ಬ್ರೇಕಿಂಗ್ ನ್ಯೂಸ್
11-05-23 03:36 pm Source: news18 ಸಿನಿಮಾ
ಕಾಂತಾರ ಸಿನಿಮಾ ರಿಲೀಸ್ ಆಗಿ ತಿಂಗಳುಗಳೇ ಕಳೆದರೂ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರಿಗೆ ಪ್ರಶಂಸೆ ವ್ಯಕ್ತವಾಗುತ್ತಲೇ ಇದೆ. ಸ್ಯಾಂಡಲ್ವುಡ್ನಲ್ಲಿ ಹೊಸ ಅಲೆ ಸೃಷ್ಟಿಸಿದ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಕಾಂತಾರಕ್ಕೆ ವ್ಯಾಪಕ ಮೆಚ್ಚುಗೆ ಹರಿದುಬಂತು. ಇತ್ತೀಚೆಗೆ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ಕಾಂತಾರ ನಟ ರಿಷಬ್ ಶೆಟ್ಟಿ ಕುರಿತು ಮಾತನಾಡಿದ್ದಾರೆ. ಡಿಸೆಂಬರ್ನಲ್ಲಿ ರಿಷಬ್ ಶೆಟ್ಟಿ ಅವರನ್ನು ಭೇಟಿಯಾದ ಸಮಯದ ಕುರಿತು ನವಾಜುದ್ದೀನ್ ಪ್ರತಿಕ್ರಿಯಿಸಿದ್ದಾರೆ. ನಟ ಅವರ ಭೇಟಿಯ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ.
ಇತ್ತೀಚೆಗೆ ಪಿಂಕ್ವಿಲ್ಲಾ ಜೊತೆ ಮಾತನಾಡಿದ ನಟ ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೇರ್ ಮಾಡಿದ್ದಾರೆ. ರಿಷಬ್ ಹಾಗು ಅವರ ಸ್ನೇಹಿತರು ಥಿಯೇಟರ್ಗೆ ಬೇಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ನಮ್ಮ ಗುರುಗಳು ಸೇಮ್ ಎನ್ನುವುದು ವಿಶೇಷವಾದ ಸಂಗತಿ ಎಂದಿದ್ದಾರೆ ನವಾಜುದ್ದೀನ್ ಸಿದ್ದಿಕಿ. ನಿಮ್ಮೊಂದಿಗೆ ನಮ್ಮ ಮನೆಯಲ್ಲಿ ಸ್ವಲ್ಪ ಕ್ವಾಲಿಟಿ ಸಮಯ ಕಳೆಯಲು ಖುಷಿಯಾಗಿದೆ. ವಿಶೇಷ ಏನೆಂದರೆ ನನ್ನಲ್ಲೂ ರಿಷಬ್ ಶೆಟ್ಟಿ ಅವರಲ್ಲೂ ಬಹಳಷ್ಟು ವಿಚಾರಗಳು ಒಂದೇ ರೀತಿ ಇದೆ. ಇದರ ಬಗ್ಗೆ ನಾವು ಮಾತನಾಡುತ್ತಲೇ ಇರಬಹುದು ಎಂದಿದ್ದಾರೆ.

ಅವರು ಈಗಲೂ ಥಿಯೇಟರ್ ಜೊತೆ ಸಂಬಂಧ ಉಳಿಸಿಕೊಂಡಿದ್ದು ಅವರಿನ್ನೂ ಅವರು ನಡೆದುಬಂದ ಹಾದಿಗೆ ಆತ್ಮೀಯವಾಗಿದ್ದಾರೆ. ಅವರ ಸಂಸ್ಕೃತಿಗೆ ಹೆಚ್ಚು ಕನೆಕ್ಟ್ ಆಗಿದ್ದಾರೆ. ಅದರ ಕುರಿತು ಸಿನಿಮಾ ಕೂಡಾ ಮಾಡಿದ್ದಾರೆ. ನಮ್ಮ ಗುರುಗಳು ಒಂದೇ ಆಗಿರುವುದರಿಂದ ನಮ್ಮ ಸಂಬಂಧ ವಿಶೇಷವಾಗಿದೆ. ಈಗ ನಾವು ಸ್ನೇಹಿತರು ಎಂದಿದ್ದಾರೆ. ಅವರು ತಮ್ಮ ಭೇಟಿಯಲ್ಲಿ ಒಟ್ಟಿಗೆ ಕೆಲಸ ಮಾಡುವ ಬಗ್ಗೆಯೂ ಮಾತನಾಡಿದ್ದಾರೆ. ಕಾಂತಾರ 2ಗೆ ನವಾಜುದ್ದೀನ್ ಸಿದ್ದಿಕಿ ರಿಷಬ್ ಶೆಟ್ಟಿ ಜೊತೆ ಕೆಲಸ ಮಾಡುತ್ತಾರಾ? ನಟರ ಅಭಿಮಾನಿಗಳು ಈ ರೀತಿಯೂ ನಿರೀಕ್ಷಿಸುತ್ತಿದ್ದಾರೆ.

ನಾನ್ಯಾಕೆ ಅವರೊಂದಿಗೆ ಕೆಲಸ ಮಾಡಲು ಬಯಸಬಾರದು? ಅವರು ಅದ್ಭುತ ನಟ, ನಿರ್ದೇಶಕ, ರಾಜ್ ಶೆಟ್ಟಿ ಅವರನ್ನು ಒಳಗೊಂಡಂತೆ ಇಡೀ ತಂಡವೇ ತುಂಬಾ ಟ್ಯಾಲೆಂಟೆಡ್ ಆಗಿದೆ ಎಂದಿದ್ದಾರೆ ಬಾಲಿವುಡ್ ನಟ.
nawazuddin siddiqui says he and rishab shetty are friends opens up on chances of collaboration.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm