ಬ್ರೇಕಿಂಗ್ ನ್ಯೂಸ್
07-06-23 01:42 pm Source: news18 ಸಿನಿಮಾ
ಇದೇ ಮೊದಲ ಬಾರಿಗೆ ಆದಿಪುರುಷ್ ಸಿನಿಮಾ ತಂಡ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಅದೇನೆಂದರೆ ಆದಿಪುರುಷ್ ಸಿನಿಮಾ ರಿಲೀಸ್ ಆಗುವ ಪ್ರತಿ ಚಿತ್ರಮಂದಿರಲ್ಲಿ ಒಂದು ಖಾಲಿ ಸೀಟ್ ಇರಲಿದೆಯಂತೆ. ಪ್ರಿ ರಿಲೀಸ್ ಇವೆಂಟ್ನಲ್ಲಿ ನಿರ್ದೇಶಕ ಓಂ ರಾವತ್ ಅವರು ಎಲ್ಲಾ ಥಿಯೇಟರ್ ಮಾಲೀಕರಲ್ಲಿ ಈ ಬೇಡಿಕೆ ಇಟ್ಟಿದ್ದಾರೆ. ವಿದೇಶ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ಸೀಟ್ನನ್ನು ಹನುಮಾನ್ ದೇವರಿಗಾಗಿ ಖಾಲಿ ಇಡಿ ಎಂದು ಆದಿಪುರುಷ್ ಸಿನಿಮಾದ ನಿರ್ದೇಶಕ ಓಂ ರಾವತ್ ಅವರು ಬೇಡಿಕೆ ಇಟ್ಟಿದ್ದಾರೆ. ಈ ನಿಟ್ಟಿನಲ್ಲಿ ಸಿನಿಮಾ ರಿಲೀಸ್ ದಿನ ಎಲ್ಲಾ ಥಿಯೇಟರ್ನಲ್ಲಿ ಒಂದು ಸೀಟ್ ಖಾಲಿ ಇರಲಿದೆಯಂತೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಳಷ್ಟು ಜನರು ಚಿತ್ರತಂಡದ ಭಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹನುಮಾನ್ಗೆ ಗೌರವ ಕೊಡುವ ಈ ನಡೆಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಪ್ರತಿಕ್ರಿಯಿಸಿ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಬರದಿದ್ದರೆ ಏನು ಮಾಡುತ್ತೀರಿ? ಮೊದಲ ದಿನವೇ ನೆಗಟಿವ್ ಟಾಕ್ ಬಂದರೆ ಒಂದು ಸೀಟ್ ಅಲ್ಲ, ಇಡೀ ಥಿಯೇಟರ್ ಖಾಲಿಯಾಗುತ್ತದೆ ಎಂದು ಕಾಲೆಳೆದಿದ್ದಾರೆ.
ಇನ್ನೊಬ್ಬರು ಕಮೆಂಟ್ ಮಾಡಿ ಸಿನಿಮಾ ನೋಡಲು ಬರುವಾಗ ಚಪ್ಪಲಿ ಧರಿಸಿಕೊಂಡು ಬರಬಹುದೇ ಎಂದು ಪ್ರಶ್ನಿಸಿದ್ದಾರೆ. ಥಿಯೇಟರ್ನಲ್ಲಿ ಪ್ರಸಾದ ಅಥವಾ ಪಾಯಸ ಕೊಡುತ್ತೀರಾ ಎಂದು ಕಿಂಡಲ್ ಮಾಡಿದ್ದಾರೆ ಇನ್ನೊಬ್ಬರು. ಪಾಪ್ಕಾರ್ನ್, ಕೂಲ್ಡ್ರಿಂಕ್ಸ್ ಬದಲು ಪಾಯಸ ಮತ್ತು ಪ್ರಸಾದ ಕೊಡ್ತೀರಾ ಎಂದು ಕೇಳಿದ್ದಾರೆ ನೆಟ್ಟಿಗರು. ಇನ್ನು ಹನುಮಾನ್ ಥಿಯೇಟರ್ ಒಳಗೆ ಕುಳಿತ ಕೆಲವು ಫೋಟೋಶೋಪ್ ಮಾಡಿದ ಫೋಟೋಗಳು ವೈರಲ್ ಆಗುತ್ತವೆ ಎಂದಿದ್ದಾರೆ ಇನ್ನೊಬ್ಬರು. ಸಿನಿಮಾ ಚೆನ್ನಾಗಿದ್ರೆ ಇದನ್ನೆಲ್ಲಾ ಯಾಕೆ ಮಾಡ್ತೀರಿ ಎಂದು ಕೇಳಿದ್ದಾರೆ.
ಈ ರೀತಿ ಬೇಕಾಬಿಟ್ಟಿ ಕಮೆಂಟ್ ಮಾಡಿ ಚಿತ್ರತಂಡದ ಮಹತ್ವದ ಉದ್ದೇಶವನ್ನು ಸುಮ್ಮನೆ ನೋಯಿಸಬೇಡಿ ಎಂದಿದ್ದಾರೆ ಪ್ರಭಾಸ್ ಫ್ಯಾನ್ಸ್. ಅಂತೂ ಈ ವಿಚಾರ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದಿಪುರುಷ್ ಸಿನಿಮಾದಲ್ಲಿ ಪ್ರಭಾಸ್ ರಾಮನಾಗಿ, ಕೃತಿ ಸನೋನ್ ಸೀತೆಯಾಗಿ ಹಾಗೂ ಸೈಫ್ ಅಲಿ ಖಾನ್ ರಾವಣನ ಪಾತ್ರವನ್ನು ಮಾಡಲಿದ್ದಾರೆ. ಮಲ್ಟಿ ಸ್ಟಾರರ್ ಸಿನಿಮಾ ಈಗಾಗಲೇ ಸಾಕಷ್ಟು ಕುತೂಹಲ ಸೃಷ್ಟಿಸಿದೆ.
one empty seat in theaters during adipurush release.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 02:13 pm
HK News Desk
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm