ಬ್ರೇಕಿಂಗ್ ನ್ಯೂಸ್
10-04-23 01:50 pm Source: news18 ಸಿನಿಮಾ
ದೇಶಕ್ಕೆ ದೇಶವೇ ಹೆಮ್ಮೆ ಪಟ್ಟ ಕಾಂತಾರ ಕನ್ನಡ ಮಾತ್ರ ಅಲ್ಲ, ಬೇರೆ ಬೇರೆ ಭಾಷೆಯಲ್ಲೂ ಮೋಡಿ ಮಾಡಿತ್ತು. ಕಾಂತಾರ ನೋಡಿ ಮೆಚ್ಚದವರಿಲ್ಲ. ಎಲ್ಲರೂ ರಿಷಬ್ ಶೆಟ್ಟಿಯ ಅದ್ಭುತ ನಟನೆಯನ್ನು ಹೊಗಳಿದ್ದರು. ತುಳುನಾಡಿನ ಕತೆ ವಿಶ್ವದಾದ್ಯಂತ ಸದ್ದು ಮಾಡಿತ್ತು. ಈಗ ತುಳು ಭಾಷೆಯಲ್ಲೇ ಸಿನಿಮಾ ಬರ್ತಿದೆ. ಸ್ಟಾರ್ ಸುವರ್ಣದಲ್ಲಿ ಏಪ್ರಿಲ್ 15 ರಂದು ಮಧ್ಯಾಹ್ನ 1 ಗಂಟೆಗೆ ಸಿನಿಮಾ ಪ್ರಸಾರವಾಗಲಿದೆ.


ಏಪ್ರಿಲ್ 15ರಂದು ತುಳುವರ ಹೊಸ ವರ್ಷ ದಿನ. ಅಂದೇ ಸ್ಟಾರ್ ಸುವರ್ಣದಲ್ಲಿ ಸಿನಿಮಾ ಪ್ರಸಾರವಾಗುತ್ತಿದೆ. ಈ ಸುದ್ದಿ ಕೇಳಿ ತುಳು ಜನ ಖುಷಿಯಾಗಿದ್ದಾರೆ. ವಾವ್ ನಿಜಕ್ಕೂ ಖುಷಿಯ ವಿಚಾರ.ತುಳು ಭಾಷೆಯಲ್ಲೇ ಸಿನಿಮಾ ಪ್ರಸಾರ ಆಗ್ತಾ ಇರೋದಕ್ಕೆ. ಇದೇ ತರ ಹೆಚ್ಚೆಚ್ಚು ತುಳು ಸಿನಿಮಾಗಳನ್ನ ಪ್ರಸಾರ ಮಾಡಿ ಎಂದು ಕೆಲ ಅಭಿಮಾನಿಗಳು ಕಾಮೆಂಟ್ ಹಾಕಿದ್ದಾರೆ.


ಕನ್ನಡದ ಬ್ಲಾಕ್ ಬಸ್ಟರ್ ಸಿನಿಮಾ ಕಾಂತಾರ ಹಲವು ದಾಖಲೆಯನ್ನು ಬ್ರೇಕ್ ಮಾಡಿದೆ. ರಿಷಬ್ ಶೆಟ್ಟಿ ನಿರ್ದೇಶನ, ಸಿನಿಮಾ ಮೇಕಿಂಗ್, ನಟನೆ ಬಗ್ಗೆ ವಿವಿಧ ಸಿನಿಮಾ ರಂಗಗಳ ಗಣ್ಯರು ಪ್ರತಿಕ್ರಿಯೆ ನೀಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 30 ರಂದು ಕನ್ನಡ, ಅಕ್ಟೋಬರ್ 14 ರಂದು ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದ್ದ ಕಾಂತಾರ ಸಿನಿಮಾ ಹಲವು ದಾಖಲೆಗಳನ್ನು ನಿರ್ಮಿಸಿತ್ತು. ಅದರಲ್ಲೂ ಸಿನಿಮಾ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಣ ಸಂಸ್ಥೆ ಹೆಂಬಾಳೆ ಫಿಲ್ಮ್ಸ್ಗೆ ಭಾರೀ ಹೆಸರನ್ನು ತಂದುಕೊಟ್ಟಿದೆ.


ಹಿಂದಿಯಲ್ಲಿ ಬಿಡುಗಡೆಯಾಗಿದ್ದ ಕಾಂತಾರ ಸಿನಿಮಾ ಹಲವು ಬಾಲಿವುಡ್ ಸಿನಿಮಾಗಳಿಗೆ ಸೆಡ್ಡು ಹೊಡೆದು ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡಿತ್ತು. ಹಲವು ಸಿನಿಮಾ ವಿಮರ್ಶಕರು ಸಿನಿಮಾ ಬಗ್ಗೆ ನಿರಂತರವಾಗಿ ಮೆಚ್ಚುಗೆ ಸೂಚಿಸಿದ್ದರು ಕಾಂತಾರ ಸಿನಿಮಾ ಕುರಿತಂತೆ ಸಂದರ್ಶನವೊಂದರಲ್ಲಿ ರಾಜಮೌಳಿ ಮಾತನಾಡಿದ್ದು, ಬಿಗ್ ಬಜೆಟ್ ಸಿನಿಮಾಗಳ ನಡುವೆ ಏಕಾಏಕಿ ಮುನ್ನುಗ್ಗಿ ಬಂದ ಕಾಂತಾರ ಸಿನಿಮಾ ಉತ್ತಮ ನಂಬರ್ ಗಳನ್ನು ಪಡೆದುಕೊಳ್ತು. ಇದು ದೊಡ್ಡ ನಂಬರ್ ಗಳನ್ನು ಗಳಿಸಲು ಬಿಗ್ ಸ್ಕೇಲ್ ಸಿನಿಮಾಗಳ ಅಗತ್ಯವಿಲ್ಲ ಎಂದು ಹೇಳಿದ್ರು.
kantara kannada film telecast in star suvarna channel in tulu language.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm