ಬ್ರೇಕಿಂಗ್ ನ್ಯೂಸ್
07-12-20 11:25 am Source: FILMIBEAT ಸಿನಿಮಾ
ಖ್ಯಾತ ನಾಮರ ಹೆಸರನ್ನು ತಮ್ಮ ವೈಯಕ್ತಿಕ ಲಾಭಕ್ಕೆ ವಿಧ-ವಿಧವಾಗಿ ಬಳಸಿಕೊಳ್ಳುವರ ಸಂಖ್ಯೆ ಹೆಚ್ಚಿಗೆ ಇದೆ. ಗಾಂಧಿ ನಗರದಲ್ಲಿಯಂತೂ ಈ ಸಂಖ್ಯೆ ತುಸು ಹೆಚ್ಚೇ.
ನಟ-ನಟಿಯರ ಹೆಸರು ಹೇಳಿಕೊಂಡು ದುಡ್ಡು ಹೊಡೆಯುವುದು, ಮೋಸ ಮಾಡುವುದು ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣದ ಮೂಲಕ ನಟ-ನಟಿಯರು ನೇರವಾಗಿ ಜನರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರಾದರೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಘಟನೆಗಳು ವರದಿ ಆಗುತ್ತಲೇ ಇರುತ್ತವೆ.
ಇದೀಗ ನಟ ಧನಂಜಯ್ ಹೆಸರು ಬಳಸಿಕೊಂಡು ವಂಚನೆ ನಡೆಸುತ್ತಿರುವ ಘಟನೆ ಗಮನಕ್ಕೆ ಬಂದಿದ್ದು, ಸ್ವತಃ ನಟ ಧನಂಜಯ್ ಇಂಥಹಾ ಸುಳ್ಳುಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
'ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನವ ಯುವಕ-ಯುವತಿಯರು ನಟ-ನಟಿಯರಾಗಿ ಬೇಕಾಗಿದ್ದಾರೆ. ಆಸಕ್ತಿ ಇದ್ದವರು ನನಗೆ ಸಂದೇಶ ಕಳುಹಿಸಿ' ಎಂಬ ಪೋಸ್ಟ್ ಒಂದು ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಆಕಾಶ್ ಗೌಡ ಎಂಬಾತ ಹಾಕಿರುವ ಇಂಥಹುದೇ ಪೋಸ್ಟ್ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಡಾಲಿ ಧನಂಜಯ್, 'ಇಂಥಹುಗಳನ್ನು ನಂಬಿ ಮೋಸಹೋಗಬೇಡಿ' ಎಂದು ಬರೆದುಕೊಂಡಿದ್ದಾರೆ.
'ಈ ಥರಹದ ಪೋಸ್ಟ್ಗಳನ್ನು ನಂಬಿ ಮೋಸಹೋಗಬೇಡಿ. ಈ ಥರಹದ ಎರಡು ಮೂರು ಘಟನೆಗಳು ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆಯಿಂದಿರಿ, ಏನನ್ನಾದರೂ ನಂಬುವುದಕ್ಕೆ ಮುನ್ನಾ ಹಿಮ್ಮಾಹಿತಿ ಕಲೆಹಾಕಿ, ತುಲನೆಗೆ ಒಳಪಡಿಸಿ' ಎಂದು ಧನಂಜಯ್ ಮನವಿ ಮಾಡಿದ್ದಾರೆ.
ನಿನ್ನೆ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಮಾಸ್ಟರ್ ಆನಂದ್ ಸಹ ಇಂಥಹುದೇ ವಿಷಯದ ಬಗ್ಗೆ ಮಾತನಾಡಿದ್ದರು. 'ನನ್ನ ಹೆಸರಲ್ಲಿ ಕೆಲವರು ಕಾಸ್ಟಿಂಗ್ ಕಾಲ್ಗಳನ್ನು ನೀಡಿದ್ದಾರೆ. ಆದರೆ ಅಂಥಹುವನ್ನು ನಂಬಬೇಡಿ, ನಾನು ಹೊಸ ಧಾರಾವಾಹಿ ಮಾಡುತ್ತಿದ್ದು, ಅದರ ಕಾಸ್ಟಿಂಗ್ ಕಾಲ್ ಅನ್ನು ನಾನೇ ಕೊಡುತ್ತಿದ್ದೇನೆ' ಎಂದು ಹೇಳಿ ಇಮೇಲ್, ಇತರೆ ಮಾಹಿತಿಗಳನ್ನು ನೀಡಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm