ಬ್ರೇಕಿಂಗ್ ನ್ಯೂಸ್
20-07-23 02:40 pm Source: Filmy Beat ಸಿನಿಮಾ
ಕಳೆದ ವರ್ಷ ಚಾರ್ಲಿ 777 ಮೂಲಕ ಗೆದ್ದು ಬೀಗಿದ್ದ ನಟ ರಕ್ಷಿತ್ ಶೆಟ್ಟಿ ಸದ್ಯ ತಮ್ಮ ಮುಂದಿನ ಚಿತ್ರಗಳಲ್ಲಿ ನಿರತರಾಗಿದ್ದಾರೆ. ಚಾರ್ಲಿ 777 ಜತೆಗೆ ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಚಿತ್ರೀಕರಣದಲ್ಲೂ ಸಹ ಬ್ಯುಸಿಯಾಗಿದ್ದರು. ಈ ಚಿತ್ರದ ಚಿತ್ರೀಕರಣ ಚಿತ್ರ ಸೆಟ್ಟೇರಿದ ಬರೋಬ್ಬರಿ ಎರಡು ವರ್ಷಗಳ ಬಳಿಕ ಮುಕ್ತಾಯಗೊಂಡಿದ್ದು, ಇದೀಗ ಬಿಡುಗಡೆಗೆ ತಯಾರಾಗಿದೆ.
ಹೌದು, ಚಂದನವನದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಸಪ್ತ ಸಾಗರದಾಚೆ ಎಲ್ಲೋ ಚಿತ್ರ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು, ಮೊದಲ ಭಾಗ ಸೈಡ್ ಎ ಸೆಪ್ಟೆಂಬರ್ 1ರಂದು ತೆರೆಗೆ ಬರಲಿದ್ದು, ಎರಡನೇ ಭಾಗ ಸೈಡ್ ಬಿ ಅಕ್ಟೋಬರ್ 20ರಂದು ಬಿಡುಗಡೆಯಾಗಲಿದೆ. ಹೀಗೆ ಎರಡೂ ಭಾಗಗಳ ಚಿತ್ರೀಕರಣವನ್ನು ಒಟ್ಟಿಗೆ ಮುಕ್ತಾಯಗೊಳಿಸಿಕೊಂಡಿರುವ ಸಪ್ತ ಸಾಗರದಾಚೆ ಎಲ್ಲೋ ಚಿತ್ರತಂಡ ಇದೀಗ ಮೊದಲ ಭಾಗದ ಸಿನಿಮಾದ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಗಳನ್ನು ಆರಂಭಿಸಿದೆ.

ಹೌದು, ಇಂದು ( ಜುಲೈ 20 ) ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಚಿತ್ರದ ಮೊದಲ ಹಾಡು ಬಿಡುಗಡೆಗೊಂಡಿದೆ. 'ಹೋರಾಟ' ಎಂಬ ಶೀರ್ಷಿಕೆ ಅಡಿಯಲ್ಲಿ ಬಿಡುಗಡೆಯಾಗಿರುವ ಸಪ್ತ ಸಾಗರದಾಚೆ ಎಲ್ಲೋ ಫಸ್ಟ್ ಸಿಂಗಲ್ ಪರಮ್ವ್ಹಾ ಮ್ಯೂಸಿಕ್ ಯುಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಂಡಿದೆ. ಈ ಹಾಡಿನಲ್ಲಿ ನಾಯಕ ಪ್ರೀತಿ ಹಾಗೂ ಬದುಕಿನಲ್ಲಿ ಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಪರಿಸ್ಥಿತಿಯನ್ನು ವಿವರಿಸಲಾಗಿದೆ. ಮಾಯೆ ಮಾಯೆ ಅರ್ಧ ಛಾಯೆ.. ಹೋರಾಟ ಹೋರಾಟ ಮುಗಿಯೋವರೆಗೆ ಈ ಹೋರಾಟ.. ಎಂಬ ಸಾಲುಗಳೊಂದಿಗೆ ಆರಂಭವಾಗುವ ಈ ಹಾಡು ಸ್ಯಾಡ್ ಸಾಂಗ್ ಪ್ರಿಯರಿಗೆ ಖಂಡಿತ ಇಷ್ಟವಾಗಲಿದೆ.
ಎಂಸಿ ಬಿಜ್ಜು ಹಾಗೂ ಕಿರಣ್ ಕಾವೇರಪ್ಪ ಬರೆದಿರುವ ನೋವಿನ ಸಾಲುಗಳಿಗೆ ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು, ಈ ಹಾಡೂ ಸಹ ಪಕ್ಕಾ ಚರಣ್ ರಾಜ್ ಫ್ಲೇವರ್ನಲ್ಲಿದೆ. ವಿಭಿನ್ನ ಸಂಗೀತ ಹಾಗೂ ರಾಗ ಕೇಳುಗರ ಗಮನ ಸೆಳೆಯುವಂತಿದೆ. ಇನ್ನು ಕನ್ನಡದ ರ್ಯಾಪರ್ ಎಂಸಿ ಬಿಜ್ಜು ಈ ಹಾಡಿಗೆ ಸಾಹಿತ್ಯ ಬರೆಯುವುದು ಮಾತ್ರವಲ್ಲದೇ ದನಿಯನ್ನೂ ಸಹ ನೀಡಿದ್ದಾರೆ.

ಈ ಇಬ್ಬರಿಗೂ ನನ್ನ ಮೇಲೆ ನಂಬಿಕೆ ಇದ್ರೆ ಬರಲಿ ಇಲ್ಲಾಂದ್ರೆ ಬೇಡ:
ಈ ಹಿಂದೆ ಇದೇ ರೀತಿ ಪಾಪ್ಕಾರ್ನ್ ಮಂಕಿ ಟೈಗರ್ ಚಿತ್ರಕ್ಕೆ ನಾಗಾರ್ಜುನ ಶರ್ಮಾ ಬರೆದಿದ್ದ ಹಾಡನ್ನು ರ್ಯಾಪರ್ ರಾಹುಲ್ ಡಿಟ್ಟೋ ಜತೆ ಕೈಜೋಡಿಸಿ ರ್ಯಾಪ್ ಮಾಡಿಸಿದ್ದ ಚರಣ್ ರಾಜ್ ಇಲ್ಲಿಯೂ ಸಹ ಎಂಸಿ ಬಿಜ್ಜು ಜತೆ ಸೇರಿ ರ್ಯಾಪ್ ಮಾಡಿಸಿದ್ದಾರೆ. ಎಂಸಿ ಬಿಜ್ಜು ಜತೆ ಕೀರ್ತನ್ ಹೊಳ್ಳ ಸಹ ಈ ಹಾಡಿಗೆ ದನಿ ನೀಡಿದ್ದು, ಹಾಡು ನಿಧಾನವಾಗಿ ಕೇಳುಗರಿಗೆ ಇಷ್ಟವಾಗುವ ಹಾಗಿದೆ. ಇನ್ನು ಹಾಡಿನ ಸಾಹಿತ್ಯ ವಿನೂತನವಾಗಿದ್ದು, ಯೂತ್ಸ್ಗೆ ಖಚಿತವಾಗಿ ಈ ಹಾಡು ಇಷ್ಟವಾಗಲಿದೆ.
Sapta Sagadache ello sse movie first single sung by mc bijju is out now.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm