ಬ್ರೇಕಿಂಗ್ ನ್ಯೂಸ್
08-08-23 02:29 pm Source: News18 Kannada ಸಿನಿಮಾ
ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಚಿತ್ರ ಮಂದಿರಗಳಿಗೆ ಅಪ್ಪಳಿಸಲಿದೆ. ಇದೇ ಕಾರಣಕ್ಕೆ ಹಲವು ಕಂಪನಿಗಳು ರಜೆ ಘೋಷಿಸಿವೆ! ಆಗಸ್ಟ್ 10 ರಂದು ಖಾಸಗಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಮತ್ತು ಚೆನ್ನೈನಲ್ಲಿರುವ ಎರಡೂ ಶಾಖೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
UNA AQUA ಎಂಬ ಕಂಪನಿಯೇ ಜೈಲರ್ ಚಿತ್ರಕ್ಕೆ ಆಗಸ್ಟ್ 10ರಂದು ರಜೆ ಘೋಷಿಸಿದ ಕಂಪನಿ. ರಜೆ ಘೋಷಣೆಯ ಸುತ್ತೋಲೆ ಈಗ ಭಾರೀ ವೈರಲ್ ಆಗುತ್ತಿದೆ. ‘ಆಗಸ್ಟ್ 10ರಂದು ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗಾಗು ನಾವು ನಮ್ಮ ಕಂಪನಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.



ಅಲ್ಲದೇ ಸುತ್ತೋಲೆಯಲ್ಲಿ”ಜೈಲರ್ ಸಿನಿಮಾಗೆ ಉಚಿತ ಟಿಕೆಟ್ ಕೊಡುತ್ತಿದ್ದೇವೆ. ನಮ್ಮ ತಾತನ ಕಾಲಕ್ಕೆ, ತಂದೆಯ ಕಾಲಕ್ಕೆ, ನಮ್ಮ ಕಾಲಕ್ಕೆ, ನಮ್ಮ ಮಕ್ಕಳ-ಮೊಮ್ಮಕ್ಕಳ ಕಾಲಕ್ಕೆ ಒಬ್ಬರೇ ಸೂಪರ್ ಸ್ಟಾರ್’ ಎಂದು ಬರೆಯಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಎಲ್ಲೆಡೆ ಬುಕಿಂಗ್ ಶುರುವಾಗಿದ್ದು, ಸಿನಿಮಾ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.


ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಗಳಿವೆ. ತಮನ್ನಾ, ರಜನಿಕಾಂತ್ ಜೊತೆ ಮಸ್ತ್ ಸ್ಟೆಪ್ಸ್ ಹಾಕಿದ್ದು, ಕವಲಾ ಸಾಂಗ್ ಸೂಪರ್ ಹಿಟ್ ಆಗಿದೆ. ಈ ಚಿತ್ರ ಆಗಸ್ಟ್ 10 ರಂದು ಸ್ವಾತಂತ್ರ್ಯೋತ್ಸವದ ಉಡುಗೊರೆಯಾಗಿ ಬಿಡುಗಡೆಯಾಗಲಿದೆ.
Company Declares Holiday for Rajinikanth Jailer Release August 10 Office in Bengaluru.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm