ಬ್ರೇಕಿಂಗ್ ನ್ಯೂಸ್
02-05-23 12:55 pm Source: news18 ಸಿನಿಮಾ
ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಬ್ಬರ ಪ್ರಚಾರಕ್ಕೆ ಶಿವಣ್ಣ ನಾಂದಿ ಹಾಡಿದ್ದಾರೆ. ಸಿದ್ದರಾಮಯ್ಯ ಕ್ಷೇತ್ರ ವರುಣಾ ಸೇರಿದಂತೆ ಅನೇಕ ನಾಯಕ ಪರವಾಗಿ ಶಿವರಾಜ್ ಕುಮಾರ್ ಮತಬೇಟೆಗಿಳಿದ್ದಾರೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಿದ್ದಂತೆ ಶಿವಣ್ಣ ಫೀಲ್ಡ್ಗೆ ಇಳಿದಿದ್ದಾರೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಜೊತೆ ಶಿವಮೊಗ್ಗದ ಮೂರು ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಹುಬ್ಬಳ್ಳಿ ,ವರುಣಾ, ಶಿರಸಿ ಸೇರಿದಂತೆ ಹಲವು ಕಡೆಗಳಲ್ಲಿ ಶಿವಣ್ಣ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಸಾಗರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಪರ ಅಬ್ಬರದ ಪ್ರಚಾರ ನಡೆಸಿದ್ರು. ಇಂದು ಶಿವಣ್ಣ ರಾಹುಲ್ ಗಾಂಧಿ ಜೊತೆ ಪ್ರಚಾರದ ವೇದಿಕೆ ಹಂಚಿಕೊಳ್ಳಲಿದ್ದಾರೆ. ಜೊತೆಗೆ
ತೀರ್ಥಹಳ್ಳಿಯಲ್ಲಿ ಕಿಮ್ಮನೆ ಪರ ಮತಯಾಚನೆ ಮಾಡಲಿದ್ದಾರೆ.

ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವಣ್ಣ
ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ (Geetha Shivarajkumar) ಕಾಂಗ್ರೆಸ್ ಸೇರ್ಪಡೆ ಆಗಿದ್ದು, ಶಿವಣ್ಣ (Shivanna) ಕೂಡ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎನ್ನುವ ಮಾತುಗಳು ಕೂಡ ಕೇಳಿ ಬರ್ತಿದೆ. ಈ ಬಗ್ಗೆ ಅವರು ಮಾತನಾಡಿದ ಶಿವಣ್ಣ. ‘ಒಳ್ಳೆಯ ಕೆಲಸ ಮಾಡುವವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ ಅಷ್ಟೇ. ಭೀಮಣ್ಣ ನಮಗೆ ಸಂಬಂಧಿಕರು. ಜಗದೀಶ್ ಶೆಟ್ಟರ್ ಜೊತೆ ಒಳ್ಳೆಯ ಫ್ರೆಂಡ್ಶಿಪ್ ಇದೆ. ಆದರೆ, ರಾಜಕೀಯ ಸೇರುವ ಆಲೋಚನೆ ಇಲ್ಲ ಎಂದು ಶಿವರಾಜ್ ಕುಮಾರ್, ಗೀತಾ ಅವರೇ ಇಲ್ಲಿ ಸ್ಟಾರ ಪ್ರಚಾರಕ್ಕೂ ಎಂದು ಹೇಳಿದ್ದಾರೆ.

ಶಿವಣ್ಣ ಈ ಕ್ಷೇತ್ರಕ್ಕೆ ಶಕ್ತಿ ತುಂಬಿದ್ದಾರೆ
ಸಾಗರ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಅವರು ಶಿವಣ್ಣ ಬಗ್ಗೆ ಮಾತಾಡಿದ್ರು. ನನ್ನ ಪರ ಪ್ರಚಾರಕ್ಕೆ ಶಿವರಾಜಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ , ಮಧು ಬಂಗಾರಪ್ಪ ಮೂವರು ಬಂದಿದ್ದಾರೆ. ಅವರು ಬಂದಿರುವುದು ಬಹಳ ಖುಷಿಯಾಗಿದೆ. ನಿಜಕ್ಕೂ ಈ ಕ್ಷೇತ್ರಕ್ಕೆ ಶಕ್ತಿ ತುಂಬಿದಂತೆ ಆಗಿದೆ. ಒಂದು ಅಲೆ ಆರಂಭವಾಗಿದೆ ಈ ತನಕ ಯಾರು ಕೂಡ ಈ ಕ್ಷೇತ್ರಕ್ಕೆ ಸ್ಟಾರ್ ಪ್ರಚಾರಕರು ಬಂದಿರಲಿಲ್ಲ. ಈಗ ಪ್ರಚಾರಕ್ಕೆ ವೇಗ ಬಂದಿದೆ ಎಂದ್ರು.
ನಿರೀಕ್ಷೆಗೂ ಮೀರಿ ಜನರ ಆಗಮನ
ಶಿವರಾಜ್ ಕುಮಾರ್ ನೋಡಲು ನಿರೀಕ್ಷೆಗೂ ಮೀರಿ ಜನ ಬಂದಿದ್ದಾರೆ. ಈ ಚುನಾವಣೆ ನಿರೀಕ್ಷೆ ಹೆಚ್ಚು ಕಾಣುತ್ತಿದೆ. ನನ್ನ ಪರ ಜನರ ತಕ್ತಿ ತುಂಬಾ ಚೆನ್ನಾಗಿದೆ. ಇಂಥಾ ಚುನಾವಣೆಯನ್ನು ನಾನು 2004ರಲ್ಲಿ ಸಾಗರದಲ್ಲಿ ನೋಡಿದೆ. ಪ್ರಿಯಾಂಕಾ ಗಾಂಧಿ ಕೂಡ ಸಾಗರಕ್ಕೆ ಬರಲಿದ್ದಾರೆ ಎಂದು ಗೋಪಾಲಕೃಷ್ಣ ಹೇಳಿದ್ದಾರೆ.
actor shivaraj kumar will take the stage with rahul gandhi.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm