ಬಗ್ಗೆ ಘೋಷಣೆ ಮಾಡಿರಲಿಲ್ಲ.


ಯಾವಾಗ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ಬರುತ್ತೆ ಎಂದು ಅಭಿಮಾನಿಗಳು ಕಾಯ್ತಿದ್ರು. ಕೊನೆಗೂ ಕಾಲ ಕೂಡಿ ಬಂದಿದ್ದು, ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನವೇ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಇಂದು (ಮಾರ್ಚ್ 14) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಕೂಡ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ತಮ್ಮ ಹುಟ್ಟುಹಬ್ಬದ ದಿನ ಅಪ್ಪು ಗಂಧದ ಗುಡಿ ಸಿನಿಮಾದ ಒಟಿಟಿ ರಿಲೀಸ್ ದಿನಾಂಕವನ್ನು ಘೋಷಿಸಿದ್ದು, ಪಿಆರ್ಕೆ ಪ್ರೊಡೆಕ್ಷನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.


ಮಾರ್ಚ್ 17ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಗಂಧದ ಗುಡಿ ರಿಲೀಸ್ ಆಗಲಿದೆ. ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನ ಅಭಿಮಾನಿಗಳು ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. ಥಿಯೇಟರ್ನಲ್ಲಿ ಪುನೀತ್ ಕೊನೆಯ ಸಿನಿಮಾ ಗಂಧದ ಗುಡಿಯನ್ನು ಮಿಸ್ ಮಾಡಿಕೊಂಡವರು ಇದೀಗ ಒಟಿಟಿಯಲ್ಲಿ ನೋಡಿ ಖುಷಿ ಪಡಬಹುದಾಗಿದೆ. ಮಾರ್ಚ್ 17ರಂದು ಪವರ್ ಸ್ಟಾರ್ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಕೂಡ ಕಾಯ್ತಿದ್ದಾರೆ.
Puneeth Rajkumar birthday is on march 17 Gandhad Gudi movie release in ott.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm