ಬ್ರೇಕಿಂಗ್ ನ್ಯೂಸ್
07-12-20 11:25 am Source: FILMIBEAT ಸಿನಿಮಾ
ಖ್ಯಾತ ನಾಮರ ಹೆಸರನ್ನು ತಮ್ಮ ವೈಯಕ್ತಿಕ ಲಾಭಕ್ಕೆ ವಿಧ-ವಿಧವಾಗಿ ಬಳಸಿಕೊಳ್ಳುವರ ಸಂಖ್ಯೆ ಹೆಚ್ಚಿಗೆ ಇದೆ. ಗಾಂಧಿ ನಗರದಲ್ಲಿಯಂತೂ ಈ ಸಂಖ್ಯೆ ತುಸು ಹೆಚ್ಚೇ.
ನಟ-ನಟಿಯರ ಹೆಸರು ಹೇಳಿಕೊಂಡು ದುಡ್ಡು ಹೊಡೆಯುವುದು, ಮೋಸ ಮಾಡುವುದು ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣದ ಮೂಲಕ ನಟ-ನಟಿಯರು ನೇರವಾಗಿ ಜನರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರಾದರೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಘಟನೆಗಳು ವರದಿ ಆಗುತ್ತಲೇ ಇರುತ್ತವೆ.
ಇದೀಗ ನಟ ಧನಂಜಯ್ ಹೆಸರು ಬಳಸಿಕೊಂಡು ವಂಚನೆ ನಡೆಸುತ್ತಿರುವ ಘಟನೆ ಗಮನಕ್ಕೆ ಬಂದಿದ್ದು, ಸ್ವತಃ ನಟ ಧನಂಜಯ್ ಇಂಥಹಾ ಸುಳ್ಳುಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
'ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನವ ಯುವಕ-ಯುವತಿಯರು ನಟ-ನಟಿಯರಾಗಿ ಬೇಕಾಗಿದ್ದಾರೆ. ಆಸಕ್ತಿ ಇದ್ದವರು ನನಗೆ ಸಂದೇಶ ಕಳುಹಿಸಿ' ಎಂಬ ಪೋಸ್ಟ್ ಒಂದು ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಆಕಾಶ್ ಗೌಡ ಎಂಬಾತ ಹಾಕಿರುವ ಇಂಥಹುದೇ ಪೋಸ್ಟ್ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಡಾಲಿ ಧನಂಜಯ್, 'ಇಂಥಹುಗಳನ್ನು ನಂಬಿ ಮೋಸಹೋಗಬೇಡಿ' ಎಂದು ಬರೆದುಕೊಂಡಿದ್ದಾರೆ.
'ಈ ಥರಹದ ಪೋಸ್ಟ್ಗಳನ್ನು ನಂಬಿ ಮೋಸಹೋಗಬೇಡಿ. ಈ ಥರಹದ ಎರಡು ಮೂರು ಘಟನೆಗಳು ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆಯಿಂದಿರಿ, ಏನನ್ನಾದರೂ ನಂಬುವುದಕ್ಕೆ ಮುನ್ನಾ ಹಿಮ್ಮಾಹಿತಿ ಕಲೆಹಾಕಿ, ತುಲನೆಗೆ ಒಳಪಡಿಸಿ' ಎಂದು ಧನಂಜಯ್ ಮನವಿ ಮಾಡಿದ್ದಾರೆ.
ನಿನ್ನೆ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಮಾಸ್ಟರ್ ಆನಂದ್ ಸಹ ಇಂಥಹುದೇ ವಿಷಯದ ಬಗ್ಗೆ ಮಾತನಾಡಿದ್ದರು. 'ನನ್ನ ಹೆಸರಲ್ಲಿ ಕೆಲವರು ಕಾಸ್ಟಿಂಗ್ ಕಾಲ್ಗಳನ್ನು ನೀಡಿದ್ದಾರೆ. ಆದರೆ ಅಂಥಹುವನ್ನು ನಂಬಬೇಡಿ, ನಾನು ಹೊಸ ಧಾರಾವಾಹಿ ಮಾಡುತ್ತಿದ್ದು, ಅದರ ಕಾಸ್ಟಿಂಗ್ ಕಾಲ್ ಅನ್ನು ನಾನೇ ಕೊಡುತ್ತಿದ್ದೇನೆ' ಎಂದು ಹೇಳಿ ಇಮೇಲ್, ಇತರೆ ಮಾಹಿತಿಗಳನ್ನು ನೀಡಿದ್ದಾರೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm