ಬ್ರೇಕಿಂಗ್ ನ್ಯೂಸ್
24-04-23 01:06 pm Source: news18 ಸಿನಿಮಾ
ಬೆಳಗ್ಗೆಯಿಂದಲೇ ಸ್ಮಾರಕಕ್ಕೆ ಅಭಿಮಾನಿಗಳ ದಂಡು ಹರಿದು ಬಂದಿದೆ. ಸ್ಮಾರಕದ ಮುಂದೆಯೇ ಅನ್ನಸಂತರ್ಪಣೆ, ಕೇಕ್ ಕತ್ತರಿಸಿದ್ದಾರೆ. ಡಾ. ರಾಜ್ಕುಮಾರ್ ಹೆಸರಿನಲ್ಲಿ ರಕ್ತದಾನ, ಅನ್ನದಾನ ಹಾಗೂ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಸಹಾಯ ಮಾಡುವ ಮೂಲಕ ಅರ್ಥಪೂರ್ಣವಾಗಿ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಆಚರಿಸುತ್ತಿದ್ದಾರೆ.
ವರನಟನ ನೆನಪು ಅಮರ
ಸೋಶಿಯಲ್ ಮೀಡಿಯಾ ಮೂಲಕ ಅನೇಕ ಸಿನಿಮಾ ಹಾಗೂ ಇತರೆ ಕ್ಷೇತ್ರದ ಗಣ್ಯರು ಕೂಡ ವರನಟ ಡಾ.ರಾಜ್ ಕುಮಾರ್ ಅವರ ನೆನಪನ್ನು ಮೆಲುಕು ಹಾಕಿದ್ದಾರೆ. ಕುಟುಂಬಸ್ಥರು ಕೂಡ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಜ್ ತೋರಿಸಿದ ಹಾದಿಯಲ್ಲಿ ದೊಡ್ಮನೆ ಕುಡಿಗಳು
ಡಾ.ರಾಜ್ ಕುಮಾರ್ ತೋರಿಸಿದ ದಾರಿಯಲ್ಲಿ ಬದುಕುತ್ತಿರುವ ಅವರ ಮಕ್ಕಳಾದ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯ ಫೋಟೋ ಹಂಚಿಕೊಂಡರು. ಅಷ್ಟೇ ಅಲ್ಲದೇ ಕರುನಾಡಿನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಕೂಡ ಮಾವನ ಫೋಟೋ ಜೊತೆ ಉತ್ತಮ ಬಹರ ಪೋಸ್ಟ್ ಮಾಡಿದ್ದಾರೆ.

ವಿಶೇಷವಾಗಿ ಶುಭಕೋರಿದ ಅಶ್ವಿನಿ
ಡಾ.ರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ವಿಶೇಷವಾಗಿ ಶುಭಕೋರಿದ ಅಶ್ವಿನಿ ಪುನೀತ್ ರಾಜ್ ಕುಮಾರ್, ಪ್ರೀತಿಯ ಮಾವನ ಸರಳತೆ ಹಾಗೂ ಅಭಿಮಾನಿಗಳ ಮೇಲಿನ ಪ್ರೀತಿಯನ್ನು ಮೆಲುಕು ಹಾಕಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ರಾಜ್ಕುಮಾರ್ ಸಿನಿ ಜೀವನದ ಸ್ಪೆಷಲ್ ಸಿನಿಮಾಗಳು
ಕನ್ನಡದಲ್ಲಿ ಬಂದ ಆಫ್ ಬೀಟ್ ಸಿನಿಮಾಗಳಲ್ಲಿ ನಾಂದಿ ಸಿನಿಮಾನೇ ಮೊದಲ ಸಿನಿಮಾ ಆಗಿತ್ತು. ರಾಜ್ಕುಮಾರ್ ಅಭಿನಯದ ಬಾಂಡ್ ಸಿನಿಮಾಗಳೂ ಏನು ಕಮ್ಮಿ ಇದ್ದವೇ? ದೊರೈ-ಭಗವಾನ್ ನಿರ್ದೇಶನದ ಈ ಬಾಂಡ್ ಸರಣಿ ಸಿನಿಮಾಗಳು ಅಣ್ಣಾವ್ರಗೆ ಭಾರೀ ದೊಡ್ಡ ಹೆಸರನ್ನ ತಂದುಕೊಟ್ಟಿವೆ. ಇಂಡಿಯನ್ ಸಿನಿಮಾರಂಗದಲ್ಲಿಯೇ ರಾಜ್ ಮೊದಲ ಬಾಂಡ್ ಸಿನಿಮಾ ಹೀರೋ ಅನ್ನೋ ಮಟ್ಟವನ್ನ ತಂದುಕೊಟ್ಟಿವೆ.

ರಾಜ್ಕುಮಾರ್ ಸಿನಿಮಾ ಜೀವನದಲ್ಲಿ ಕಸ್ತೂರಿ ನಿವಾಸ ನಿಜಕ್ಕೂ ಗ್ರೇಟ್ ಸಿನಿಮಾ ಆಗಿದೆ. ಹೊಸ ಸ್ಪರ್ಶದಿಂದ ಮತ್ತೊಮ್ಮೆ ರಿಲೀಸ್ ಆದಾಗಲೂ ಕಸ್ತೂರಿ ನಿವಾಸ ಸೂಪರ್ ಹಿಟ್ ಆಗಿತ್ತು. ಬಂಗಾರದ ಮನುಷ್ಯ ಯಾರಿಗೆ ಗೊತ್ತಿಲ್ಲ ಹೇಳಿ?
ಬಂಗಾರದ ಮನುಷ್ಯನ ಬಂಗಾರದಂತಹ ಅಭಿಮಾನಿಗಳು
ಈ ಸಿನಿಮಾ ರಾಜ್ ಜೀವನದ ವಿಶೇಷ ಸಿನಿಮಾ ಆಗಿದೆ. ಈ ಚಿತ್ರ ಬಂದಾಗ, ಅನೇಕರು ವಾಪಸ್ ತಮ್ಮ ಹಳ್ಳಿಗೆ ಹೋಗಿ ವ್ಯವಸಾಯ ಮಾಡಿರೋ ಸತ್ಯ ಈಗಲೂ ಇತಿಹಾಸ ಪುಟದಲ್ಲಿ ಹೊಳೆಯುತ್ತದೆ. ಅಷ್ಟು ವಿಶೇಷವಾದ ಸಿನಿಮಾಗಳನ್ನ ಕೊಡುತ್ತಲೇ ರಾಜ್ ಕುಮಾರ್ ಅಜರಾಮರ ಆಗಿದ್ದಾರೆ.
ರಾಜ್ಕುಮಾರ್ ಅವರ ಜನ್ಮದಿನ ಬಂತು ಅಂದ್ರೇ ಅಂದು ಕಂಠೀರವ ಸ್ಟುಡಿಯೋ ಆವರಣದಲ್ಲಿರೋ ರಾಜ್ ಸಮಾಧಿ ಬಳಿ ಹಬ್ಬದ ವಾತಾವರಣ ನಿರ್ಮಾಣ ಆಗಿರುತ್ತದೆ. ರಾಜ್ಕುಮಾರ್ ಅವರನ್ನ ದೇವರ ರೀತಿಯಲ್ಲಿ ಆರಾಧಿಸೋ ಅಭಿಮಾನಿಗಳು ತಮ್ಮ ದೇವರಿಗೆ ತಮ್ಮದೇ ರೀತಿಯಲ್ಲಿ ಗೌರವ ಸಲ್ಲಿಸುತ್ತಾರೆ.
rajkumar 94th birthday a sea of fans flocked to the memorial.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
04-07-26 08:09 pm
HK News Staffer
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
04-07-26 09:47 pm
HK News Staffer
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm
'ಡಿಜಿಟಲ್ ಅರೆಸ್ಟ್’ ಸೈಬರ್ ವಂಚಕರಿಗೆ ಅಮಾಯಕರ ಹೆಸರಲ...
04-07-26 05:58 pm
ಮಲ್ಪೆ ವಾಟರ್ ಸ್ಪೋರ್ಟ್ಸ್ ಉದ್ಯಮಿ ಸಂದೀಪ್ ಸಾಲ್ಯಾನ್...
04-07-26 03:12 pm