ಬ್ರೇಕಿಂಗ್ ನ್ಯೂಸ್
07-12-20 11:25 am Source: FILMIBEAT ಸಿನಿಮಾ
ಖ್ಯಾತ ನಾಮರ ಹೆಸರನ್ನು ತಮ್ಮ ವೈಯಕ್ತಿಕ ಲಾಭಕ್ಕೆ ವಿಧ-ವಿಧವಾಗಿ ಬಳಸಿಕೊಳ್ಳುವರ ಸಂಖ್ಯೆ ಹೆಚ್ಚಿಗೆ ಇದೆ. ಗಾಂಧಿ ನಗರದಲ್ಲಿಯಂತೂ ಈ ಸಂಖ್ಯೆ ತುಸು ಹೆಚ್ಚೇ.
ನಟ-ನಟಿಯರ ಹೆಸರು ಹೇಳಿಕೊಂಡು ದುಡ್ಡು ಹೊಡೆಯುವುದು, ಮೋಸ ಮಾಡುವುದು ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣದ ಮೂಲಕ ನಟ-ನಟಿಯರು ನೇರವಾಗಿ ಜನರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರಾದರೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಘಟನೆಗಳು ವರದಿ ಆಗುತ್ತಲೇ ಇರುತ್ತವೆ.
ಇದೀಗ ನಟ ಧನಂಜಯ್ ಹೆಸರು ಬಳಸಿಕೊಂಡು ವಂಚನೆ ನಡೆಸುತ್ತಿರುವ ಘಟನೆ ಗಮನಕ್ಕೆ ಬಂದಿದ್ದು, ಸ್ವತಃ ನಟ ಧನಂಜಯ್ ಇಂಥಹಾ ಸುಳ್ಳುಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
'ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನವ ಯುವಕ-ಯುವತಿಯರು ನಟ-ನಟಿಯರಾಗಿ ಬೇಕಾಗಿದ್ದಾರೆ. ಆಸಕ್ತಿ ಇದ್ದವರು ನನಗೆ ಸಂದೇಶ ಕಳುಹಿಸಿ' ಎಂಬ ಪೋಸ್ಟ್ ಒಂದು ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಆಕಾಶ್ ಗೌಡ ಎಂಬಾತ ಹಾಕಿರುವ ಇಂಥಹುದೇ ಪೋಸ್ಟ್ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಡಾಲಿ ಧನಂಜಯ್, 'ಇಂಥಹುಗಳನ್ನು ನಂಬಿ ಮೋಸಹೋಗಬೇಡಿ' ಎಂದು ಬರೆದುಕೊಂಡಿದ್ದಾರೆ.
'ಈ ಥರಹದ ಪೋಸ್ಟ್ಗಳನ್ನು ನಂಬಿ ಮೋಸಹೋಗಬೇಡಿ. ಈ ಥರಹದ ಎರಡು ಮೂರು ಘಟನೆಗಳು ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆಯಿಂದಿರಿ, ಏನನ್ನಾದರೂ ನಂಬುವುದಕ್ಕೆ ಮುನ್ನಾ ಹಿಮ್ಮಾಹಿತಿ ಕಲೆಹಾಕಿ, ತುಲನೆಗೆ ಒಳಪಡಿಸಿ' ಎಂದು ಧನಂಜಯ್ ಮನವಿ ಮಾಡಿದ್ದಾರೆ.
ನಿನ್ನೆ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಮಾಸ್ಟರ್ ಆನಂದ್ ಸಹ ಇಂಥಹುದೇ ವಿಷಯದ ಬಗ್ಗೆ ಮಾತನಾಡಿದ್ದರು. 'ನನ್ನ ಹೆಸರಲ್ಲಿ ಕೆಲವರು ಕಾಸ್ಟಿಂಗ್ ಕಾಲ್ಗಳನ್ನು ನೀಡಿದ್ದಾರೆ. ಆದರೆ ಅಂಥಹುವನ್ನು ನಂಬಬೇಡಿ, ನಾನು ಹೊಸ ಧಾರಾವಾಹಿ ಮಾಡುತ್ತಿದ್ದು, ಅದರ ಕಾಸ್ಟಿಂಗ್ ಕಾಲ್ ಅನ್ನು ನಾನೇ ಕೊಡುತ್ತಿದ್ದೇನೆ' ಎಂದು ಹೇಳಿ ಇಮೇಲ್, ಇತರೆ ಮಾಹಿತಿಗಳನ್ನು ನೀಡಿದ್ದಾರೆ.
This News Article is a Copy of FILMIBEAT
08-01-26 07:51 pm
HK News Desk
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಮಾಡ್ಬೇಡಿ,...
07-01-26 10:33 pm
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
08-01-26 05:11 pm
HK News Desk
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
08-01-26 08:09 pm
Mangalore Correspondent
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm