ಬ್ರೇಕಿಂಗ್ ನ್ಯೂಸ್
22-08-23 02:04 pm Source: News18 Kannada ಸಿನಿಮಾ
ಇದೇ ವಿಚಾರಕ್ಕೆ ಕೆಲವು ತಮಿಳು ಅಭಿಮಾನಿಗಳು ರಜನಿಕಾಂತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಟ್ರೋಲ್ ಮಾಡಿದ್ರು. ಯುವಕರ ಕಣ್ಣು ಹೇಗೆ ತೆರೆಯುತ್ತೀರಿ ಎಂದು ಕೆಲವರು ರಜನಿಕಾಂತ್ ಅವರನ್ನು ಟೀಕಿಸಿದ್ರು. ತಮಿಳಿನ ಗೌರವವನ್ನು ಯುಪಿ ಜೊತೆ ಒತ್ತೆ ಇಟ್ಟಿದ್ದೀರಾ? ಎಂದೆಲ್ಲಾ ಕಮೆಂಟ್ ಮಾಡಿದ್ರು. ಇನ್ನು ಕೆಲವರು ರಜನಿ ಸ್ಟೈಲ್ಗೆ ಬೆಂಬಲ ನೀಡಿದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ರಜನಿಕಾಂತ್ ಒಂದೇ ಮಾತಿನಲ್ಲಿ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಇತ್ತೀಚೆಗಷ್ಟೇ ಚೆನ್ನೈಗೆ ಬಂದಿಳಿದ ರಜನಿಕಾಂತ್ ಈ ವಿವಾದದ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದರು. ತಮ್ಮ ಬಗ್ಗೆ ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡಿದರು. ಧಾರ್ಮಿಕ ಗುರುಗಳು, ಮಠಾಧೀಶರು, ಯೋಗಿ ಅಥವಾ ಸ್ವಾಮೀಜಿಗಳು ಯುವಕರಾಗಲಿ, ಹಿರಿಯರಾಗಲಿ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ. ಅದು ನನ್ನ ಅಭ್ಯಾಸ ಎಂದು ರಜನಿಕಾಂತ್ ಹೇಳಿದ್ದಾರೆ. ಈ ಮೂಲಕ ವಿವಾದಕ್ಕೆ ತೆರೆ ಎಳೆದಂತಿದೆ.
/popdiaries/media/media_files/KsxofSO3zhObdzBTL7JQ.png)
500 ಕೋಟಿ ಭರ್ಜರಿ ಕಲೆಕ್ಷನ್
ಇತ್ತೀಚೆಗಷ್ಟೇ ಜೈಲರ್ ಸಿನಿಮಾದ ಮೂಲಕ ರಜನಿಕಾಂತ್ ಸೂಪರ್ ಸಕ್ಸಸ್ ಪಡೆದಿದ್ದರು. ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ಲಕ್ನೋದ ಪಿವಿಆರ್ ನಲ್ಲಿ ಜೈಲರ್ ಸಿನಿಮಾ ವೀಕ್ಷಿಸಿದರು. ಲಕ್ನೋದಲ್ಲಿ ಸಿನಿಮಾ ನೋಡುವ ಮುನ್ನ ‘ಸಿಎಂ ಜೊತೆ ಸಿನಿಮಾ ನೋಡುತ್ತೇನೆ, ಸಿನಿಮಾ ಹಿಟ್ ಆಗಿರುವುದು ದೇವರ ಆಶೀರ್ವಾದ’ ಎಂದು ರಜನಿ ಹೇಳಿದ್ದರು.. ಸದ್ಯ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದು 500 ಕೋಟಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.

ಅಯೋಧ್ಯೆಯೇ ಒಂದು ಅದ್ಭುತ
ಜೈಲರ್ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ (Super Star Rajanikanth) ನಿನ್ನೆ (ಆಗಸ್ಟ್ 20) ಅಯೋಧ್ಯೆಗೆ ಭೇಟಿ ನೀಡಿದ್ರು. ಪತ್ನಿ ಜೊತೆಗೆ ಅಯೋಧ್ಯೆಗೆ (Ayodhya) ಭೇಟಿ ಕೊಟ್ಟ ನಟ ರಜನಿಕಾಂತ್, ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ರಾಮ ಲಲ್ಲಾ ಪ್ರತಿಮೆ ಇರಿಸಲಾಗಿರುವ ತಾತ್ಕಾಲಿಕ ದೇಗುಲಕ್ಕೆ ನಮಿಸಿದ್ರು. ರಾಮ ಮಂದಿರಕ್ಕೆ ಬರುವ ಮುನ್ನ ಹನುಮಾನ್ ಗರ್ಹಿ ದೇವಸ್ಥಾನಕ್ಕೂ ರಜನಿಕಾಂತ್ ಭೇಟಿ ನೀಡಿದ್ದರು. ಮಾಧ್ಯಮಗಳ ಜೊತೆ ಮಾತನಾಡಿದ ರಜನಿಕಾಂತ್, ತಮ್ಮ ಬಹುದಿನಗಳ ಕನಸು ನನಸಾಗಿದೆ. ಅಯೋಧ್ಯೆಗೆ ಭೇಟಿ ನೀಡುವ ಭಾಗ್ಯ ಸಿಕ್ಕಿದೆ ಎಂದು ಹೇಳಿದ್ರು. ಜೊತೆಗೆ ಅಯೋಧ್ಯೆಯೇ ಒಂದು ಅದ್ಭುತ ಎಂದು ವರ್ಣಿಸಿದ್ದರು.
Actor Rajinikanth Clarifies why he Touching Yogi Adityanath Feet.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm