ಬ್ರೇಕಿಂಗ್ ನ್ಯೂಸ್
17-06-23 03:59 pm Source: news18 ಸಿನಿಮಾ
ಆದಿಪುರುಷ್ ಸಿನಿಮಾ ನೋಡಿದ ಬಹಳಷ್ಟು ಪ್ರೇಕ್ಷಕರು ಸಿನಿಮಾ ಕುರಿತು ನೆಗೆಟಿವ್ ರಿವ್ಯೂ ಕೊಡುತ್ತಿದ್ದಾರೆ. ರಾಮಾಯಣದ ಕಥೆಯನ್ನು ಅದರ ಕಥಾ ಪಾತ್ರಗಳನ್ನು ತೋರಿಸಿರುವ ರೀತಿಗೆ ಜನರು ಚಿತ್ರ ತಂಡದ ಮೇಲೆ ಸಿಟ್ಟಾಗಿದ್ದಾರೆ. ಸಿನಿಮಾದ ಟೀಸರ್ ರಿಲೀಸ್ ಆದಾಗಲೇ ವ್ಯಾಪಕ ಟೀಕೆ ಎದುರಾಗಿತ್ತು. ಆಮೇಲೆ ಸಿನಿಮಾದ ಗ್ರಾಫಿಕ್ಸ್ಗಳಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಯಿತು. ಸಿನಿಮಾದಲ್ಲಿ ರಾಮ ಸೇರಿದಂತೆ ಹಲವು ಪ್ರಮುಖ ಪಾತ್ರಗಳ ಚಿತ್ರಣದ ಬಗ್ಗೆ ನೆಟ್ಟಿಗರು ಸಿಟ್ಟಾಗಿದ್ದಾರೆ.
ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿನಿಮಾ ವಿರುದ್ಧ ದೂರು ದಾಖಲಿಸಲಾಗಿದೆ. ದೆಹಲಿ ಹೈಕೋರ್ಟ್ನಲ್ಲಿ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ಸಿನಿಮಾ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ರಾಮಾಯಣವನ್ನು ಆಧರಿಸಿದ ಸಿನಿಮಾ ಆಗಿರುವುದರಿಂದ ಚಿತ್ರತಂಡ ಬೇಕಾಬಿಟ್ಟಿಯಾಗಿ ತಮಗೆ ಬೇಕಾದಂತೆ ಬದಲಾವಣೆ ತಂದು ರಾಮಾಯಣ ಪಾತ್ರಗಳನ್ನು ಚಿತ್ರಿಸಿದ್ದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಸಾರ್ವಜನಿಕ ಹಿತಾಸಕ್ತಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ. ಧಾರ್ಮಿಕ ಮುಖಂಡರು/ಪಾತ್ರಗಳು/ವ್ಯಕ್ತಿಗಳನ್ನು ಕೆಟ್ಟ ಅಭಿರುಚಿಯಲ್ಲಿ ಬಿಂಬಿಸುವ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ಸೂಕ್ತ ನೋಟಿಸ್ ನೀಡುವಂತೆ ಈ ಅರ್ಜಿಯಲ್ಲಿ ಕೇಳಲಾಗಿದೆ. 'ಆದಿಪುರುಷ್' ಚಲನಚಿತ್ರವನ್ನು ಪ್ರಮಾಣೀಕರಿಸದಂತೆ ಆದೇಶವನ್ನು ಹೊರಡಿಸಿ ಸಿನಿಮಾ ಪ್ರದರ್ಶಿಸದಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಭಾಸ್ ಅಭಿನಯದ ಆದಿಪುರುಷ್
ಆಲ್ ಇಂಡಿಯಾ ಆದಿಪುರುಷ್ ಬಾಕ್ಸ್ ಆಫೀಸ್ ಕಲೆಕ್ಷನ್ ನೋಡುವುದಾದರೆ ಎಲ್ಲಾ ಭಾಷೆಗಳಲ್ಲಿ ಸೇರಿ ಒಟ್ಟು 90 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಪಠಾಣ್ ಹಾಗೂ ಕೆಜಿಎಫ್2 ನಂತರ ಕೊರೋನಾ ನಂತರದ ಅವಧಿಯಲ್ಲಿ ಮೊದಲ ದಿನ ಅತ್ಯಧಿಕ ಗಳಿಸಿದ ಮೂರನೇ ಸಿನಿಮಾ ಇದಾಗಿದೆ. Boxofficeindia.com ಪ್ರಕಾರ ಸಿನಿಮಾದ ತೆಲುಗು ವರ್ಷನ್ ಚೆನ್ನಾಗಿ ಓಡಿದೆ ಎನ್ನಲಾಗಿದೆ. ಹಿಂದಿಯಲ್ಲಿ 90 ಕೋಟಿಯಷ್ಟು ಕಲೆಕ್ಷನ್ ಸೇರಿ ಚೆನ್ನಾಗಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟ್ಟಾಗಿ 110 ರಿಂದ 140 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.
Hindu Sena files write petition against adipurush in delhi high court.
11-05-24 11:20 pm
Bangalore Correspondent
SP Dinesh, Ayanur Manjunath, Congress: ನೈರುತ್...
11-05-24 09:46 pm
KAS officer shivakumar wife Chaitra suicide:...
11-05-24 07:25 pm
Chikkaballapur, Police constable protest, SP...
11-05-24 06:57 pm
Belagavi accident, three killed: ಬೆಳಗಾವಿ ; ಕ್...
11-05-24 05:25 pm
11-05-24 09:43 pm
HK News Desk
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
Arvind Kejriwal, Supreme court: ಸಿಎಂ ಕೇಜ್ರಿವಾ...
10-05-24 03:46 pm
Kerala Arali Flower death: ಮೊಬೈಲ್ ನಲ್ಲಿ ಮಾತನಾ...
10-05-24 10:06 am
11-05-24 10:54 pm
Mangalore Correspondent
Mangalore Alvas pragathi job fair: ಜೂನ್ 7-8 ;...
11-05-24 06:48 pm
Udupi news, body in car: ಟೂರಿಸ್ಟ್ ಕಾರು ಇರೋದು...
11-05-24 01:33 pm
Thumbe reservoir, Mangalore: ತುಂಬೆ ಡ್ಯಾಮಿನಲ್ಲ...
11-05-24 12:25 pm
Praveen Nettaru, NIA arrest: ಸಕಲೇಶಪುರದಲ್ಲಿ ಶು...
10-05-24 10:45 pm
11-05-24 10:18 pm
Mangaluru Correspondent
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm
Kalaburgi youth murdered: ಕಲಬುರಗಿ ; ಕಾಂಗ್ರೆಸ್...
10-05-24 02:04 pm
Cyber fraud Kodagu, Kerala, Sim card: ಸೈಬರ್ ವ...
10-05-24 12:44 pm
NIA arrests Mustafa Paichar, Praveen Nettaru...
10-05-24 11:53 am