ಬ್ರೇಕಿಂಗ್ ನ್ಯೂಸ್
19-05-23 02:45 pm Source: news18 ಸಿನಿಮಾ
ಸುದಿಪ್ತೋ ಸೆನ್ ನಿರ್ದೇಶನದ ದಿ ಕೇರಳ ಸ್ಟೋರಿ ಸಿನಿಮಾ ಈಗ ವೈರಲ್ ಆಗಿದೆ. ಸಿನಿಮಾಗೆ ವ್ಯಾಪಕ ಮೆಚ್ಚುಗೆ ಹರಿದುಬಂದಿದೆ. ಹಾಗೆಯೇ ಟೀಕೆಯೂ ವ್ಯಕ್ತವಾಗಿದೆ. ಬಹಳಷ್ಟು ಜನರು ಇದನ್ನು ಪ್ರೊಪಗಾಂಡ ಮೂವಿ ಎಂದು ಕರೆದಿದ್ದಾರೆ. ಈಗ ನಟ ಪ್ರಕಾಶ್ ರಾಜ್ ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ವಿಶ್ವಗುರುಗಳೇ ಈ ಸುಳ್ಳಿನ ಕತೆಯನ್ನು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತಯಾಚನೆಗಾಗಿ ಯಾಕೆ ಪ್ರಯೋಗಿಸಿದಿರಿ.. ಎಂದು ಬರೆದಿರುವ ಪ್ರಕಾಶ್ ರಾಜ್ ಅವರು ಜಸ್ಟ್ ಆಸ್ಕಿಂಗ್ ಎಂಬ ಹ್ಯಾಶ್ಟ್ಯಾಗ್ ಬಳಸಿದ್ದಾರೆ.
ಸಿನಿಮಾದಲ್ಲಿ ಡಿಸ್ಕ್ಲೈಮರ್ ಸೇರಿಸಬೇಕು. 32 ಸಾವಿರ ಅಥವಾ ಇನ್ಯಾವುದೇ ಸಂಖ್ಯೆಯಷ್ಟು ಯುವತಿಯರು ಮತಾಂತರವಾಗಿದ್ದಾರೆ ಎಂದು ತೋರಿಸಲು ಯಾವುದೇ ಸಾಕ್ಷಿಗಳಿಲ್ಲ. ಇಲ್ಲಿ ತೋರಿಸಲಾದ ವಿಷಯದ ಒಂದು ಕಾಲ್ಪನಿಕ ಕಥಾ ವಸ್ತು ಆಧರಿಸಿದ ಸಿನಿಮಾ ಇದಾಗಿದೆ ಎಂದು ಬರೆಯಬೇಕು ಎಂದು ಸುಪ್ರೀಂ ಕೋರ್ಟ್ ದೀ ಕೇರಳ ಸ್ಟೋರಿ ಸಿನಿಮಾಗೆ ಸೂಚನೆ ನೀಡಿತ್ತು.


ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಕೆಲವು ವಿವಾದಗಳು ಎದ್ದರೂ ದೊಡ್ಡ ಯಶಸ್ಸು ಕಂಡಿತ್ತು. ಇತ್ತೀಚೆಗಷ್ಟೇ ಕೇರಳದ ಜೊತೆಗೆ ಚಿತ್ರರಂಗದ ಹಲವೆಡೆ ಈ ಸಿನಿಮಾದ ಬಗ್ಗೆ ವಿವಾದ ಎದ್ದಿದ್ದರೂ ಇದೇ ವರ್ಗದ ಮತ್ತೊಂದು ಸಿನಿಮಾ ‘ದಿ ಕೇರಳ ಸ್ಟೋರಿ’ ಈಗ ಬ್ಲಾಕ್ ಬಸ್ಟರ್ ಟಾಕ್ ಆಗಿದೆ. ಮೇಲಾಗಿ ಬಾಕ್ಸ್ ಆಫೀಸ್ನಲ್ಲಿ ಕಲೆಕ್ಷನ್ ಹೆಚ್ಚಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಪ್ರಚಾರ ಚಿತ್ರಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ಗುಂಪುಗಳು ಈ ಸಿನಿಮಾವನ್ನು ವಿರೋಧಿಸುತ್ತಿದ್ದರೆ, ಇನ್ನು ಕೆಲವು ಗುಂಪುಗಳು ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಚಿತ್ರಕ್ಕೆ ಸೆನ್ಸಾರ್ ತಂಡ 10 ಕಟ್ಗಳನ್ನು ಹೇಳಿದೆ. ತಮಿಳುನಾಡು, ಕೇರಳದಂತಹ ರಾಜ್ಯಗಳು ಈ ಸಿನಿಮಾದಿಂದ ಶಾಂತಿ ಮತ್ತು ಭದ್ರತೆಗೆ ಧಕ್ಕೆಯಾಗುತ್ತಿದೆ ಎಂದು ಹೇಳಿ ನಿಷೇಧ ಹೇರಿವೆ.

ನಿರ್ದೇಶಕ ಸುದಿಪ್ಟೋ ಸೆನ್ ಹಾಗೂ ವಿ.ಪುಲ್ ಅಮೃತ್ಲಾಲ್ ಶಾ ಅವರು ಸಿನಿಮಾದಲ್ಲಿ ಕೇರಳದಿಂದ ನಾಪತ್ತೆಯಾದ 32000 ಯುವತಿಯರ ಕಥೆ ಇದು ಎಂದು ಹೇಳಿದ್ದರು. ಇಸ್ಲಾಂಗೆ (Islam) ಮತಾಂತರಗೊಂಡು (Conversion) ನಂತರ ಅಫ್ಘಾನಿಸ್ತಾನ (Afghanistan), ಟರ್ಕಿ, ಸಿರಿಯಾದಲ್ಲಿ ಐಸಿಸ್ ಸೇರಲ್ಪಟ್ಟ ಯುವತಿಯರ ಕಥೆ ಎಂದು ಹೇಳಿದ್ದರು. ಇದರ ಸತ್ಯಾಸತ್ಯತೆ ಬಗ್ಗೆ ಪ್ರಶ್ನೆ ಏಳುತ್ತಿದ್ದಂತೆ 32,000 ಯುವತಿಯರು ಎಂಬಲ್ಲಿ ಮೂವರು ಯುವತಿಯರ ಕಥೆ ಎಂದು ಬಲಾಯಿಸಲಾಯಿತು. ಈ ನಂಬರ್ಸ್ ವಿಚಾರವಾಗಿ ಸಾಕಷ್ಟು ಟೀಕೆ ಎದುರಾಗಿತ್ತು.
actor prakash raj comments on the kerala story movie.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm