ಬ್ರೇಕಿಂಗ್ ನ್ಯೂಸ್
27-10-20 04:37 pm Headline Karnataka News Network ಸಿನಿಮಾ
ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.


ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm