ಬ್ರೇಕಿಂಗ್ ನ್ಯೂಸ್
01-09-23 02:17 pm Source: News18 Kannada ಸಿನಿಮಾ
ಡಿವೈನ್ ಸ್ಟಾರ್ ಇನ್ನು ಯಾವ ಸಿನಿಮಾ ಮಾಡುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫೇಮಸ್ ಆದ ಕನ್ನಡ ಸ್ಟಾರ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೆಲ್ ಮುಗಿದ ನಂತರ ಏನ್ ಮಾಡ್ತಾರೆ? ಕಾಂತಾರ ಹಿಟ್ ಆಯ್ತು. ಕಾಂತಾರ 2 ಸಿನಿಮಾದ ಸ್ಕ್ರಿಪ್ಟ್ ಕೂಡಾ ರೆಡಿಯಾಗಿದೆ. ಇನ್ನೇನು ಮೂವಿ ಶೂಟಿಂಗ್ ಶುರುವಾಗಬೇಕು. ಸರಿ, ಆದ್ರೆ ಈ ಸಿನಿಮಾವನ್ನು ಮುಗಿಸಿ ರಿಷಬ್ ಶೆಟ್ಟಿ ಏನು ಮಾಡುತ್ತಾರೆ? ಮತ್ತೆ ಡೈರೆಕ್ಟರ್ ಕ್ಯಾಪ್ ಧರಿಸ್ತಾರಾ ಅಥವಾ ನಟನಾಗಿ ಮಿಂಚುತ್ತಾರಾ?
ಹೀಗೊಂದು ಕುತೂಹಲ ಎಲ್ಲರಲ್ಲೂ ಇದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕಾಂತಾರ 2 ನಂತರ ಬಾಲಿವುಡ್ ಡೈರೆಕ್ಟರ್ ಜೊತೆ ಮೂವಿ ಮಾಡಲಿದ್ದಾರೆ. ಅದೂ ಸಾಮಾನ್ಯ ಡೈರೆಕ್ಟರ್ ಅಲ್ಲ, ಜೋಧಾ ಅಕ್ಬರ್, ಲಗಾನ್, ಮೊಹೆಂಜದಾರೋದಂತಹ ಸಿನಿಮಾ ನಿರ್ದೇಶಿಸಿದ ಬಾಲಿವುಡ್ ನಿರ್ದೇಶಕ. ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವರಿಕೆರ್ ಅವರು ರಿಷಬ್ ಶೆಟ್ಟಿ ಅವರಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದ್ದು ಕಾಂತಾರ 2 ಸಿನಿಮಾ ಮುಗಿಯುತ್ತಿದ್ದಂತೆ ಈ ಸಿನಿಮಾದ ಕೆಲಸಗಳು ಶುರುವಾಗಲಿದೆಯಂತೆ.


ಈ ಒಂದು ಸುದ್ದಿಯನ್ನು ಹಿರಿಯ ಸಿನಿಮಾ ವರದಿಗಾದ ಹಿಮೇಶ್ ಅವರು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. ಈ ಸಿನಿಮಾ ಹಿಂದಿ, ತೆಲುಗು, ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗಲಿದೆ. ಅಶುತೋಷ್ ಹಾಗೂ ರಿಷಬ್ ಮಧ್ಯೆ ಮಾತುಕತೆಯೂ ನಡೆದಿದೆ ಎನ್ನಲಾಗಿದೆ. ಕಳೆದ ತಿಂಗಳಲ್ಲಿ ಇವರಿಬ್ಬರೂ ಹಲವಾರು ಬಾರಿ ಭೇಟಿಯಾಗಿದ್ದಾರೆ ಎನ್ನಲಾಗಿದೆ. ಇದೀಗ ಇಬ್ಬರೂ ಮೊದಲ ಸಿನಿಮಾದ ಕೆಲಸ ಶುರು ಮಾಡಲು ರೆಡಿಯಾಗಿದ್ದಾರೆ.


2024 ಅರ್ಧದದಲ್ಲಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಕಾಂತಾರ 2 ಸಿನಿಮಾದ ಶೆಡ್ಯೂಲ್ಗೆ ಅವಲಂಬಿಸಿ ಈ ಸಿನಿಮಾ ಸೆಟ್ಟೇರಲಿದೆ. ಲಗಾನಗ ಸ್ವದೇಶ್, ಜೋಧಾ ಅಕ್ಬರ್, ಖೇಲೇ ಅಶುತೋಷ್ ಅವರ ಹಿಟ್ ಸಿನಿಮಾಗಳು.
Lagan Fame Bollywood Director Ashutosh Gowariker to Direct Kantara Fame Rishab Shetty.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm