ಬ್ರೇಕಿಂಗ್ ನ್ಯೂಸ್
04-12-20 10:47 am Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚಿಗೆ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿಯನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ರಿಷಬ್ ಶೆಟ್ಟಿ, ಚಾಲೆಂಜಿಂಗ್ ಸ್ಟಾರ್ ಗೆ ಸಿನಿಮಾ ಮಾಡ್ತಿದ್ದಾರಾ? ಸೈಲೆಂಟ್ ಆಗಿ ಸಿನಿಮಾ ಮಾತುಕತೆ ನಡೆಯುತ್ತಿದೆಯಾ? ಎಂದು ಯೋಚಿಸುತ್ತಿದ್ದೀರಾ. ಇಬ್ಬರು ಸಿನಿಮಾ ಮಾಡಿದರೂ ಅಚ್ಚರಿ ಇಲ್ಲ. ರಿಷಬ್ ಶೆಟ್ಟಿ ಮತ್ತು ತಂಡ ಸದ್ಯ ಮೈಸೂರಿನಲ್ಲಿ ಬೀಡುಬಿಟ್ಟಿದೆ. ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಮೈಸೂರಿನಲ್ಲಿ ಭರ್ಜರಿಯಾಗಿ ಚಿತ್ರೀಕರಣ ಮಾಡುತ್ತಿರುವ ತಂಡವನ್ನು ದರ್ಶನ್ ಸಹಜವಾಗಿ ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ.
ಸಾಮಾನ್ಯವಾಗಿ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದರೆ ದರ್ಶನ್ ಚಿತ್ರೀಕರಣ ಸೆಟ್ ಗೆ ಹೋಗಿ ಭೇಟಿಯಾಗಿ ಮಾತುಕತೆ ನಡೆಸುತ್ತಾರೆ. ಚಿತ್ರತಂಡದ ಜೊತೆ ಕಾಲಕಳೆದು ತಂಡಕ್ಕೆ ಶುಭಕೋರಿ ವಾಪಸ್ ಆಗುತ್ತಾರೆ. ಹಾಗೆ ಹರಿಕಥೆ ಅಲ್ಲ ಗಿರಿಕಥೆತಂಡವನ್ನು ಭೇಟಿಯಾಗಿದ್ದಾರೆ. ದರ್ಶನ್ ಮತ್ತು ನಿರ್ಮಾಪಕ ಸಂದೇಶ್ ನಾಗರಾಜ್ ಇಬ್ಬರು ರಿಷಬ್ ಶೆಟ್ಟಿ ಮತ್ತು ತಂಡವನ್ನು ಭೇಟಿಯಾಗಿದ್ದಾರೆ.

ದರ್ಶನ್ ಭೇಟಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ಇತ್ತೀಚಿಗಷ್ಟೆ ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದಲ್ಲಿ ದೊಡ್ಡ ಬದಲಾವಣೆ ಆಗಿದೆ. ಚಿತ್ರದಿಂದ ನಿರ್ದೇಶಕ ಗಿರಿಕೃಷ್ಣ ಹೊರನಡೆದಿದ್ದಾರೆ. ಅನಾರೋಗ್ಯದ ಕಾರಣ ನಿರ್ದೇಶಕ ಗಿರಿಕೃಷ್ಣ ಸಿನಿಮಾದ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೀಗ ಚಿತ್ರಕ್ಕೆ ಹೊಸ ನಿರ್ದೇಶಕರು ಎಂಟ್ರಿ ಕೊಟ್ಟಿದ್ದಾರೆ. ಕರಣ್ ಅನಂತ್ ಮತ್ತು ಅನಿರುದ್ಧ ಮಹೇಶ್ ಇಬ್ಬರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಹೇಳಾಗುತ್ತಿದೆ. ರಿಷಬ್ ಶೆಟ್ಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶನದಲ್ಲೂ ನಿರತರಾಗಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm