ಬ್ರೇಕಿಂಗ್ ನ್ಯೂಸ್
17-05-23 12:54 pm Source: news18 ಸಿನಿಮಾ
ಟಾಲಿವುಡ್ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ವರುಣ್ ತೇಜ್ ಅವರ ಮದುವೆ ಬಗ್ಗೆ ಕೆಲ ದಿನಗಳಿಂದಲೂ ರೂಮರ್ಸ್ ಹರಿದಾಡುತ್ತಿದೆ. ಮೆಗಾ ಬ್ರದರ್ ನಾಗಬಾಬು ಅವರೇ ಮೆಗಾ ಹೀರೋ ವರುಣ್ ತೇಜ್ ಮದುವೆಯಾಗಲಿದ್ದಾರೆ ಎಂಬ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ. ಈ ವಿಷಯವು ಭಾರೀ ಚರ್ಚೆ ಆಗುತ್ತಿದೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ನಾಗಬಾಬು ವರುಣ್ ತೇಜ್ ಮದುವೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸದ್ಯದಲ್ಲೇ ಮದುವೆ ಬಗ್ಗೆ ಅಧಿಕೃತ ಘೋಷಣೆ ಮಾಡುವುದಾಗಿ ವರುಣ್ ತೇಜ್ ಹೇಳಿದ್ದಾರೆ. ಅಂದಿನಿಂದ ವರುಣ್ ತೇಜ್ ಮದುವೆಯ ಬಗ್ಗೆ ವಿವಿಧ ವದಂತಿಗಳು ಹರಡುತ್ತಿವೆ.
ವರುಣ್ ತೇಜ್ ಯುವ ನಾಯಕಿ ಲಾವಣ್ಯ ತ್ರಿಪಾಠಿ ಅವರನ್ನು ಪ್ರೀತಿಸುತ್ತಿದ್ದು, ಆಕೆಯೂ ಮದುವೆಯಾಗಲಿದ್ದಾರೆ ಎಂದು ಹೇಳಲಾಗ್ತಿದೆ. ಇಬ್ಬರೂ ಸಹ ಸಖತ್ ಕ್ಲೋಸ್ ಆಗಿದ್ದಾರೆ. ಈ ಸುದ್ದಿಗೆ ಮೆಗಾ ಫ್ಯಾಮಿಲಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ವರುಣ್ ತೇಜ್ ಮದುವೆ ಕುರಿತಾದ ಫೋಟೋವೊಂದು ನಗರದಲ್ಲಿ ವೈರಲ್ ಆಗುತ್ತಿದೆ. ವರುಣ್ ತೇಜ್ ಬ್ಯಾಚುಲರ್ ಲೈಫ್ ಗೆ ವಿದಾಯ ಹೇಳುವ ಸಮಯ ಬಂದಿದ್ದು, ಲಾವಣ್ಯ ತ್ರಿಪಾಠಿ ಜೊತೆ ಮದುವೆ ನಡೆಯಲಿದೆ ಎನ್ನುವ ಸುದ್ದಿ ಆಪ್ತ ಮೂಲಗಳಿಂದ ಬಂದಿದೆ.


ಜೂನ್ ತಿಂಗಳಿನಲ್ಲಿ ವರುಣ್ ತೇಜ್-ಲಾವಣ್ಯ ತ್ರಿಪಾಠಿ ನಿಶ್ಚಿತಾರ್ಥ ನಡೆಯಲಿದೆಯಂತೆ. ಸದ್ಯ ಮದುವೆ ಸಂಬಂಧಿಸಿದ ಕೆಲಸದಲ್ಲಿ ಮೆಗಾ ಫ್ಯಾಮಿಲಿ ಬ್ಯುಸಿ ಆಗಿದ್ದಾರೆ ಎನ್ನಲಾಗಿದೆ. ವರುಣ್ ತೇಜ್ ಅವರ ನಿಶ್ಚಿತಾರ್ಥ ಸಮಾರಂಭವು ಮೆಗಾ ಫ್ಯಾಮಿಲಿ ಜೊತೆಗೆ ಕೆಲವೇ ಜನರ ಸಮ್ಮುಖದಲ್ಲಿ ನಡೆಯಲಿದೆ ಎನ್ನಲಾಗ್ತಿದೆ. ಈ ವರ್ಷಾಂತ್ಯದಲ್ಲಿ ವರುಣ್ ತೇಜ್-ಲಾವಣ್ಯ ತ್ರಿಪಾಠಿ ಮದುವೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅವರಿಬ್ಬರ ಪ್ರೀತಿಗೆ ಎರಡೂ ಕುಟುಂಬ ಸದಸ್ಯರು ಒಪ್ಪಿಗೆ ಸೂಚಿಸಿದ್ದಾರಂತೆ. ಅವರೆಲ್ಲರೂ ಕುಳಿತು ಮಾತನಾಡಿದ್ದು, ಈ ವರ್ಷದ ಕೊನೆಯಲ್ಲಿ ಮದುವೆಯಾಗಲು ಪ್ಲಾನ್ ಮಾಡಿದ್ದಾರೆ ಎನ್ನಲಾಗ್ತಿದೆ.


ವರುಣ್ ತೇಜ್ , ತಂದೆ ಹಾಗೂ ನಟ ನಾಗಬಾಬು ಮತ್ತು ಬ್ರಹ್ಮಾನಂದಂ ಮುಖ್ಯ ಭೂಮಿಕೆಯಲ್ಲಿ ನಟಿಸಿದ 'ಹ್ಯಾಂಡ್ಸಪ್' ಚಿತ್ರದಲ್ಲಿ ಚಿರಂಜೀವಿ ಬಾಲ ನಟನಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಶ್ರೀಕಾಂತ್ ಅಡ್ಡಾಳ ನಿರ್ದೇಶನದ 'ಮುಕುಂದ' ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದರು. ಆ ನಂತರ ಕ್ರಿಶ್ ನಿರ್ದೇಶನದ ‘ಕಂಚೆ’ ಸಿನಿಮಾದಲ್ಲಿ ನಟನಾಗಿ ಮತ್ತೊಂದು ಹೆಜ್ಜೆ ಇಟ್ಟರು. ಆ ನಂತರ ಲೋಫರ್ ಮತ್ತು ಮಿಸ್ಟರ್ ಸಿನಿಮಾಗಳು ಅಷ್ಟಾಗಿ ಯಶಸ್ಸು ಕಾಣಲಿಲ್ಲ. ಶೇಖರ್ ಕಮ್ಮುಲ ನಿರ್ದೇಶನದ 'ಫಿದಾ' ಸಿನಿಮಾ ಬ್ಲಾಕ್ ಬಸ್ಟರ್ ಸಕ್ಸಸ್ ಆಗಿತ್ತು.
varun tej marriage with lavanya tripathi wedding date final.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm