ಬ್ರೇಕಿಂಗ್ ನ್ಯೂಸ್
07-12-20 11:25 am Source: FILMIBEAT ಸಿನಿಮಾ
ಖ್ಯಾತ ನಾಮರ ಹೆಸರನ್ನು ತಮ್ಮ ವೈಯಕ್ತಿಕ ಲಾಭಕ್ಕೆ ವಿಧ-ವಿಧವಾಗಿ ಬಳಸಿಕೊಳ್ಳುವರ ಸಂಖ್ಯೆ ಹೆಚ್ಚಿಗೆ ಇದೆ. ಗಾಂಧಿ ನಗರದಲ್ಲಿಯಂತೂ ಈ ಸಂಖ್ಯೆ ತುಸು ಹೆಚ್ಚೇ.
ನಟ-ನಟಿಯರ ಹೆಸರು ಹೇಳಿಕೊಂಡು ದುಡ್ಡು ಹೊಡೆಯುವುದು, ಮೋಸ ಮಾಡುವುದು ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣದ ಮೂಲಕ ನಟ-ನಟಿಯರು ನೇರವಾಗಿ ಜನರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರಾದರೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಘಟನೆಗಳು ವರದಿ ಆಗುತ್ತಲೇ ಇರುತ್ತವೆ.
ಇದೀಗ ನಟ ಧನಂಜಯ್ ಹೆಸರು ಬಳಸಿಕೊಂಡು ವಂಚನೆ ನಡೆಸುತ್ತಿರುವ ಘಟನೆ ಗಮನಕ್ಕೆ ಬಂದಿದ್ದು, ಸ್ವತಃ ನಟ ಧನಂಜಯ್ ಇಂಥಹಾ ಸುಳ್ಳುಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
'ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನವ ಯುವಕ-ಯುವತಿಯರು ನಟ-ನಟಿಯರಾಗಿ ಬೇಕಾಗಿದ್ದಾರೆ. ಆಸಕ್ತಿ ಇದ್ದವರು ನನಗೆ ಸಂದೇಶ ಕಳುಹಿಸಿ' ಎಂಬ ಪೋಸ್ಟ್ ಒಂದು ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಆಕಾಶ್ ಗೌಡ ಎಂಬಾತ ಹಾಕಿರುವ ಇಂಥಹುದೇ ಪೋಸ್ಟ್ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಡಾಲಿ ಧನಂಜಯ್, 'ಇಂಥಹುಗಳನ್ನು ನಂಬಿ ಮೋಸಹೋಗಬೇಡಿ' ಎಂದು ಬರೆದುಕೊಂಡಿದ್ದಾರೆ.
'ಈ ಥರಹದ ಪೋಸ್ಟ್ಗಳನ್ನು ನಂಬಿ ಮೋಸಹೋಗಬೇಡಿ. ಈ ಥರಹದ ಎರಡು ಮೂರು ಘಟನೆಗಳು ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆಯಿಂದಿರಿ, ಏನನ್ನಾದರೂ ನಂಬುವುದಕ್ಕೆ ಮುನ್ನಾ ಹಿಮ್ಮಾಹಿತಿ ಕಲೆಹಾಕಿ, ತುಲನೆಗೆ ಒಳಪಡಿಸಿ' ಎಂದು ಧನಂಜಯ್ ಮನವಿ ಮಾಡಿದ್ದಾರೆ.
ನಿನ್ನೆ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಮಾಸ್ಟರ್ ಆನಂದ್ ಸಹ ಇಂಥಹುದೇ ವಿಷಯದ ಬಗ್ಗೆ ಮಾತನಾಡಿದ್ದರು. 'ನನ್ನ ಹೆಸರಲ್ಲಿ ಕೆಲವರು ಕಾಸ್ಟಿಂಗ್ ಕಾಲ್ಗಳನ್ನು ನೀಡಿದ್ದಾರೆ. ಆದರೆ ಅಂಥಹುವನ್ನು ನಂಬಬೇಡಿ, ನಾನು ಹೊಸ ಧಾರಾವಾಹಿ ಮಾಡುತ್ತಿದ್ದು, ಅದರ ಕಾಸ್ಟಿಂಗ್ ಕಾಲ್ ಅನ್ನು ನಾನೇ ಕೊಡುತ್ತಿದ್ದೇನೆ' ಎಂದು ಹೇಳಿ ಇಮೇಲ್, ಇತರೆ ಮಾಹಿತಿಗಳನ್ನು ನೀಡಿದ್ದಾರೆ.
This News Article is a Copy of FILMIBEAT
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm