ಬ್ರೇಕಿಂಗ್ ನ್ಯೂಸ್
14-03-23 01:21 pm Source: news18 ಸಿನಿಮಾ
ಪುನೀತ್ ರಾಜ್ಕುಮಾರ್ ಅವರ ಕನಸಾಗಿದ್ದ ಗಂಧದ ಗುಡಿ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಯಶಸ್ವಿಯಾಗಿ ತೆರೆ ಮೇಲೆ ತಂದರು. ಜನರು ಕೂಡ ಅಷ್ಟೇ ಪ್ರೀತಿಯಿಂದ ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಮೆಚ್ಚಿಕೊಂಡ್ರು. ಕಳೆದ ವರ್ಷ ಅಕ್ಟೋಬರ್ 29ರಂದು ಗಂಧದ ಗುಡಿ ಸಿನಿಮಾ ತೆರೆ ಕಂಡಿತ್ತು. ಕಳೆದ ವರ್ಷ ಅಕ್ಟೋಬರ್ 29ಕ್ಕೆ ಪುನೀತ್ ನಿಧನರಾಗಿ 1 ವರ್ಷಗಳೇ ಕಳದು ಹೋಗಿದೆ. ಪುಣ್ಯ ಸ್ಮರಣೆಯ ಅಂಗವಾಗಿ ಗಂಧದ ಗುಡಿ ಸಿನಿಮಾವನ್ನು ರಿಲೀಸ್ ಮಾಡಲಾಯ್ತು.
ಸಿನಿಮಾ ಕೂಡ ಯಶಸ್ವಿ ಪ್ರದರ್ಶನ ಕಂಡಿತು. ಪುನೀತ್ ಕೊನೆಯ ಸಿನಿಮಾ ಎಂದು ಅಭಿಮಾನಿಗಳು ಅಷ್ಟೇ ಅಲ್ಲದೇ ಅನೇಕ ಗಣ್ಯರು, ರಾಜಕಾರಣಿಗಳು ಕೂಡ ಸಿನಿಮಾ ನೋಡಿದ್ರ. ನಾಡು-ನುಡಿಯ ಬಗ್ಗೆ ಪುನೀತ್ ರಾಜ್ಕುಮಾರ್ ಅವರಿಗೆ ಇದ್ದ ಅಭಿಮಾನವನ್ನು ಕೊಂಡಾಡಿದ್ರು,. ಗಂಧದ ಗುಡಿ ಸಾಕ್ಷ್ಯಚಿತ್ರ ರಿಲೀಸ್ ಆಗಿ ಕೆಲ ತಿಂಗಳುಗಳೇ ಕಳೆದು ಹೋಗಿದೆ. ಇಷ್ಟು ದಿನವಾದ್ರೂ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಒಟಿಟಿಯಲ್ಲಿ ರಿಲೀಸ್ ಮಾಡುವ ಬಗ್ಗೆ ಘೋಷಣೆ ಮಾಡಿರಲಿಲ್ಲ.


ಯಾವಾಗ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ಬರುತ್ತೆ ಎಂದು ಅಭಿಮಾನಿಗಳು ಕಾಯ್ತಿದ್ರು. ಕೊನೆಗೂ ಕಾಲ ಕೂಡಿ ಬಂದಿದ್ದು, ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನವೇ ಗಂಧದ ಗುಡಿ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಇಂದು (ಮಾರ್ಚ್ 14) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಕೂಡ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ತಮ್ಮ ಹುಟ್ಟುಹಬ್ಬದ ದಿನ ಅಪ್ಪು ಗಂಧದ ಗುಡಿ ಸಿನಿಮಾದ ಒಟಿಟಿ ರಿಲೀಸ್ ದಿನಾಂಕವನ್ನು ಘೋಷಿಸಿದ್ದು, ಪಿಆರ್ಕೆ ಪ್ರೊಡೆಕ್ಷನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.


ಮಾರ್ಚ್ 17ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಗಂಧದ ಗುಡಿ ರಿಲೀಸ್ ಆಗಲಿದೆ. ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನ ಅಭಿಮಾನಿಗಳು ಅಪ್ಪು ಕೊನೆಯ ಸಿನಿಮಾವನ್ನು ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. ಥಿಯೇಟರ್ನಲ್ಲಿ ಪುನೀತ್ ಕೊನೆಯ ಸಿನಿಮಾ ಗಂಧದ ಗುಡಿಯನ್ನು ಮಿಸ್ ಮಾಡಿಕೊಂಡವರು ಇದೀಗ ಒಟಿಟಿಯಲ್ಲಿ ನೋಡಿ ಖುಷಿ ಪಡಬಹುದಾಗಿದೆ. ಮಾರ್ಚ್ 17ರಂದು ಪವರ್ ಸ್ಟಾರ್ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಕೂಡ ಕಾಯ್ತಿದ್ದಾರೆ.
Puneeth Rajkumar birthday is on march 17 Gandhad Gudi movie release in ott.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm