ಬ್ರೇಕಿಂಗ್ ನ್ಯೂಸ್
16-04-24 12:08 pm HK NEWS ಸಿನಿಮಾ
ಬೆಂಗಳೂರು, ಎ.16: ಕನ್ನಡ ಚಿತ್ರರಂಗದ ಹಿರಿಯ ಕೊಂಡಿ, ಪೋಷಕ ಪಾತ್ರಗಳಲ್ಲಿ ನಟಿಸಿ ಪ್ರಚಂಡ ಕುಳ್ಳ ಎಂಬ ಖ್ಯಾತಿ ಗಳಿಸಿದ್ದ ಹಿರಿಯ ನಟ ದ್ವಾರಕೀಶ್(81) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 1942 ಆಗಸ್ಟ್ 19ರಂದು ಜನಿಸಿದ್ದ ದ್ವಾರಕೀಶ್ ಅವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಮೈಸೂರಿನ ಶಾರದಾ ವಿಲಾಸ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ , ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ಸ್ ಎನ್ನುವ ಶಾಪ್ ಪ್ರಾರಂಭಿಸಿ ವ್ಯವಹಾರ ಕ್ಷೇತ್ರಕ್ಕೆ ಇಳಿದಿದ್ದರು. ಆದರೆ 1963ರಲ್ಲಿ ಅಚಾನಕ್ಕಾಗಿ ವ್ಯಾಪಾರ ಬಿಟ್ಟು ಬಣ್ಣದ ಬದುಕಿಗೆ ಕಾಲಿಟ್ಟರು.





ಕನ್ನಡ ಚಿತ್ರರಂಗದ ಲೆಜೆಂಡ್ ಗಳಾದ ವಿಷ್ಣುವರ್ಧನ್, ಅಂಬರೀಶ್, ರಾಜಕುಮಾರ್ ಜೊತೆಗೆ ಹಲವಾರು ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದ ಕಾಮೆಡಿ ನಟನಾಗಿ ಮಿಂಚಿದ್ದರು. ನಟನಾಗಿ ಉತ್ತುಂಗಕ್ಕೇರಿದ ಬಳಿಕ ನಿರ್ದೇಶನ, ನಿರ್ಮಾಣವನ್ನೂ ಮಾಡಿದ್ದರು. ಹಲವಾರು ಸೂಪರ್ ಹಿಟ್ ಸಿನಿಮಾಗಳಿಗೆ ಬಂಡವಾಳ ಹಾಕುವುದರ ಜೊತೆಗೆ ನಟಿಸಿ ಸೈ ಎನಿಸಿಕೊಂಡಿದ್ದರು. 1966ರಲ್ಲಿ ಮೇಯರ್ ಮುತ್ತಣ್ಣ ಸಿನಿಮಾ ನಿರ್ದೇಶನ ಮಾಡಿದ್ದು ಅವರಿಗೆ ವಿಶೇಷ ಗೌರವ, ಹೆಸರು ತಂದುಕೊಟ್ಟಿತ್ತು.
1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ದ್ವಾರಕೀಶ್, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ. ದಿವಂಗತ ನಟ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಚಿತ್ರಗಳಲ್ಲಿ ತೆರೆ ಹಂಚಿಕೊಂಡಿದ್ದರು. 1966ರಲ್ಲಿ ಮಮತೆಯ ಬಂಧನ ಸಿನಿಮಾವನ್ನು ದ್ವಾರಕೀಶ್ ಅವರು ಮತ್ತಿಬ್ಬರು ನಿರ್ಮಾಪಕರ ಜೊತೆ ಸೇರಿ ತುಂಬಾ ಪಿಕ್ಚರ್ಸ್ ಬ್ಯಾನರ್ನಲ್ಲಿ ನಿರ್ಮಾಣ ಮಾಡಿದ್ದರು. ಆಪ್ತಮಿತ್ರ ಚಿತ್ರದಲ್ಲಿ ದ್ವಾರಕೀಶ್ ಮತ್ತು ವಿಷ್ಣುವರ್ಧನ್ ಅವರ ಸ್ನೇಹ ಬಾಂಧವ್ಯವನ್ನು ಸಹಜವಾಗಿ ಕಟ್ಟಿಕೊಟ್ಟ ಚಿತ್ರವಾಗಿತ್ತು.
Sandalwood actor Dwarakish dies of heart attack in Bangalore . Dwarakanath better known as Dwarakish was an Indian actor, director and producer in the Kannada film industry. He was given the name Dwarakish by Kannada film maker C. V. Shivashankar. Dwarakish was born on 19 August 1942. He grew up in Ittigegud, Mysore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm