ಬ್ರೇಕಿಂಗ್ ನ್ಯೂಸ್
03-12-20 05:32 pm Source: FILMIBEAT Bharath Kumar K ಸಿನಿಮಾ
'ಕೆಜಿಎಫ್ ಚಾಪ್ಟರ್-2' ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ತೆಲುಗು ನಟ ಪ್ರಭಾಸ್ ಜೊತೆ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಸಂಸ್ಥೆ ಈ ಚಿತ್ರ ನಿರ್ಮಾಣ ಮಾಡುತ್ತಿದೆ ಎಂದು ಅಧಿಕೃತ ಪಡಿಸಿದೆ. ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಕಾಡುತ್ತಿದೆ. ಪರಭಾಷೆಯ ಸ್ಟಾರ್ ನಿರ್ದೇಶಕರು ಯಶ್ ಅವರ ಕಾಲ್ಶೀಟ್ ಪಡೆಯಲು ಪ್ರಯತ್ನಿಸಿದ್ದು, ಯಶ್ ಮುಂದಿನ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರವಾಗಲಿದೆ ಎಂದು ಹೇಳಲಾಗಿದೆ. ಆದ್ರೀಗ, ಕನ್ನಡದ ನಿರ್ದೇಶಕರ ಜೊತೆಯೇ ಯಶ್ ತಮ್ಮ ಮುಂದಿನ ಸಿನಿಮಾ ಮಾಡುವ ತಯಾರಿ ನಡೆಸಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ನರ್ತನ್ ಜೊತೆ ಯಶ್ ಸಿನಿಮಾ!
'ಮಫ್ತಿ' ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ನರ್ತನ್ ರಾಕಿಂಗ್ ಸ್ಟಾರ್ ಯಶ್ಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಚರ್ಚೆಯಲ್ಲಿದೆ. ಈ ಸಂಬಂಧ ನರ್ತನ್ ಮತ್ತು ಯಶ್ ಇಬ್ಬರು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಸಿದ್ಧತೆ ಸಹ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಹಿರಂಗವಾಗಿದೆ.

ಪ್ಯಾನ್ ಇಂಡಿಯಾ ಸಿನಿಮಾ!
ಕೆಜಿಎಫ್ ಸ್ಟಾರ್ ಮತ್ತು ನರ್ತನ್ ಕಾಂಬಿನೇಷನ್ನಲ್ಲಿ ಮೂಡಿ ಬರಲಿದೆ ಎಂದು ಹೇಳಲಾಗುತ್ತಿರುವ ಚಿತ್ರ ಪ್ಯಾನ್ ಇಂಡಿಯಾ ಬಿಡುಗಡೆಯಾಗಲಿದೆಯಂತೆ. ಕೆಜಿಎಫ್ ಬಳಿಕ ನ್ಯಾಷನಲ್ ಸ್ಟಾರ್ ಎನಿಸಿಕೊಂಡಿರುವ ಯಶ್ ಅವರ ಇಮೇಜ್ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ನಟನ ಮೇಲಿದ್ದು ಹಾಗಾಗಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಮಾಡುವ ಬಗ್ಗೆ ಆಸಕ್ತಿ ಹೊಂದಿದ್ದಾರೆ.

'ಮಫ್ತಿ' ರೀಮೇಕ್ನಿಂದ ಹೊರಬಂದ ನರ್ತನ್
ರೋರಿಂಗ್ ಸ್ಟಾರ್ ಶ್ರೀಮುರಳಿ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯಲ್ಲಿ ಬಂದಿದ್ದ ಮಫ್ತಿ ಸಿನಿಮಾವನ್ನು ತಮಿಳಿನಲ್ಲಿ ರೀಮೇಕ್ ಮಾಡಲಾಗುತ್ತಿದೆ. ತಮಿಳಿನಲ್ಲಿ ಈ ಚಿತ್ರಕ್ಕೆ ನರ್ತನ್ ಆಕ್ಷನ್ ಕಟ್ ಹೇಳಬೇಕಿತ್ತು. ಆದ್ರೆ, ಅಂತಿಮ ಹಂತದಲ್ಲಿ ನರ್ತನ್ ಈ ಪ್ರಾಜೆಕ್ಟ್ನಿಂದ ಹೊರಬಂದಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm