ಬ್ರೇಕಿಂಗ್ ನ್ಯೂಸ್
23-05-23 12:59 pm Source: news18 ಸಿನಿಮಾ
ಜೂನಿಯರ್ ಎನ್ಟಿಆರ್ ಅವರ ಒಂಭತ್ತು ಜನ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ. ಜೂನಿಯರ್ ಎನ್ಟಿಆರ್ ಅವರ ಬರ್ತ್ಡೇ ಸಂದರ್ಭವೇ ಅವರ ಅಭಿಮಾನಿಗಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಡುಗಳನ್ನು ಬಲಿಕೊಟ್ಟು ನಟನ ಬ್ಯಾನರ್ಗೆ ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ನಟನ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪ್ರಾಣಿಗಳ ಬಲಿ ನಿಷೇಧಿಸಲಾಗಿದ್ದು ಆ ಕೃತ್ಯದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿಮಾನಿಗಳು ಅರೆಸ್ಟ್ ಆಗಿದ್ದಾರೆ.
ವಿಜಯವಾಡದಲ್ಲಿ ಘಟನೆ ನಡೆದಿದೆ. ನಟನ ಅಭಿಮಾನಿಗಳು ನಟನ ಬರ್ತ್ಡೇ ಆಚರಣೆ ಭಾಗವಾಗಿ ಥಿಯೇಟರ್ ಮುಂದೆ ಅವರ ಫ್ಲೆಕ್ಸಿ ಬ್ಯಾನರ್ಗೆ ಆಡುಗಳನ್ನು ಬಲಿ ಕೊಟ್ಟು ರಕ್ತ ಚಿಮ್ಮುವಂತೆ ಮಾಡಿದ್ದಾರೆ. ಅಭಿಮಾನಿಗಳು ಎರಡು ಆಡುಗಳನ್ನು ಸಾಯಿಸಿ ರಕ್ತಾಭಿಷೇಕ ಮಾಡಿದ್ದಾಗಿ ಆರೋಪಿಸಲಾಗಿದೆ. ನಟನ ಬರ್ತ್ಡೇ ಪ್ರಯುಕ್ತ ಅವರ ಹಳೆಯ ಸಿನಿಮಾ ಸಿಂಹಾದ್ರಿ ರಿ ರಿಲೀಸ್ ಆಗಿದೆ. ಈ ಸಂದರ್ಭ ಥಿಯೇಟರ್ ಮುಂದೆ ಈ ಘಟನೆ ನಡೆದಿದೆ.

ಪಿ. ಶಿವ ನಾಗ ರಾಜು, ಕೆ ಸಾಯಿ, ಜಿ ಸಾಯಿ, ಡಿ ನಾಗ ಭೂಷಣಂ, ವಿ ಸಾಯಿ, ಪಿ ನಾಗೇಶ್ವರ ರಾವ್, ವೈ. ಧರಣಿ, ಪಿ. ಶಿವ ಹಾಗೂ ಬಿ. ಅನಿಲ್ ಕುಮಾರ್ ಎಂಬವರನ್ನು ಈ ಘಟನೆಗೆ ಸಂಬಂಧಿಸಿ ಅರೆಸ್ಟ್ ಮಾಡಲಾಗಿದೆ. ಶಿವ ನಾಗ ರಾಜು ಹಾಗೂ ಅವರ ಸ್ನೇಹಿತರು ಸಿರಿ ಕೃಷ್ಣ ಹಾಗೂ ಸಿರಿ ವೆಂಕಟ ಥಿಯೇಟರ್ನಲ್ಲಿ ಮೇ 20ರಂದು ನಟನ ಬರ್ತ್ಡೇ ಆಚರಿಸಿದ್ದಾರೆ. ಈ ಸಂದರ್ಭದಲ್ಲಿಯೇ ಆಡನ್ನು ಬಲಿಕೊಟ್ಟ ಘಟನೆಯೂ ನಡೆದಿದೆ.

ನಟನ ಬರ್ತ್ಡೇ ಸಂದರ್ಭ ಇನ್ನೊಂದು ಘಟನೆಯಲ್ಲಿ ನಟ ಅಭಿಮಾನಿಗಳು ಥಿಯೇಟರ್ ಒಳಗಡೆ ಪಟಾಕಿ ಸಿಡಿಸಿ ಚಿತ್ರಮಂದಿರದೊಳಗೆ ಬೆಂಕಿ ಅವಘಡ ಸಂಭವಿಸುವಂತೆ ಮಾಡಿದ್ದಾರೆ. ಥಿಯೇಟರ್ನಲ್ಲಿ ಸೀಟುಗಳಿಗೂ ಹಾನಿಯಾಗಿದೆ. ಎಲ್ಲಾ ಕಡೆಗಳಲ್ಲಿ ಸಿನಿಮಾ ರಿ-ರಿಲೀಸ್ ಸಂಭ್ರಮ ತುಂಬಿದ್ದ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಸಂಭ್ರಮಾಚರಣೆ ವೇಳೆ ಅವಘಡ ಸಂಭವಿಸಿದೆ. ಘಟನೆಯ ಫೊಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದವು. ನಂತರ ಶೋ ಕ್ಯಾನ್ಸಲ್ ಮಾಡಲಾಯಿತು.
nine fans of jr ntr arrested for sacrificing goats.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:24 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm