ಬ್ರೇಕಿಂಗ್ ನ್ಯೂಸ್
07-12-20 11:43 am Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಕೊನೆಗೂ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಅನೇಕ ತಿಂಗಳಾಗಿದ್ದು, ಅಲಿಯಾ ಯಾವಾಗ ಶೂಟಿಂಗ್ ನಲ್ಲಿ ಭಾಗಿಯಾಗ್ತಾರೆ ಎನ್ನುವ ಕುತೂಹಲ ಮಾನೆ ಮಾಡಿತ್ತು. ಕೊನೆಗೂ ಅಲಿಯಾ ರಾಜಮೌಳಿ ಅವರ ಆರ್ ಆರ್ ಆರ್ ತಂಡ ಸೇರಿಕೊಂಡಿದ್ದಾರೆ. ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ.

ಮಹಾಬಲೇಶ್ವರದಲ್ಲಿ ಶೂಟಿಂಗ್ ಮುಗಿಸಿ ಚಿತ್ರತಂಡ ಮತ್ತೆ ಹೈದರಾಬಾದ್ ಗೆ ತೆರಳಿದೆ. ಹೈದರಾಬಾದ್ ನಲ್ಲಿ ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ನಡೆಯುತ್ತಿದೆ. ನಟಿ ಅಲಿಯಾ ಭಟ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
RRR ಶೂಟಿಂಗ್ ಆರಂಭ ಮಾಡಿರುವ ಅಲಿಯಾ ಹೇಳಿದ್ದೇನು? ಆರ್ ಆರ್ ಆರ್ ಶೂಟಿಂಗ್ ಆರಂಭ ಮಾಡಿರುವ ಬಗ್ಗೆ ನಟಿ ಅಲಿಯಾ ಭಟ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. 'ಕೊನೆಗೂ ಆರ್ ಆರ್ ಆರ್ ತಂಡ ಸೇರಿದೆ' ಎಂದು ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.

ರಾಮ್ ಚರಣ್ ಗೆ ನಾಯಕಿಯಾಗಿ ಅಲಿಯಾ ಅಭಿನಯ ನಟಿ ಅಲಿಯಾ ಭಟ್ ರಾಮ್ ಚರಣ್ ಗೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಮ್ ಚರಣ್ ಚಿತ್ರದಲ್ಲಿ ಅಲ್ಲುರಿ ಸೀತಾರಾಮ ರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೀತಾರಾಮ ರಾಜು ಪ್ರೇಯಸಿ ಸೀತಾ ಪಾತ್ರಕ್ಕೆ ಅಲಿಯಾ ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.

ಸಿನಿಮಾಗಾಗಿ ವಿಶೇಷ ತಯಾರಿ ನಡೆಸಿರುವ ಅಲಿಯಾ ಈ ಸಿನಿಮಾಗಾಗಿ ಅಲಿಯಾ ವಿಶೇಷ ತಯಾರಿ ನಡೆಸಿದ್ದಾರೆ. ತೆಲುಗು ಕಲಿತಿರುವ ಅಲಿಯಾ, ತೆಲುಗು ಆವೃತ್ತಿಗೆ ಅವರೇ ಡಬ್ ಮಾಲಿದ್ದಾರೆೆ ಎನ್ನಲಾಗುತ್ತಿದೆ. ಇನ್ನು ಚಿತ್ರಕ್ಕಾಗಿ ಅಲಿಯಾ ತೂಕ ಹೆಚ್ಚಿಸಿಕೊಂಡಿದ್ದಾರೆ. ಅಲಿಯಾ ಭಟ್ ನಾಯಕಿ ಎಂದು ಸಿನಿಮಾತಂಡ ಘೋಷಣೆ ಮಾಡಿದಾಗಿನಿಂದಲೂ ಅಲಿಯಾ ಎಂಟ್ರಿ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿತ್ತು.
This News Article is a Copy of FILMIBEAT
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm