ಬ್ರೇಕಿಂಗ್ ನ್ಯೂಸ್
27-03-23 11:50 am Source: news18 ಸಿನಿಮಾ
ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಎಲ್ಲಿಗೆ ಬಂದಿದೆ. ಸಿನಿಮಾದ ರಿಲೀಸ್ ಹಂತಕ್ಕೆ ಬಂದಿದಿಯಾ? ಧ್ರುವ ಸರ್ಜಾ ಡಬ್ಬಿಂಗ್ ಮಾಡಿರೋದು ಇದೇ ಚಿತ್ರಕ್ಕೆ ಅಲ್ವೇ? ಈ ಎಲ್ಲ ಪ್ರಶ್ನೆಗೆ ಉತ್ತರ ಹೌದು ಅಂತಲೇ ಹೇಳಬೇಕು. ಯಾಕೆಂದ್ರೆ, ರಾಜಮಾರ್ತಾಂಡ ಸಿನಿಮಾ ಬಹುತೇಕ ರಿಲೀಸ್ಗೆ ರೆಡಿ ಆಗಿದೆ. ಚಿರಂಜೀವಿ ಸರ್ಜಾ ಅವರು ತಮ್ಮ ರಾಜಮಾರ್ತಾಂಡ ಸಿನಿಮಾದ ಬಗ್ಗೆ ತುಂಬಾನೇ ಪ್ರೀತಿ ಇಟ್ಟುಕೊಂಡಿದ್ದರು. ತುಂಬಾ ಚೆನ್ನಾಗಿಯೇ ಸಿನಿಮಾ ಬರುತ್ತಿದೆ ಅಂತಲೂ ಹೇಳಿಕೊಂಡಿದ್ದರು. ಅದೇ ರೀತಿನೇ ಸಿನಿಮಾದ ಶೂಟಿಂಗ್ ಅನ್ನೂ ಪೂರ್ಣಗೊಳಿಸಿದ್ದರು. ಆದರೆ ಅತಿ ಚಿಕ್ಕ ವಯಸ್ಸಿನಲ್ಲಿಯೇ ಚಿರು ಎಲ್ಲರನ್ನೂ ಅಗಲಿರೋದು ಈಗಲೂ ಮಾಸದ ನೋವಾಗಿ ಉಳಿದಿದೆ.


ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾ ಚೆನ್ನಾಗಿಯೇ ಬಂದಿದೆ. ಈ ಚಿತ್ರದ ಡಬ್ಬಿಂಗ್ ಒಂದೇ ಬಾಕಿಯಿತ್ತು. ಆ ಕೆಲಸವನ್ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೂರ್ಣಗೊಳಿಸಿ ಚಿತ್ರ ತಂಡಕ್ಕೆ ಸಪೋರ್ಟ್ ಮಾಡಿದ್ದಾರೆ. ಅಣ್ಣನ ಚಿತ್ರಕ್ಕೆ ಡಬ್ಬಿಂಗ್ ಮಾಡೋದೇ ಖುಷಿನೇ. ಆದರೆ ಅಣ್ಣನಿಲ್ಲದೇ ಹೇಗೆ ಅನ್ನೋ ನೋವು ಕಾಡಿದ್ದು ಇದೆ. ಅದು ಡಬ್ಬಿಂಗ್ ವೇಳೆ ಇನ್ನೂ ಹೆಚ್ಚಾಗಿತ್ತು. ಆ ಕಾರಣಕ್ಕೇನೆ ಡಬ್ಬಿಂಗ್ ಮಾಡೋವಾಗ ಅಣ್ಣನನ್ನ ನೆನೆದು ಧ್ರುವ ತುಂಬಾ ಭಾವುಕರಾಗಿದ್ದರು.


ರಾಜಮಾರ್ತಾಂಡ ಸಿನಿಮಾದ ಶೂಟಿಂಗ್ ಡಬ್ಬಿಂಗ್ ಹೀಗೆ ಎಲ್ಲವೂ ಈಗ ಪೂರ್ಣ ಆಗಿದೆ. ಸದ್ಯ ಚಿತ್ರಕ್ಕೆ ಡಿ.ಟಿ.ಎಸ್. ಕೆಲಸ ನಡೆಯುತ್ತಿದೆ. ಇದೇ ಏಪ್ರಿಲ್ನಲ್ಲಿ ಸಿನಿಮಾ ತೆರೆಗೆ ತರೋ ಪ್ಲಾನ್ ಅನ್ನ ಸಿನಿಮಾ ತಂಡ ಹಾಕಿಕೊಂಡಿದೆ. ರಾಜಮಾರ್ತಾಂಡ ಚಿತ್ರದಲ್ಲಿ ಚಿರುಗೆ ಮೇಘಶ್ರೀ ಮತ್ತು ದೀಪ್ತಿ ಸಾತಿ ಜೋಡಿ ಆಗಿದ್ದಾರೆ. ಇದೇ ಚಿತ್ರದಲ್ಲಿ ಟಗರು ಚಿತ್ರ ಖ್ಯಾತಿಯ ನಟಿ ತ್ರಿವೇಣಿ ಕೂಡ ಅಭಿನಯಿಸಿದ್ದಾರೆ.


ರಾಜಮಾರ್ತಾಂಡ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ದೇವರಾಜ್, ಚಿಕ್ಕಣ್ಣ, ಭಜರಂಗಿ ಲೋಕಿ, ಶಂಕರ್ ಅಶ್ವಥ್ ಇವರೆಲ್ಲ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿರ್ದೇಶಕ ಕೆ. ರಾಮನಾರಾಯಣ್ ಈ ಚಿತ್ರವನ್ನ ಡೈರೆಕ್ಟ್ ಮಾಡಿದ್ದಾರೆ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ.
kannada actor chiranjeevi sarja movie rajamarthand almost ready to release.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm