ಬ್ರೇಕಿಂಗ್ ನ್ಯೂಸ್
05-07-23 01:40 pm Source: News18 Kannada ಸಿನಿಮಾ
ನಿಹಾರಿಕಾ ಕೊನಿಡೇಲಾ ಹಾಗೂ ಚೈತನ್ಯ ಪರಸ್ಪರ ಸಮ್ಮತಿಯೊಂದಿಗೆ ವಿಚ್ಛೇದನೆ ಪಡೆದಿದ್ದಾರೆ. ತೆಲುಗು ಮೆಗಾಸ್ಟಾರ್ ಚಿರಂಜೀವಿ ಅವರ ಕುಟುಂಬದ ನಿಹಾರಿಕಾ ಅವರ ದಾಂಪತ್ಯ ಜೀವನದ ಬಿರುಕಿನ ಬಗ್ಗೆ ಕೆಲವು ತಿಂಗಳಿಂದಲೇ ಚರ್ಚೆ ನಡೆಯುತ್ತಿತ್ತು. ಇದೀಗ ವಿಚ್ಛೇದನೆಯೂ ಆಗಿದ್ದು ಇದೇ ಮೊದಲಬಾರಿಗೆ ತೆಲುಗು ನಟಿ, ನಿಹಾರಿಕಾ ತಮ್ಮ ಡಿವೋರ್ಸ್ ಬಗ್ಗೆ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟ್ ಶೇರ್ ಮಾಡುವಾಗ ನಟಿ ಕಮೆಂಟ್ ಟರ್ನ್ ಆಫ್ ಮಾಡಿದ್ದು ಯಾರೂ ಕೂಡಾ ನಟಿಯ ಪೋಸ್ಟ್ಗೆ ಪ್ರತಿಕ್ರಿಯಿಸಲು ಸಾಧ್ಯವಾಗುತ್ತಿಲ್ಲ.
ಚೈತನ್ಯ ಹಾಗೂ ನಾನು ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ನಮ್ಮ ಬದುಕಿನಲ್ಲಿ ಮುಂದೆ ಸಾಗಲು ನೀವು ನಮಗೆ ಕರುಣೆ ತೋರಿಸಿ ವರ್ತಿಸಬೇಕು. ಈ ಸಂದರ್ಭ ನಮ್ಮ ಬೆಂಬಲವಾಗಿ ನಿಂತ ಸ್ನೇಹಿತರು ಹಾಗೂ ಕುಟುಂಬಸ್ಥರಿಗೆ ಧನ್ಯವಾದಗಳು. ನಾನು ಈ ಸಂದರ್ಭ ನಮ್ಮ ಮುಂದಿನ ಬದುಕಿನಲ್ಲಿ ಮಂದುವರಿಯಲು ಸ್ವಲ್ಪ ಖಾಸಗಿತನವನ್ನು ಕೇಳುತ್ತಿದ್ದೇನೆ. ಅರ್ಥ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಬರೆದಿದ್ದಾರೆ. ಇಬ್ಬರೂ ಏಪ್ರಿಲ್ 1 ರಂದು ವಿಚ್ಛೇದನಕ್ಕೆ ಅರ್ಜಿ ಕೋರಿ ಕುಕಟ್ ಪಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಜೂನ್ 5 ರಂದು ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರಿಗೆ ನ್ಯಾಯಾಲಯ ವಿಚ್ಛೇದನ ನೀಡಿದೆ ಎಂದು ವರದಿಯಾಗಿದೆ. ಈ ಮೂಲಕ ಮತ್ತೊಮ್ಮೆ ಸೆಲೆಬ್ರಿಟಿ ಜೋಡಿ ವಿಚ್ಛೇದನ ವಿಚಾರ ಚರ್ಚೆಗೆ ಗ್ರಾಸವಾಗಿದೆ.


ತೆಲುಗು ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಜೋಡಿಯ ವಿಚ್ಛೇದನೆ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ನಿಹಾರಿಕಾ ಅವರು ಸದ್ಯ ಡಿವೋರ್ಸ್ನಿಂದ ಹೊರಗೆಬಂದು ಸಿನಿಮಾಗಳತ್ತ ಹೆಚ್ಚು ಗಮನ ಕೊಡುತ್ತಿದ್ದಾರೆ. ನಿಹಾರಿಕಾ ಡಿಸೆಂಬರ್ 2020 ರಲ್ಲಿ ಚೈತನ್ಯ ಜೊನ್ನಲಗಡ್ಡ ಅವರನ್ನು ವಿವಾಹವಾದರು. ಮತ್ತು ಅಂದಿನಿಂದ ವೈವಾಹಿಕ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ ಅನಿರೀಕ್ಷಿತವಾಗಿ ಇವರಿಬ್ಬರ ವಿಚ್ಛೇದನ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ನೆಟ್ಟಿಗರು ಮಾಡಿದ ವದಂತಿ ನಿಜವಾಯಿತು.


ನಿಹಾರಿಕಾ ಹೈದರಾಬಾದ್ನ ಕುಕಟ್ಪಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಬ್ಬರೂ ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಇತ್ತೀಚೆಗೆ ನ್ಯಾಯಾಲಯ ಅವರಿಗೆ ವಿಚ್ಛೇದನ ನೀಡಿದೆಯಂತೆ. ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಸೋಷಿಯಲ್ ಮೀಡಿಯಾದಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಪರಸ್ಪರ ಅನ್ಫಾಲೋ ಮಾಡಿದಾಗಿನಿಂದ ವಿಚ್ಛೇದನದ ಅನುಮಾನಗಳು ಪ್ರಾರಂಭವಾದವು.
Niharika Konidela shares Divorce news with Fans turn off comment Section.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm