ಬ್ರೇಕಿಂಗ್ ನ್ಯೂಸ್
04-12-20 10:47 am Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚಿಗೆ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿಯನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ರಿಷಬ್ ಶೆಟ್ಟಿ, ಚಾಲೆಂಜಿಂಗ್ ಸ್ಟಾರ್ ಗೆ ಸಿನಿಮಾ ಮಾಡ್ತಿದ್ದಾರಾ? ಸೈಲೆಂಟ್ ಆಗಿ ಸಿನಿಮಾ ಮಾತುಕತೆ ನಡೆಯುತ್ತಿದೆಯಾ? ಎಂದು ಯೋಚಿಸುತ್ತಿದ್ದೀರಾ. ಇಬ್ಬರು ಸಿನಿಮಾ ಮಾಡಿದರೂ ಅಚ್ಚರಿ ಇಲ್ಲ. ರಿಷಬ್ ಶೆಟ್ಟಿ ಮತ್ತು ತಂಡ ಸದ್ಯ ಮೈಸೂರಿನಲ್ಲಿ ಬೀಡುಬಿಟ್ಟಿದೆ. ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಮೈಸೂರಿನಲ್ಲಿ ಭರ್ಜರಿಯಾಗಿ ಚಿತ್ರೀಕರಣ ಮಾಡುತ್ತಿರುವ ತಂಡವನ್ನು ದರ್ಶನ್ ಸಹಜವಾಗಿ ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ.
ಸಾಮಾನ್ಯವಾಗಿ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದರೆ ದರ್ಶನ್ ಚಿತ್ರೀಕರಣ ಸೆಟ್ ಗೆ ಹೋಗಿ ಭೇಟಿಯಾಗಿ ಮಾತುಕತೆ ನಡೆಸುತ್ತಾರೆ. ಚಿತ್ರತಂಡದ ಜೊತೆ ಕಾಲಕಳೆದು ತಂಡಕ್ಕೆ ಶುಭಕೋರಿ ವಾಪಸ್ ಆಗುತ್ತಾರೆ. ಹಾಗೆ ಹರಿಕಥೆ ಅಲ್ಲ ಗಿರಿಕಥೆತಂಡವನ್ನು ಭೇಟಿಯಾಗಿದ್ದಾರೆ. ದರ್ಶನ್ ಮತ್ತು ನಿರ್ಮಾಪಕ ಸಂದೇಶ್ ನಾಗರಾಜ್ ಇಬ್ಬರು ರಿಷಬ್ ಶೆಟ್ಟಿ ಮತ್ತು ತಂಡವನ್ನು ಭೇಟಿಯಾಗಿದ್ದಾರೆ.

ದರ್ಶನ್ ಭೇಟಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ಇತ್ತೀಚಿಗಷ್ಟೆ ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದಲ್ಲಿ ದೊಡ್ಡ ಬದಲಾವಣೆ ಆಗಿದೆ. ಚಿತ್ರದಿಂದ ನಿರ್ದೇಶಕ ಗಿರಿಕೃಷ್ಣ ಹೊರನಡೆದಿದ್ದಾರೆ. ಅನಾರೋಗ್ಯದ ಕಾರಣ ನಿರ್ದೇಶಕ ಗಿರಿಕೃಷ್ಣ ಸಿನಿಮಾದ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೀಗ ಚಿತ್ರಕ್ಕೆ ಹೊಸ ನಿರ್ದೇಶಕರು ಎಂಟ್ರಿ ಕೊಟ್ಟಿದ್ದಾರೆ. ಕರಣ್ ಅನಂತ್ ಮತ್ತು ಅನಿರುದ್ಧ ಮಹೇಶ್ ಇಬ್ಬರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಹೇಳಾಗುತ್ತಿದೆ. ರಿಷಬ್ ಶೆಟ್ಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶನದಲ್ಲೂ ನಿರತರಾಗಿದ್ದಾರೆ.
This News Article is a Copy of FILMIBEAT
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm