ಬ್ರೇಕಿಂಗ್ ನ್ಯೂಸ್
08-07-23 01:45 pm Source: News18 Kannada ಸಿನಿಮಾ
ಕಾಂತಾರದಂತಹ ಹಿಟ್ ಚಿತ್ರ ಕೊಟ್ಟು, ವಿಶ್ವವೇ ಕರುನಾಡಿನತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿನ್ನೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂತಾರ 2 ಸಿನಿಮಾ ಬಗ್ಗೆ ಹೇಳಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್ ನಲ್ಲಿ ಫ್ಯಾನ್ಸ್ ಜೊತೆ ಮಾತನಾಡಿ ಖುಷಿ ಪಟ್ಟಿದ್ದಾರೆ. ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕಾಂತಾರ 2 ಸಿನಿಮಾ ರಿಲೀಸ್ ಯಾವಾಗ ಎಂದು ಹೇಳಿದ್ದಾರೆ, ಅದನ್ನು ಕೇಳಿ ಫ್ಯಾನ್ಸ್ ಕಾತುರರಾಗಿದ್ದಾರೆ. 'ಕಾಂತಾರ 2 ಸಂಭಾಷಣೆ ಮುಗಿಸಿದ್ದೇವೆ. ಸಿನಿಮಾ ಕೆಲಸಗಳು ನಡೆಯುತ್ತಿವೆ. ಸಿನಿಮಾ ಮಾಡಲು ಸ್ಥಳ ಮತ್ತು ಕಲಾವಿದರನ್ನು ಆಯ್ಕೆ ಮಾಡಬೇಕಿದೆ. ನಂತರ ಹೊಂಬಾಳೆ ಫಿಲಮ್ಸ್ ಅವರ ಅಧಿಕೃತವಾಗಿ ಸಿನಿಮಾದ ಚಿತ್ರೀಕರಣದ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ರಿಷಬ್ ಹೇಳಿದ್ದಾರೆ.

ಅಲ್ಲದೇ ಕಾಂತಾರ 2 ಸಿನಿಮಾದ ಘೋಷಣೆ, ಚಿತ್ರೀಕರಣ, ಬಿಡುಗಡೆ ಇದೇ ವರ್ಷ ಆಗಲಿದೆ ಎಂದ ರಿಷಬ್ ಶೆಟ್ಟಿ ಹೇಳಿದ್ದಾರೆ. ರಿಷಬ್ ಬರ್ತ್ಡೇ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ. ಇನ್ನು ಸಿನಿಮಾ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ, ಮಳೆಯಲ್ಲೇ ಸಿನಿಮಾ ಚಿತ್ರೀಕರಣವನ್ನು ಮಾಡುತ್ತೇವೆ. ಫಿಲ್ಮ್ ಗಾಗಿ ಮಾರುದ್ದ ಗಡ್ಡ ಬಿಡುತ್ತೀನಿ. ವಿಶೇಷ ಕಸರತ್ತುಗಳನ್ನು ಕಲಿಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ರಿಷಬ್ ಶೆಟ್ಟಿ ಅವರು ಮಾತನಾಡಿ, ನೀವು ನೋಡಿದ್ದು ಕಾಂತಾರ ಸಿನಿಮಾದ 2 ನೇ ಭಾಗ. ಇನ್ಮುಂದೆ ನೋಡುವುದು ನೀವು ಕಾಂತಾರದ ಭಾಗ ಒಂದನ್ನು ಎಂದು ಹೇಳಿದ್ದರು. ಏನೇ ಆಗಲಿ ಅಭಿಮಾನಿಗಳಿಗಂತೂ ತುಂಬಾ ಖುಷಿಯಾಗಿದೆ. ಮತ್ತೆ ಈ ವರ್ಷ ಕಾಂತಾರ 2 ಸಿನಿಮಾ ನೋಡಬಹುದು ಎಂದು ಮಾತನಾಡಿಕೊಳ್ತಾ ಇದ್ದಾರೆ. ಕಾಂತಾರ 2 ಸಿನಿಮಾ ಅದ್ಭುತವಾಗಿ ಮೂಡಿ ಬರಲಿ ಎಂದು ವಿಶ್ ಮಾಡ್ತಾ ಇದ್ದಾರೆ.
Director Rishabh Shetty Announce Kantara 2 Film Release Matter.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am