ಬ್ರೇಕಿಂಗ್ ನ್ಯೂಸ್
09-12-20 12:01 pm Headline Karnataka News Network ಸಿನಿಮಾ
ಬೆಂಗಳೂರು, ಡಿ.9: ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಬಿಗ್ ಬಾಸ್ ಕೊರೋನಾ ಎಫೆಕ್ಟ್ ನಿಂದ ವಿಳಂಬವಾಗಿದ್ದು ಸಂಕ್ರಾಂತಿ ಬಳಿಕ ಮತ್ತೆ ಒಂಟಿ ಮನೆ ಆಟ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ. ಹೌದು, ಅತ್ಯಂತ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಈ ಬಾರಿ ನಡೆಯುತ್ತೋ ಇಲ್ಲವೋ ಎಂಬ ಗೊಂದಲದಲ್ಲಿತ್ತು. ಮಹಾಮಾರಿ ಕೊರೋನಾ ಆ ರೀತಿ ಸ್ಥಿತಿಯನ್ನು ನಿರ್ಮಾಣ ಮಾಡಿತ್ತು. ಆದರೆ ಈ ಎಲ್ಲ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈಗಾಗಲೇ ಕಲರ್ಸ್ ಕನ್ನಡದ ಬಿಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಬಿಗ್ ಬಾಸ್ ಸೀಸನ್ 8 ತಯಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಅಕ್ಟೋಬರ ಮಧ್ಯಭಾಗದಲ್ಲಿ ಆರಂಭವಾಗಬೇಕಿದ್ದ ಶೋ ಜನವರಿ ಮಧ್ಯಭಾಗದಲ್ಲಿ ಶುರುವಾಗಲಿದೆ.
ಈಗಾಗಲೇ ಬಿಗ್ ಬಾಸ್ ಸೀಸನ್ 8 ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ಕೂಡ ಸಿಕ್ಕಿದೆ ಎಂದು ಹೇಳಲಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಾರಿ ದೊಡ್ಡ ಮನೆಗೆ ಹೋಗುವವರ ಕೆಲವೊಂದು ಹೆಸರು ಬೇಜಾನ್ ಹರಿದಾಡುತ್ತಿದೆ.ಇತ್ತ ಬೆಂಗಳೂರಿನ ಬಿಡದಿ ಬಳಿಯ ಇನ್ನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಬಿಗ್ ಬಾಸ್ ಮನೆಯನ್ನು ಹೊಸದಾಗಿ ಕಟ್ಟಲಾಗುತ್ತಿದ್ದು ಬಹುತೇಕ ಎಲ್ಲ ಕಾರ್ಯಗಳು ಪೂರ್ಣಗೊಂಡಿವೆಯಂತೆ. ಅಲ್ಲದೆ ಈ ಬಾರಿ ವಿಶೇಷವಾಗಿ ಮನೆಯನ್ನು ಸಿದ್ಧಗೊಳಿಸಲಾಗುತ್ತಿದೆ.
ಜೊತೆಗೆ ಕ್ಯಾಮರಾಗಳನ್ನು ಫಿಕ್ಸ್ ಮಾಡುವ ಕೆಲಸವೂ ಆರಂಭಗೊಳ್ಳುತ್ತಿದೆ. ಮನೆಯೊಳಗೆ ಕೆಲವು ತಾಂತ್ರಿಕ ಕೆಲಸಗಳನ್ನು ಮಾಡಲಾಗುತ್ತಿದೆ. ಡಿಸೆಂಬರ್ ಅಂತ್ಯದ ಹೊತ್ತಿಗೆ ಎಲ್ಲ ಕೆಲಸ ಪೂರ್ಣಗೊಂಡು ಬಿಗ್ ಬಾಸ್ ಮನೆ ಸಂಪೂರ್ಣ ಸಜ್ಜಾಗಲಿದೆ.
ಬಿಗ್ ಬಾಸ್ ಸೀಸನ್ 8ರಲ್ಲಿ ಸೆಲೆಬ್ರಿಟಿಗಳು ಮಾತ್ರ ಇರ್ತಾರಾ ಅಥವಾ ಕಾಮನ್ ವ್ಯಕ್ತಿಗಳೂ ಇರ್ತಾರಾ, ಗೊತ್ತಿಲ್ಲ. ಆದರೆ, ಕೆಲವೊಂದು ಪರಿಚಿತ ಮುಖಗಳನ್ನೂ ನೋಡಬಹುದು.
ಪ್ರಮುಖವಾಗಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟ ಆರ್ಯವರ್ಧನ್, ನ್ಯೂಸ್ ರೀಡರ್ ರಾಧಾ ಹಿರೇಗೌಡರ್, ದಿವ್ಯಾ, ಡ್ರೋನ್ ಪ್ರತಾಪ್, ಟಿಕ್ ಟಾಕ್ ಚೆಲುವೆ ಸೋನು ಗೌಡ, ಬಿಂದು ಗೌಡ ಸೇರಿದಂತೆ ಸೋಷಿಯಲ್ ಮೀಡಿಯಾದಲ್ಲಿ ಹೆಸರು ಮಾಡಿದವರ ಅನೇಕ ಹೆಸರು ಕೇಳಿಬರುತ್ತಿವೆ. ಆದರೆ, ಇದು ಎಷ್ಟರ ಮಟ್ಟಿಗೆ ನಿಜ ಎಂಬುದು ತಿಳಿದಿಲ್ಲ.
ಈಗಾಗಲೇ ಬಿಗ್ ಬಾಸ್ ತೆಲುಗು, ತಮಿಳು, ಹಿಂದಿ ಬಿಗ್ ಬಾಸ್ ಶೋಗಳು ಆರಂಭಗೊಂಡಿದ್ದು, ಪ್ರೇಕ್ಷಕರನ್ನು ಮನರಂಜಿಸುತ್ತಿದೆ. ಕೊರೋನಾ ಮಧ್ಯೆ ಸರಿಯಾದ ಕ್ರಮಗಳನ್ನು ಕೈಗೊಂಡು ಮತ್ತು ಸುರಕ್ಷಿತವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಮೊನ್ನೆಯಷ್ಟೆ ಕಿಚ್ಚ ಸುದೀಪ್ ತೆಲುಗು ಬಿಗ್ ಬಾಸ್ಗೆ ಎಂಟ್ರಿ ಕೊಟ್ಟು ಸಂಚಲನ ಸೃಷ್ಟಿಸಿದ್ದರು.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm