ಬ್ರೇಕಿಂಗ್ ನ್ಯೂಸ್
22-08-23 02:04 pm Source: News18 Kannada ಸಿನಿಮಾ
ಇದೇ ವಿಚಾರಕ್ಕೆ ಕೆಲವು ತಮಿಳು ಅಭಿಮಾನಿಗಳು ರಜನಿಕಾಂತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಟ್ರೋಲ್ ಮಾಡಿದ್ರು. ಯುವಕರ ಕಣ್ಣು ಹೇಗೆ ತೆರೆಯುತ್ತೀರಿ ಎಂದು ಕೆಲವರು ರಜನಿಕಾಂತ್ ಅವರನ್ನು ಟೀಕಿಸಿದ್ರು. ತಮಿಳಿನ ಗೌರವವನ್ನು ಯುಪಿ ಜೊತೆ ಒತ್ತೆ ಇಟ್ಟಿದ್ದೀರಾ? ಎಂದೆಲ್ಲಾ ಕಮೆಂಟ್ ಮಾಡಿದ್ರು. ಇನ್ನು ಕೆಲವರು ರಜನಿ ಸ್ಟೈಲ್ಗೆ ಬೆಂಬಲ ನೀಡಿದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ರಜನಿಕಾಂತ್ ಒಂದೇ ಮಾತಿನಲ್ಲಿ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಇತ್ತೀಚೆಗಷ್ಟೇ ಚೆನ್ನೈಗೆ ಬಂದಿಳಿದ ರಜನಿಕಾಂತ್ ಈ ವಿವಾದದ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದರು. ತಮ್ಮ ಬಗ್ಗೆ ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡಿದರು. ಧಾರ್ಮಿಕ ಗುರುಗಳು, ಮಠಾಧೀಶರು, ಯೋಗಿ ಅಥವಾ ಸ್ವಾಮೀಜಿಗಳು ಯುವಕರಾಗಲಿ, ಹಿರಿಯರಾಗಲಿ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ. ಅದು ನನ್ನ ಅಭ್ಯಾಸ ಎಂದು ರಜನಿಕಾಂತ್ ಹೇಳಿದ್ದಾರೆ. ಈ ಮೂಲಕ ವಿವಾದಕ್ಕೆ ತೆರೆ ಎಳೆದಂತಿದೆ.
/popdiaries/media/media_files/KsxofSO3zhObdzBTL7JQ.png)
500 ಕೋಟಿ ಭರ್ಜರಿ ಕಲೆಕ್ಷನ್
ಇತ್ತೀಚೆಗಷ್ಟೇ ಜೈಲರ್ ಸಿನಿಮಾದ ಮೂಲಕ ರಜನಿಕಾಂತ್ ಸೂಪರ್ ಸಕ್ಸಸ್ ಪಡೆದಿದ್ದರು. ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ಲಕ್ನೋದ ಪಿವಿಆರ್ ನಲ್ಲಿ ಜೈಲರ್ ಸಿನಿಮಾ ವೀಕ್ಷಿಸಿದರು. ಲಕ್ನೋದಲ್ಲಿ ಸಿನಿಮಾ ನೋಡುವ ಮುನ್ನ ‘ಸಿಎಂ ಜೊತೆ ಸಿನಿಮಾ ನೋಡುತ್ತೇನೆ, ಸಿನಿಮಾ ಹಿಟ್ ಆಗಿರುವುದು ದೇವರ ಆಶೀರ್ವಾದ’ ಎಂದು ರಜನಿ ಹೇಳಿದ್ದರು.. ಸದ್ಯ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದು 500 ಕೋಟಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.

ಅಯೋಧ್ಯೆಯೇ ಒಂದು ಅದ್ಭುತ
ಜೈಲರ್ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ (Super Star Rajanikanth) ನಿನ್ನೆ (ಆಗಸ್ಟ್ 20) ಅಯೋಧ್ಯೆಗೆ ಭೇಟಿ ನೀಡಿದ್ರು. ಪತ್ನಿ ಜೊತೆಗೆ ಅಯೋಧ್ಯೆಗೆ (Ayodhya) ಭೇಟಿ ಕೊಟ್ಟ ನಟ ರಜನಿಕಾಂತ್, ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ರಾಮ ಲಲ್ಲಾ ಪ್ರತಿಮೆ ಇರಿಸಲಾಗಿರುವ ತಾತ್ಕಾಲಿಕ ದೇಗುಲಕ್ಕೆ ನಮಿಸಿದ್ರು. ರಾಮ ಮಂದಿರಕ್ಕೆ ಬರುವ ಮುನ್ನ ಹನುಮಾನ್ ಗರ್ಹಿ ದೇವಸ್ಥಾನಕ್ಕೂ ರಜನಿಕಾಂತ್ ಭೇಟಿ ನೀಡಿದ್ದರು. ಮಾಧ್ಯಮಗಳ ಜೊತೆ ಮಾತನಾಡಿದ ರಜನಿಕಾಂತ್, ತಮ್ಮ ಬಹುದಿನಗಳ ಕನಸು ನನಸಾಗಿದೆ. ಅಯೋಧ್ಯೆಗೆ ಭೇಟಿ ನೀಡುವ ಭಾಗ್ಯ ಸಿಕ್ಕಿದೆ ಎಂದು ಹೇಳಿದ್ರು. ಜೊತೆಗೆ ಅಯೋಧ್ಯೆಯೇ ಒಂದು ಅದ್ಭುತ ಎಂದು ವರ್ಣಿಸಿದ್ದರು.
Actor Rajinikanth Clarifies why he Touching Yogi Adityanath Feet.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm