ಬ್ರೇಕಿಂಗ್ ನ್ಯೂಸ್
11-05-23 03:36 pm Source: news18 ಸಿನಿಮಾ
ಕಾಂತಾರ ಸಿನಿಮಾ ರಿಲೀಸ್ ಆಗಿ ತಿಂಗಳುಗಳೇ ಕಳೆದರೂ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರಿಗೆ ಪ್ರಶಂಸೆ ವ್ಯಕ್ತವಾಗುತ್ತಲೇ ಇದೆ. ಸ್ಯಾಂಡಲ್ವುಡ್ನಲ್ಲಿ ಹೊಸ ಅಲೆ ಸೃಷ್ಟಿಸಿದ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಕಾಂತಾರಕ್ಕೆ ವ್ಯಾಪಕ ಮೆಚ್ಚುಗೆ ಹರಿದುಬಂತು. ಇತ್ತೀಚೆಗೆ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ಕಾಂತಾರ ನಟ ರಿಷಬ್ ಶೆಟ್ಟಿ ಕುರಿತು ಮಾತನಾಡಿದ್ದಾರೆ. ಡಿಸೆಂಬರ್ನಲ್ಲಿ ರಿಷಬ್ ಶೆಟ್ಟಿ ಅವರನ್ನು ಭೇಟಿಯಾದ ಸಮಯದ ಕುರಿತು ನವಾಜುದ್ದೀನ್ ಪ್ರತಿಕ್ರಿಯಿಸಿದ್ದಾರೆ. ನಟ ಅವರ ಭೇಟಿಯ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ.
ಇತ್ತೀಚೆಗೆ ಪಿಂಕ್ವಿಲ್ಲಾ ಜೊತೆ ಮಾತನಾಡಿದ ನಟ ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೇರ್ ಮಾಡಿದ್ದಾರೆ. ರಿಷಬ್ ಹಾಗು ಅವರ ಸ್ನೇಹಿತರು ಥಿಯೇಟರ್ಗೆ ಬೇಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ನಮ್ಮ ಗುರುಗಳು ಸೇಮ್ ಎನ್ನುವುದು ವಿಶೇಷವಾದ ಸಂಗತಿ ಎಂದಿದ್ದಾರೆ ನವಾಜುದ್ದೀನ್ ಸಿದ್ದಿಕಿ. ನಿಮ್ಮೊಂದಿಗೆ ನಮ್ಮ ಮನೆಯಲ್ಲಿ ಸ್ವಲ್ಪ ಕ್ವಾಲಿಟಿ ಸಮಯ ಕಳೆಯಲು ಖುಷಿಯಾಗಿದೆ. ವಿಶೇಷ ಏನೆಂದರೆ ನನ್ನಲ್ಲೂ ರಿಷಬ್ ಶೆಟ್ಟಿ ಅವರಲ್ಲೂ ಬಹಳಷ್ಟು ವಿಚಾರಗಳು ಒಂದೇ ರೀತಿ ಇದೆ. ಇದರ ಬಗ್ಗೆ ನಾವು ಮಾತನಾಡುತ್ತಲೇ ಇರಬಹುದು ಎಂದಿದ್ದಾರೆ.

ಅವರು ಈಗಲೂ ಥಿಯೇಟರ್ ಜೊತೆ ಸಂಬಂಧ ಉಳಿಸಿಕೊಂಡಿದ್ದು ಅವರಿನ್ನೂ ಅವರು ನಡೆದುಬಂದ ಹಾದಿಗೆ ಆತ್ಮೀಯವಾಗಿದ್ದಾರೆ. ಅವರ ಸಂಸ್ಕೃತಿಗೆ ಹೆಚ್ಚು ಕನೆಕ್ಟ್ ಆಗಿದ್ದಾರೆ. ಅದರ ಕುರಿತು ಸಿನಿಮಾ ಕೂಡಾ ಮಾಡಿದ್ದಾರೆ. ನಮ್ಮ ಗುರುಗಳು ಒಂದೇ ಆಗಿರುವುದರಿಂದ ನಮ್ಮ ಸಂಬಂಧ ವಿಶೇಷವಾಗಿದೆ. ಈಗ ನಾವು ಸ್ನೇಹಿತರು ಎಂದಿದ್ದಾರೆ. ಅವರು ತಮ್ಮ ಭೇಟಿಯಲ್ಲಿ ಒಟ್ಟಿಗೆ ಕೆಲಸ ಮಾಡುವ ಬಗ್ಗೆಯೂ ಮಾತನಾಡಿದ್ದಾರೆ. ಕಾಂತಾರ 2ಗೆ ನವಾಜುದ್ದೀನ್ ಸಿದ್ದಿಕಿ ರಿಷಬ್ ಶೆಟ್ಟಿ ಜೊತೆ ಕೆಲಸ ಮಾಡುತ್ತಾರಾ? ನಟರ ಅಭಿಮಾನಿಗಳು ಈ ರೀತಿಯೂ ನಿರೀಕ್ಷಿಸುತ್ತಿದ್ದಾರೆ.

ನಾನ್ಯಾಕೆ ಅವರೊಂದಿಗೆ ಕೆಲಸ ಮಾಡಲು ಬಯಸಬಾರದು? ಅವರು ಅದ್ಭುತ ನಟ, ನಿರ್ದೇಶಕ, ರಾಜ್ ಶೆಟ್ಟಿ ಅವರನ್ನು ಒಳಗೊಂಡಂತೆ ಇಡೀ ತಂಡವೇ ತುಂಬಾ ಟ್ಯಾಲೆಂಟೆಡ್ ಆಗಿದೆ ಎಂದಿದ್ದಾರೆ ಬಾಲಿವುಡ್ ನಟ.
nawazuddin siddiqui says he and rishab shetty are friends opens up on chances of collaboration.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm