ಬ್ರೇಕಿಂಗ್ ನ್ಯೂಸ್
14-04-24 03:12 pm Bengaluru Correspondent ಸಿನಿಮಾ
ಬೆಂಗಳೂರು, ಏ 14: ಸ್ಯಾಂಡಲ್ವುಡ್ನಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಸಾವನ್ನಪ್ಪಿದ್ದಾರೆ. ಮಹಾಲಕ್ಷ್ಮೀ ಲೇಔಟ್ನಲ್ಲಿರುವ ಅವರ ನಿವಾಸದಲ್ಲೇ ಜಗದೀಶ್ ನಿಧನರಾಗಿದ್ದು, ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸೌಂದರ್ಯ ಜಗದೀಶ್ ಅವರ ಸಾವು ಚಿತ್ರೋದ್ಯಮಕ್ಕೆ ಆಘಾತ ನೀಡಿದ್ದು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ
ಮಹಾಲಕ್ಷ್ಮೀ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲೇ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದು, ಕೂಡಲೇ ಅವರನ್ನು ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಅಷ್ಟರಲ್ಲಾಗಲೇ ಜಗದೀಶ್ ನಿಧನರಾಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಜಗದೀಶ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ನಿಖರ ಕಾರಣವೇನು ಎಂಬುದು ಬಹಿರಂಗವಾಗಿಲ್ಲ. ಆದರೆ ಮೂಲಗಳ ನೀಡಿರುವ ಮಾಹಿತಿ ಪ್ರಕಾರ, ಈಚೆಗೆ ಆರ್ಥಿಕವಾಗಿ ಜಗದೀಶ್ ತುಂಬ ನಷ್ಟದಲ್ಲಿದ್ದರು ಮತ್ತು ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂಬ ಮಾತುಗಳು ಕೇಳಿಬಂದಿವೆ.
ಚಿತ್ರರಂಗದ ಜೊತೆ ಸೌಂದರ್ಯ ಜಗದೀಶ್ ಒಡನಾಟ ;
ಬಹುತಾರಾಗಣದ 'ಮಸ್ತ್ ಮಜಾ ಮಾಡಿ' ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕರಾಗಿ ಸೌಂದರ್ಯ ಜಗದೀಶ್ ಎಂಟ್ರಿ ನೀಡಿದರು. ಆನಂತರ ಪುತ್ರನಿಗಾಗಿ 'ಅಪ್ಪು ಪಪ್ಪು' ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಪುತ್ರ ಸ್ನೇಹಿತ್ ಅವರನ್ನು ಚಿತ್ರರಂಗದಲ್ಲಿ ಬೆಳೆಸಬೇಕೆಂಬುದು ಅವರ ಗುರಿ ಆಗಿತ್ತು. ಇದರ ಜೊತೆಗೆ 'ಸ್ನೇಹಿತರು', 'ರಾಮ್ ಲೀಲಾ' ಸಿನಿಮಾಗಳನ್ನು ಕೂಡ ಸೌಂದರ್ಯ ಜಗದೀಶ್ ನಿರ್ಮಾಣ ಮಾಡಿದ್ದರು.
ಈಚೆಗಷ್ಟೇ ಮಗಳ ಮದುವೆ ಮಾಡಿದ್ದ ಜಗದೀಶ್ ;
ಜಗದೀಶ್ ಪುತ್ರಿ ಸೌಂದರ್ಯ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಕೆಲ ದಿನಗಳ ಹಿಂದಷ್ಟೇ ಅವರ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದರು. ಈ ಮದುವೆಗೆ ಚಿತ್ರರಂಗದ ಗಣ್ಯರು ಆಗಮಿಸಿದ್ದರು. ಆದರೆ ಮಗಳ ಮದುವೆ ಮಾಡಿ, ತಿಂಗಳು ಕಳೆಯುವುದರೊಳಗೆ ಈ ರೀತಿ ಆಗಿರುವುದು ಬೇಸರದ ಸಂಗತಿಯಾಗಿದೆ.
Renowned Kannada film producer Soundarya Jagadish, known for his contributions to the industry through movies like 'Appu Pappu' and 'Snehitaru', tragically passed away, with early reports suggesting a possible suicide. The incident occurred at his residence in Mahalakshmi Layout, Bangalore, leaving the film fraternity and fans in shock.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am