ಬ್ರೇಕಿಂಗ್ ನ್ಯೂಸ್
09-12-20 11:04 am Headline Karnataka News Network ಸಿನಿಮಾ
ತಮಿಳುನಾಡು. ಡಿ.9: 2020 ನಿಜಕ್ಕೂಕರಾಳ ವರ್ಷವಾಗಿ ಬದಲಾಗಿದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಮತ್ತೊಂದು ಕಡೆ ಸಾವುಗಳ ಸರಣಿ. ಅದರಲ್ಲೂ ಸಿನಿ ರಂಗದಲ್ಲಂತೂ ತುಂಬಾ ಮಂದಿ ಅಗಲುತ್ತಿದ್ದಾರೆ. ಬಣ್ಣದ ಲೋಕದಲ್ಲಿ ಸಾವುಗಳ ಸರಣಿ ಮುಂದುವರೆಯುತ್ತಲೇ ಇದೆ. ಒಂದರ ಹಿಂದೆ ಒಂದರಂತೆ ಕಲಾವಿದರ ಸಾವಿನ ಸುದ್ದಿ ಸಿನಿಪ್ರಿಯರಿಗೆ ಆಘಾತ ನೀಡುತ್ತಲೇ ಇದೆ. ಸುಶಾಂತ್ ಸಿಂಗ್ ರಜಪೂತ್, ರಿಷಿ ಕಪೂರ್, ಬಾಲಸುಬ್ರಹ್ಮಣ್ಯಂ, ಬುಲೆಟ್ ಪ್ರಕಾಶ್, ಮಧು ಮೈಕೆಲ್, ಇರ್ಫಾನ್ ಖಾನ್ ಹೀಗೆ ಹಲವಾರು ಮಂದಿ ಅಗಲಿದ್ದಾರೆ. ಈಗ ಖ್ಯಾತ ಕಿರುತೆರೆ ನಟಿಯೊಬ್ಬರು ತಮಿಳುನಾಡಿನ ಹೋಟೆಲ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೌದು, ತಮಿಳಿನ ಕಿರುತೆರೆಯಲ್ಲಿ ಇತ್ತೀಚೆಗೆ ಖ್ಯಾತಿ ಪಡೆದಿದ್ದ ನಟಿ ಚಿತ್ರಾ ಈಗ ಸಾವನ್ನಪ್ಪಿದ್ದಾರೆ. ಪಾಂಡಿಯನ್ ಸ್ಟೋರ್ಸ್ ಖ್ಯಾತಿಯ ನಟಿ ಚಿತ್ರಾ ತಮಿಳುನಾಡಿನ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ.
ಚಿತ್ರಾ ಅವರು ಪಾಂಡಿಯನ್ ಸ್ಟೋರ್ಸ್ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದಾಗಿಯೇ ಇತ್ತೀಚೆಗೆ ಖ್ಯಾತಿ ಪಡೆದಿದ್ದರು. ಅಲ್ಲದೆ ಉದ್ಯಮಿ ಹೇಮಂತ್ ರವಿ ಎಂಬುವರೊಂದಿಗೆ ನಿಶ್ಚಿತಾರ್ಥ ಸಹ ನಿಗದಿಯಾಗಿತ್ತು. ಹಿರಿಯರ ಸಮ್ಮತಿ ಮೇರೆಗೆ ಈ ಜೋಡಿಯ ನಿಶ್ವಿತಾರ್ಥವನ್ನು ಜನವರಿಯಲ್ಲಿ ನಡೆಸಲು ನಿರ್ಧರಿಸಲಾಗಿತ್ತಂತೆ.

ಹೇಮಂತ್ ರವಿ ಅವರೊಂದಿಗೆ ಹೋಟೆಲ್ನಲ್ಲಿರುವಾಗಲೇ ಈ ಘಟನೆ ನಡೆದಿದೆ. ಹೇಮಂತ್ ಅವರೊಂದಿಗೆ ಹೋಟೆಲ್ನಲ್ಲಿದ್ದ ಚಿತ್ರಾ, ಬೆಳಿಗ್ಗೆ ಇವಿಪಿ ಪಾರ್ಕ್ನಲ್ಲಿ ಮೊದಲ ಶೆಡ್ಯೂಲ್ ಶೂಟಿಂಗ್ ಮುಗಿಸಿಕೊಂಡು ಹೋಟೆಲ್ ರೂಮಿಗೆ ಬಂದಿದ್ದರಂತೆ. ನಂತರ ಸ್ನಾನಕ್ಕೆ ಹೋಗುವುದಾಗಿ ಹೇಮಂತ್ ಅವರಿಗೆ ಹೇಳಿ ಹೋದ ಚಿತ್ರಾ, ತುಂಬಾ ಸಮಯವಾದರೂ ಬಾಗಿಲು ತೆಗೆಯಲಿಲ್ಲವಂತೆ. ಇದರಿಂದಾಗಿ ಗಾಬರಿಗೊಂಡ ಹೇಮಂತ್ ಹೋಟೆಲ್ ಸಿಬ್ಬಂದಿಯನ್ನು ಕರೆಸಿ, ಡುಪ್ಲಿಕೇಟ್ ಕೀಯಿಂದ ಬಾಗಿಲು ತೆರೆಸಿದ್ದಾರೆ ಎನ್ನಲಾಗಿದೆ.

ಹೋಟೆಲ್ ಸಿಬ್ಬಂದಿ ಬಾಗಿಲು ತೆರೆದಾಗ ಚಿತ್ರಾ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು ಎಂದು ಹೇಳಲಾಗಿದೆ. ಚಿತ್ರಾ ಸೀರೆಯಿಂದ ಫ್ಯಾನ್ಗೆ ನೇಣು ಹಾಕಿಕೊಂಡಿದ್ದು, ಅವರದ್ದು ಆತ್ಮಹತ್ಯೆ ಎಂದು ಶಂಕಿಸಲಾಗುತ್ತಿದೆ.
29 ವರ್ಷದ ನಟಿ ಚಿತ್ರಾ ನಿನ್ನೆವರೆಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದರು. ನಿನ್ನೆ ಸಂಜೆ ಸಹ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಯುವ ನಟಿಯ ಅಗಲಿಕೆ ಅಭಿಮಾನಿಗಳಿಗೆ ಹಾಗೂ ಸಹ ನಟರಿಗೆ ನಿಜಕ್ಕೂ ಆಘಾತ ಉಂಟು ಮಾಡಿದೆ. ಚಿತ್ರಾ ನಟನೆ ಆರಂಭಿಸುವ ಮೊದಲು ನಿರೂಪಕಿಯಾಗಿ ಕಿರುತೆರೆಗೆ ಪರಿಚಯವಾದವರು. ಇವರ ತಂದೆ ಕಾಮರಾಜ್ ನಿವೃತ್ತ ಪೊಲೀಸ್ ಅಧಿಕಾರಿ. ಇವರ ಅಣ್ಣ ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
08-01-26 07:51 pm
HK News Desk
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಮಾಡ್ಬೇಡಿ,...
07-01-26 10:33 pm
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
08-01-26 05:11 pm
HK News Desk
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
08-01-26 08:09 pm
Mangalore Correspondent
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm