ಬ್ರೇಕಿಂಗ್ ನ್ಯೂಸ್
29-06-23 01:22 pm Source: news18 ಸಿನಿಮಾ
ದಳಪತಿ ವಿಜಯ್ ಅವರ ಮುಂದಿನ ಸಿನಿಮಾ ಲಿಯೋ ಅವರಿಗೆ ತೊಂದರೆ ತಂದಿಟ್ಟಿದೆ. ಸಿನಿಮಾದ ಫಸ್ಟ್ ಸಿಂಗಲ್ ರಿಲೀಸ್ ಆಗಿದ್ದೇ ತಟ ತಮಿಳು ನಟ, ಸ್ಟಾರ್ ವಿಜಯ್ ವಿರುದ್ಧ ಕೇಸ್ ದಾಖಲಾಗಿದೆ. ಲಿಯೋ ಸಿನಿಮಾದ ಮೊದಲ ಹಾಡು ಇತ್ತೀಚೆಗೆ ರಿಲೀಸ್ ಆಗಿತ್ತು. ಲಿಯೋ ಸಿನಿಮಾ ಅಕ್ಟೋಬರ್ನಲ್ಲಿ ದಸರಾ ಸಂದರ್ಭ ಬಿಡುಗಡೆಯಾಗಲಿದೆ. ಸಿನಿಮಾದ ಹೆಚ್ಚಿನ ಸೀನ್ ಶೂಟಿಂಗ್ ಕೂಡಾ ಮುಗಿದಿದೆ. ಸಿನಿಮಾದ ಮೊದಲ ಸಾಂಗ್ ವಿಜಯ್ ಬರ್ತ್ಡೇ ಸಂದರ್ಭ ರಿಲೀಸ್ ಮಾಡಲಾಗಿತ್ತು. ಆದರೆ ಹಾಡಿನ ಬಗ್ಗೆ ವಿರೋಧ ವ್ಯಕ್ತವಾಗಿದೆ.
ನಾ ರೆಡಿ ಎನ್ನುವ ಹಾಡು ರಿಲೀಸ್ ಆಗಿದ್ದು ಈಗ ಸಮಸ್ಯೆ ಎದುರಾಗಿದೆ. ಕೊರುಕ್ಕುಪೇಟ್ ಎಂಬಲ್ಲಿನ ಸಾಮಾಜಿಕ ಕಾರ್ಯಕರ್ತ ಸೆಲ್ವಮ್ ಎಂಬ ವ್ಯಕ್ತಿ ನಾ ರೆಡಿ ಹಾಡಿನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಹಾಡು ಮಾದಕ ವ್ಯಸನವನ್ನು ಹಾಗೂ ರೌಡಿಸಂ ಪ್ರೋತ್ಸಾಹಿಸುತ್ತದೆ ಎಂದು ಆರೋಪಿಸಿದ್ದಾರೆ. ನಾರ್ಕೋಟಿಕ್ಸ್ ಕಂಟ್ರೋಲ್ ಆ್ಯಕ್ಟ್ ಅಡಿಯಲ್ಲಿ ನಟ ವಿಜಯ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಮಿಷನರ್ ಬಳಿ ದೂರು ನೀಡಲಾಗಿದೆ. ಈ ವಿಚಾರ ಈಗ ಎಲ್ಲೆಡೆ ವೈರಲ್ ಆಗಿದ್ದು ಹಾಡಿನ ಲಿರಿಕ್ಸ್ ಬಗ್ಗೆ ಟೀಕೆ ವ್ಯಕ್ತವಾಗಿದೆ.

ನಾ ರೆಡಿ ಹಾಡಿನಲ್ಲಿರುವ ಕೆಲವು ಸಾಲುಗಳು ಡ್ರಗ್ಸ್ ಹಾಗೂ ರೌಡಿಸಂ ಸಪೋರ್ಟ್ ಮಾಡುತ್ತವೆ. ವಿಜಯ್ ಅವರು ಸ್ಮೋಕ್ ಮಾಡುತ್ತಿದ್ದು ಮದ್ಯವನ್ನೂ ಈ ಹಾಡಿನಲ್ಲಿ ಬಳಸಲಾಗಿದೆ. ಸಾಂಗ್ ವೈರಲ್ ಆಗಿದ್ದು ಇದು ಯುವಜನರನ್ನು ಪ್ರಭಾವಿಸುತ್ತದೆ ಎಂದು ಆರೋಪಿಸಲಾಗಿದೆ. ವಿಜಯ್ ವಿರುದ್ಧ ಕ್ರಮ ಕೈಗೊಳ್ಳಲು ಕೋರ್ಟ್ನಲ್ಲಿ ಕೇಸ್ ಫೈಲ್ ಮಾಡುವುದಾಗಿ ಸೆಲ್ವಮ್ ಹೇಳಿದ್ದಾರೆ. ಇದೇ ವಿಚಾರವಾಗಿ ಕೆಲವು ನೆಟ್ಟಿಗರು ವಿಜಯ್ ವಿರುದ್ಧ ಕಿಡಿ ಕಾರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಇದು ಸಿನಿಮಾಗೆ ಬಿಟ್ಟಿ ಪ್ರಚಾರ ಎಂದು ಹೇಳಿದ್ದಾರೆ.

ಸದ್ಯ ಲಿಯೋ ಸಿನಿಮಾದ ಶೂಟಿಂಗ್ ಫೈನಲ್ ಸ್ಟೇಜ್ಗೆ ತಲುಪಿದೆ. ಈ ಸಿನಿಮಾ ಬಹುನಿರೀಕ್ಷಿತ ಚಿತ್ರವಾಗಿದ್ದು ವಿಜಯ್ ಫ್ಯಾನ್ಸ್ ಕುತೂಹಲದಿಂದ ಸಿನಿಮಾಗಾಗಿ ಕಾಯುತ್ತಿದ್ದಾರೆ. ವಿಜಯ್ ಅವರ ಹಲವಾರು ಫೋಟೋಗಳು ವೈರಲ್ ಆಗಿದ್ದು ಇದರಲ್ಲಿ ನಟ ಸಿಗರೇಟ್ ಸೇದುವುದನ್ನು ಕಾಣಬಹುದು. ಹಾಗೆಯೇ ನಟ ಪಿಸ್ತೂಲ್ ಹಿಡಿದಿರುವಂತಹ ಫೋಟೋಗಳು ಕೂಡಾ ವೈರಲ್ ಆಗಿದ್ದವು.
A police complaint filed against leo actor vijay for promoting drugs.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm