ಬ್ರೇಕಿಂಗ್ ನ್ಯೂಸ್
04-04-23 01:55 pm Source: news18 ಸಿನಿಮಾ
ಪ್ರಭುದೇವ ಅವರ ಸ್ಪಷ್ಟ ಕನ್ನಡ
ಯಾರೇ ಆದರೂ ಪ್ರಭುದೇವ ಅವರ ಸಿನಿಮಾ, ಡ್ಯಾನ್ಸ್, ನಿರ್ದೇಶನವನ್ನು ನೋಡಿದ್ದರೆ ಅವರ ಪ್ರತಿಭೆಯನ್ನು ಮೆಚ್ಚುತ್ತಾರೆ. ಅವರ ಟ್ಯಾಲೆಂಟ್ಗೆ ಸಲಾಂ ಎನ್ನುತ್ತಾರೆ. ಆದರೆ ಅವರ ಕನ್ನಡ ಕೇಳಿದ್ರೆ ಕನ್ನಡಿಗರಂತೂ ಮೆಚ್ಚಿ ತಲೆದೂಗುತ್ತಾರೆ. ಇದರಲ್ಲಿ ಡೌಟೇ ಇಲ್ಲ.
ನೀವಿಷ್ಟು ಚಂದ ಕನ್ನಡ ಮಾತಾಡ್ತೀರಾ?
ಕಾಲಿವುಡ್ ನಟ ಪ್ರಭುದೇವ ಅವರು ವೀಕೆಂಡ್ ವಿತ್ ರಮೇಶ್ನಲ್ಲಿ ಎರಡನೇ ವಾರದ ಅತಿಥಿಯಾಗಿ ಭಾಗವಹಿಸಿದ್ದಾರೆ. ನಟನ ನಿರರ್ಗಳವಾಗಿ ಕನ್ನಡ ಮಾತನಾಡುವುದನ್ನು ಕೇಳಿದ ಕನ್ನಡ ಕಿರುತೆರೆ ಪ್ರೇಕ್ಷಕರು ಹಾಗೂ ವೀಕೆಂಡ್ ವಿತ್ ರಮೇಶ್ ಶೋ ಅಭಿಮಾನಿಗಳು ಶಾಕ್ ಆಗಿದ್ದಾರೆ. ಇವರಿಗೆ ಇಷ್ಟೊಂದು ಚೆನ್ನಾಗಿ ಕನ್ನಡ ಮಾತನಾಡಲು ಬರುತ್ತದೆಯೇ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚಿಸುತ್ತಿದ್ದಾರೆ.
ವೀಕೆಂಡ್ ವಿತ್ ರಮೇಶ್ ನೋಡೋ ತನಕ ಈ ಸತ್ಯ ಗೊತ್ತಿರಲಿಲ್ಲ
ನಿಜ ಹೇಳ್ತೀವಿ ಕೇಳಿ. ವೀಕೆಂಡ್ ವಿತ್ ರಮೇಶ್ ಶೋ ನೋಡುವ ತನಕವೂ ಇವರು ಇಷ್ಟು ಚಂದ ಕನ್ನಡ ಮಾತನಾಡುತ್ತಾರೆ ಎನ್ನುವ ವಿಚಾರ ನಮಗೆ ಗೊತ್ತಿರಲಿಲ್ಲ ಎಂದು ನೆಟ್ಟಿಗರು ಪ್ರೋಮೋಗೆ ಕಮೆಂಟ್ ಮಾಡಿದ್ದಾರೆ. ಅಚ್ಚುಕಟ್ಟಾಗಿ ಕನ್ನಡ ಮಾತನಾಡಿದ್ದಕ್ಕೆ ಜನರು ಪ್ರಭುದೇವ ಅವರನ್ನು ಹೊಗಳುತ್ತಿದ್ದಾರೆ.
ಅಪ್ಪಟ ಕನ್ನಡದ ಕೂಸು
ಸ್ಯಾಂಡಲ್ವುಡ್ ನಿರ್ದೇಶಕ ಯೋಗರಾಜ್ ಭಟ್ ಅವರೂ ಈ ಶೋದಲ್ಲಿ ಬಂದಿದ್ದಾರೆ. ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭು ದೇವ ಅವರ ಕುರಿತು ಮಾತನಾಡಿದ್ದಾರೆ. ಮೂಗೂರಿನ ಅಪ್ಪಟ ಕನ್ನಡದ ಕೂಸು ಪ್ರಭು ದೇವ ಅನ್ನೋದನ್ನ ಕೂಡ ಹೇಳಿಕೊಂಡಿದ್ದಾರೆ.
ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟುಬೇಕು ಅನ್ನುವ ಅಣ್ಣಾವ್ರ ಹಾಡಿಗೆ ಪ್ರಭು ದೇವ, ಮೂಗೂರು ಸುಂದರಂ, ರಮೇಶ್ ಅರವಿಂದ್ ಅವರು ಡ್ಯಾನ್ಸ್ ಮಾಡಿದ್ದಾರೆ. ತುಂಬಾ ವಿಶೇಷವಾಗಿ ಇಲ್ಲಿ ಇನ್ನೂ ಒಂದು ಘಟನೆಯ ಝಲಕ್ ಕೂಡ ಸಿಗುತ್ತದೆ.
ಮೊದಲ ಎಪಿಸೋಡ್ನಲ್ಲಿ ಟ್ರೋಲ್ ಆದ ರಮ್ಯಾ
ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಮೊದಲ ಅತಿಥಿಯಾಗಿದ್ದ ನಟಿ ರಮ್ಯಾ ಅವರು ಕಾರ್ಯಕ್ರಮದಲ್ಲಿ ಕನ್ನಡಕ್ಕಿಂತ ಹೆಚ್ಚು ಇಂಗ್ಲಿಷ್ ಬಳಸಿ ಟ್ರೋಲ್ ಆಗಿದ್ದರು. ಪ್ರೋಗ್ರಾಂ ನೋಡಿದವರೆಲ್ಲ ನಟಿಯನ್ನು ಟ್ರೋಲ್ ಮಾಡಿದ್ದರು. ಕನ್ನಡದವರೇ ಆದ ರಮ್ಯಾಗೆ ಕನ್ನಡ ಬರಲ್ವಾ ಎಂದು ಬಹಳಷ್ಟು ಜನರು ರಮ್ಯಾ ಅವರ ನಡೆಗೆ ವಿರೋಧ ವ್ಯಕ್ತಪಡಿಸಿದ್ದರು. ಈಗ ರಮ್ಯಾ ನಂತರ ಪ್ರಭುದೇವ ಅವರು ಕಾರ್ಯಕ್ರಮಕ್ಕೆ ಬಂದಿರುವುದು, ಅದರಲ್ಲೂ ನಟ ಕನ್ನಡ ಮಾತನಾಡಿರುವುದು ವ್ಯಾಪಕ ಮೆಚ್ಚುಗೆ ಗಳಿಸಿದೆ.
people surprised to see tamil actor prabhu deva speak in kannada fluently on weekend with ramesh show.
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 07:32 pm
Mangalore Correspondent
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
21-10-25 08:24 pm
Mangalore Correspondent
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm