ಬ್ರೇಕಿಂಗ್ ನ್ಯೂಸ್
20-07-23 02:40 pm Source: Filmy Beat ಸಿನಿಮಾ
ಕಳೆದ ವರ್ಷ ಚಾರ್ಲಿ 777 ಮೂಲಕ ಗೆದ್ದು ಬೀಗಿದ್ದ ನಟ ರಕ್ಷಿತ್ ಶೆಟ್ಟಿ ಸದ್ಯ ತಮ್ಮ ಮುಂದಿನ ಚಿತ್ರಗಳಲ್ಲಿ ನಿರತರಾಗಿದ್ದಾರೆ. ಚಾರ್ಲಿ 777 ಜತೆಗೆ ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಚಿತ್ರೀಕರಣದಲ್ಲೂ ಸಹ ಬ್ಯುಸಿಯಾಗಿದ್ದರು. ಈ ಚಿತ್ರದ ಚಿತ್ರೀಕರಣ ಚಿತ್ರ ಸೆಟ್ಟೇರಿದ ಬರೋಬ್ಬರಿ ಎರಡು ವರ್ಷಗಳ ಬಳಿಕ ಮುಕ್ತಾಯಗೊಂಡಿದ್ದು, ಇದೀಗ ಬಿಡುಗಡೆಗೆ ತಯಾರಾಗಿದೆ.
ಹೌದು, ಚಂದನವನದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಸಪ್ತ ಸಾಗರದಾಚೆ ಎಲ್ಲೋ ಚಿತ್ರ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು, ಮೊದಲ ಭಾಗ ಸೈಡ್ ಎ ಸೆಪ್ಟೆಂಬರ್ 1ರಂದು ತೆರೆಗೆ ಬರಲಿದ್ದು, ಎರಡನೇ ಭಾಗ ಸೈಡ್ ಬಿ ಅಕ್ಟೋಬರ್ 20ರಂದು ಬಿಡುಗಡೆಯಾಗಲಿದೆ. ಹೀಗೆ ಎರಡೂ ಭಾಗಗಳ ಚಿತ್ರೀಕರಣವನ್ನು ಒಟ್ಟಿಗೆ ಮುಕ್ತಾಯಗೊಳಿಸಿಕೊಂಡಿರುವ ಸಪ್ತ ಸಾಗರದಾಚೆ ಎಲ್ಲೋ ಚಿತ್ರತಂಡ ಇದೀಗ ಮೊದಲ ಭಾಗದ ಸಿನಿಮಾದ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಗಳನ್ನು ಆರಂಭಿಸಿದೆ.
ಹೌದು, ಇಂದು ( ಜುಲೈ 20 ) ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಚಿತ್ರದ ಮೊದಲ ಹಾಡು ಬಿಡುಗಡೆಗೊಂಡಿದೆ. 'ಹೋರಾಟ' ಎಂಬ ಶೀರ್ಷಿಕೆ ಅಡಿಯಲ್ಲಿ ಬಿಡುಗಡೆಯಾಗಿರುವ ಸಪ್ತ ಸಾಗರದಾಚೆ ಎಲ್ಲೋ ಫಸ್ಟ್ ಸಿಂಗಲ್ ಪರಮ್ವ್ಹಾ ಮ್ಯೂಸಿಕ್ ಯುಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಂಡಿದೆ. ಈ ಹಾಡಿನಲ್ಲಿ ನಾಯಕ ಪ್ರೀತಿ ಹಾಗೂ ಬದುಕಿನಲ್ಲಿ ಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಪರಿಸ್ಥಿತಿಯನ್ನು ವಿವರಿಸಲಾಗಿದೆ. ಮಾಯೆ ಮಾಯೆ ಅರ್ಧ ಛಾಯೆ.. ಹೋರಾಟ ಹೋರಾಟ ಮುಗಿಯೋವರೆಗೆ ಈ ಹೋರಾಟ.. ಎಂಬ ಸಾಲುಗಳೊಂದಿಗೆ ಆರಂಭವಾಗುವ ಈ ಹಾಡು ಸ್ಯಾಡ್ ಸಾಂಗ್ ಪ್ರಿಯರಿಗೆ ಖಂಡಿತ ಇಷ್ಟವಾಗಲಿದೆ.
ಎಂಸಿ ಬಿಜ್ಜು ಹಾಗೂ ಕಿರಣ್ ಕಾವೇರಪ್ಪ ಬರೆದಿರುವ ನೋವಿನ ಸಾಲುಗಳಿಗೆ ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು, ಈ ಹಾಡೂ ಸಹ ಪಕ್ಕಾ ಚರಣ್ ರಾಜ್ ಫ್ಲೇವರ್ನಲ್ಲಿದೆ. ವಿಭಿನ್ನ ಸಂಗೀತ ಹಾಗೂ ರಾಗ ಕೇಳುಗರ ಗಮನ ಸೆಳೆಯುವಂತಿದೆ. ಇನ್ನು ಕನ್ನಡದ ರ್ಯಾಪರ್ ಎಂಸಿ ಬಿಜ್ಜು ಈ ಹಾಡಿಗೆ ಸಾಹಿತ್ಯ ಬರೆಯುವುದು ಮಾತ್ರವಲ್ಲದೇ ದನಿಯನ್ನೂ ಸಹ ನೀಡಿದ್ದಾರೆ.
ಈ ಇಬ್ಬರಿಗೂ ನನ್ನ ಮೇಲೆ ನಂಬಿಕೆ ಇದ್ರೆ ಬರಲಿ ಇಲ್ಲಾಂದ್ರೆ ಬೇಡ:
ಈ ಹಿಂದೆ ಇದೇ ರೀತಿ ಪಾಪ್ಕಾರ್ನ್ ಮಂಕಿ ಟೈಗರ್ ಚಿತ್ರಕ್ಕೆ ನಾಗಾರ್ಜುನ ಶರ್ಮಾ ಬರೆದಿದ್ದ ಹಾಡನ್ನು ರ್ಯಾಪರ್ ರಾಹುಲ್ ಡಿಟ್ಟೋ ಜತೆ ಕೈಜೋಡಿಸಿ ರ್ಯಾಪ್ ಮಾಡಿಸಿದ್ದ ಚರಣ್ ರಾಜ್ ಇಲ್ಲಿಯೂ ಸಹ ಎಂಸಿ ಬಿಜ್ಜು ಜತೆ ಸೇರಿ ರ್ಯಾಪ್ ಮಾಡಿಸಿದ್ದಾರೆ. ಎಂಸಿ ಬಿಜ್ಜು ಜತೆ ಕೀರ್ತನ್ ಹೊಳ್ಳ ಸಹ ಈ ಹಾಡಿಗೆ ದನಿ ನೀಡಿದ್ದು, ಹಾಡು ನಿಧಾನವಾಗಿ ಕೇಳುಗರಿಗೆ ಇಷ್ಟವಾಗುವ ಹಾಗಿದೆ. ಇನ್ನು ಹಾಡಿನ ಸಾಹಿತ್ಯ ವಿನೂತನವಾಗಿದ್ದು, ಯೂತ್ಸ್ಗೆ ಖಚಿತವಾಗಿ ಈ ಹಾಡು ಇಷ್ಟವಾಗಲಿದೆ.
Sapta Sagadache ello sse movie first single sung by mc bijju is out now.
12-05-24 07:08 pm
Bangalore Correspondent
Congress MLA Kadalur Uday gowda vs Kumaraswam...
12-05-24 03:45 pm
Devaraje Gowda arrested; ರಾಜ್ಯಕ್ಕೆ ಪ್ರಜ್ವಲ್ ಪ...
12-05-24 10:51 am
ಪರಿಷತ್ ಚುನಾವಣೆ ; ಒಂದು ಸ್ಥಾನ ಬಿಟ್ಟು ಐದು ಸ್ಥಾನಗ...
11-05-24 11:20 pm
SP Dinesh, Ayanur Manjunath, Congress: ನೈರುತ್...
11-05-24 09:46 pm
11-05-24 09:43 pm
HK News Desk
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
Arvind Kejriwal, Supreme court: ಸಿಎಂ ಕೇಜ್ರಿವಾ...
10-05-24 03:46 pm
Kerala Arali Flower death: ಮೊಬೈಲ್ ನಲ್ಲಿ ಮಾತನಾ...
10-05-24 10:06 am
12-05-24 06:30 pm
Mangalore Correspondent
ಕುಂದಾಪುರದ ಫೈನಾನ್ಶಿಯರ್ ಹತ್ಯೆ ಆರೋಪಿಗೆ ಹಿರಿಯಡ್ಕ...
12-05-24 05:41 pm
Kadaba illegal sand raid, Mangalore crime: ಕಡ...
12-05-24 04:34 pm
Mangalore University: ಮಂಗಳೂರು ವಿವಿ ಕಾಲೇಜಿನಲ್ಲ...
12-05-24 03:04 pm
Mangalore Photographer Jitesh Prasad: ಮೂಡುಬಿದ...
12-05-24 10:45 am
12-05-24 01:53 pm
Mangalore Correspondent
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm
Kalaburgi youth murdered: ಕಲಬುರಗಿ ; ಕಾಂಗ್ರೆಸ್...
10-05-24 02:04 pm
Cyber fraud Kodagu, Kerala, Sim card: ಸೈಬರ್ ವ...
10-05-24 12:44 pm