ನಿಶ್ಚಿತಾರ್ಥ ಮಾಡಿಕೊಂಡ ಕಿರುತೆರೆಯ ಖ್ಯಾತ ನಟಿ ಚೈತ್ರ ರೆಡ್ಡಿ!!

24-10-20 11:07 am       Headline Karnataka News Network   ಸಿನಿಮಾ

ಅವನು ಮತ್ತು ಶ್ರಾವಣಿ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರ ಮನೆಮಾತಾಗಿದ್ದ ಚೈತ್ರಾ ಇತ್ತೀಚಿಗೆ ಬಹುಕಾಲದ ಗೆಳೆಯ ಮತ್ತು ಛಾಯಾಗ್ರಾಹಕ ರಾಕೇಶ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ

ಬೆಂಗಳೂರು, ಅಕ್ಟೋಬರ್ .24 : 'ಅವನು ಮತ್ತು ಶ್ರಾವಣಿ' ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಲೋಕಕ್ಕೆ ಪಾದಾರ್ಪಣೆ ಮಾಡಿದ ಚೈತ್ರಾ ಅಕ್ಟೋಬರ್ 23 ರಂದು ಆಪ್ತರ ಸಮ್ಮುಖದಲ್ಲಿ ತಮ್ಮ ಬಹುಕಾಲದ ಗೆಳೆಯ ಮತ್ತು ಛಾಯಾಗ್ರಾಹಕ ರಾಕೇಶ್  ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಮೂಲತಃ ಆಂಧ್ರ ಪ್ರದೇಶದ ಚೆಲುವೆ ಚೈತ್ರಾ ಕನ್ನಡದಲ್ಲಿ ಮಾತ್ರವಲ್ಲದೇ ತಮಿಳು ಧಾರಾವಾಹಿಗಳಲ್ಲಿಯೂ ಅಭಿನಯಿಸುತ್ತಾರೆ. ರಾಕೇಶ್‌ ಛಾಯಾಗ್ರಯಕ ಹಾಗೂ ಕಾರ್ಪೋರೇಟ್ ಜಾಹೀರಾತುಗಳನ್ನು ನಿರ್ದೇಶಿಸುತ್ತಾರೆ. 

ಸರಳವಾಗಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದವರು ಮತ್ತು ತೀರಾ ಆಪ್ತರು ಮಾತ್ರ ಭಾಗಿಯಾಗಿದ್ದರು. ಚೈತ್ರಾ ಮತ್ತು ರಾಕೇಶ್ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇಬ್ಬರ ನಿಶ್ಚಿತಾರ್ಥ ಸಮಾರಂಭದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಶುಭಹಾರೈಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಾಕೇಶ್ ಜೊತೆ ಫೋಟೋ ಶೇರ್ ಮಾಡುವ ಮೂಲಕ ಪ್ರೀತಿಯ ಸುಳಿವು ನೀಡಿದ್ದ ಚೈತ್ರ ಲಾಕ್ ಡೌನ್ ಸಮಯದಲ್ಲಿ ರಾಕೇಶ್ ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಇದೀಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅಧಿಕೃತವಾಗಿ ಬಹಿರಂಗವಾಗಿದೆ.