ಬ್ರೇಕಿಂಗ್ ನ್ಯೂಸ್
12-11-20 05:40 pm Headline Karnataka News Network ಸಿನಿಮಾ
ಮುಂಬೈ, ನವೆಂಬರ್ 12: ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಆಸಿಫ್ ಬಾಸ್ರಾ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
53 ವರ್ಷದ ಆಸಿಫ್ ಬಾಸ್ರಾ ಧರ್ಮಶಾಲಾದಲ್ಲಿ ಐದು ವರ್ಷಗಳಿಂದ ಫ್ಲ್ಯಾಟ್ ಒಂದನ್ನು ಬಾಡಿಗೆ ಪಡೆದು ವಾಸವಿದ್ದರು. ಆತ್ಮಹತ್ಯೆ ವಿಚಾರ ಗೊತ್ತಾಗುತ್ತಲೇ ಫಾರೆನ್ಸಿಕ್ ತಜ್ಞರು ಮತ್ತು ಪೊಲೀಸರು ಧಾವಿಸಿದ್ದಾರೆ. ಆದರೆ, ಸಾವಿಗೆ ಕಾರಣ ಏನಿರಬಹುದು ಎನ್ನೋದು ಇನ್ನೂ ಗೊತ್ತಾಗಿಲ್ಲ.
ಇತ್ತೀಚೆಗೆ ಬಾಲಿವುಡ್ ನಟ ಸುಶಾಂತ್ ಸಾವು ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಆಸಿಫ್ ಬಾಸ್ರಾ ಕೂಡ ಸುಶಾಂತ್ ಜೊತೆಗೆ ಕೈ ಪೊ ಚೆ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ರಾಣಿ ಮುಖರ್ಜಿಯ ಹಿಚ್ ಕಿ, ಹೃತಿಕ್ ರೋಶನ್ ನಟನೆಯ ಕೃಷ್ 3, ಶಾಹಿದ್ ಕಪೂರ್ ಮತ್ತು ಕರಿನಾ ಕಪೂರ್ ನಟಿಸಿದ್ದ ಜಬ್ ವೆ ಮತ್, ಅನುರಾಗ್ ಕಶ್ಯಪ್ ಅವರ ಬ್ಲಾಕ್ ಫ್ರೈಡೇ, ಸೈಫ್ ಆಲಿ ಖಾನ್ ಅವರ ಕಾಲಾಕಂದಿ ಚಿತ್ರಗಳಲ್ಲಿ ನಟಿಸಿದ್ದರು. ಟಿವಿ ಕಿರುತೆರೆ ಮತ್ತು ರಂಗಭೂಮಿಯಲ್ಲೂ ಆಸಿಫ್ ಬಾಸ್ರಾ ದೊಡ್ಡ ಹೆಸರು ಮಾಡಿದ್ದರು. ಆಂಧ್ರಪ್ರದೇಶದ ಅಮರಾವತಿಯಲ್ಲಿ ಜನಿಸಿದ್ದ ಆಸಿಫ್, 1989ರಲ್ಲಿ ಮುಂಬೈಗೆ ಪಯಣ ಬೆಳೆಸಿದ್ದರು. ಅಲ್ಲಿಂದಲೇ ರಂಗಭೂಮಿ ಕಲಾವಿದನಾಗಿ ತೊಡಗಿಸಿಕೊಂಡು ಹೆಸರು ಗಳಿಸಿದ್ದರು. ಇತ್ತೀಚಿನ ಎರಡು ದಶಕಗಳಲ್ಲಿ ಬಾಲಿವುಡ್ ಚಿತ್ರರಂಗದಲ್ಲಿ ಕಾಣಿಸಿಕೊಂಡಿದ್ದರು.
ಆಸಿಫ್ ಬಾಸ್ರಾ ಸಾವಿನ ಬಗ್ಗೆ ಬಾಲಿವುಡ್ ದಿಗ್ಗಜರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಶಾಕಿಂಗ್ ನ್ಯೂಸ್. ಲಾಕ್ಡೌನ್ ಮೊದಲು ನಾವು ಜೊತೆಯಾಗೇ ನಟಿಸಿದ್ದೆವು. ಇದನ್ನು ನಂಬಲಾಗುತ್ತಿಲ್ಲ ಎಂದು ನಟ ಮನೋಜ್ ಬಾಜಪೇಯಿ ಹೇಳಿದ್ದಾರೆ.
Film actor Asif Basra was found hanging in a private complex in Dharamshala. Forensic team is at the spot and police is investigating the matter: SSP Kangra Vimukt Ranjan. #HimachalPradesh (Picture credit: Asif Basra's website) pic.twitter.com/nxpWNLi8VU
— ANI (@ANI) November 12, 2020
Actor Asif Basra was found dead in Himachal Pradesh's Mcleodganj, the police have said. A forensic team has arrived to find out how he died, the police said, adding they are investigating whether it was death by suicide. He was 53.
01-09-25 06:59 pm
Bangalore Correspondent
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
R. Ashoka: ಸೆ.01 ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎ...
31-08-25 07:17 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm