ಬ್ರೇಕಿಂಗ್ ನ್ಯೂಸ್
10-12-20 11:54 am Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.10: ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ರಾಕಿಂಗ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ದಂಪತಿ ಡಿ.9 ಕ್ಕೆ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 4 ವರ್ಷಗಳು ಕಳೆದಿವೆ. 2016 ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಈ ನಾಲ್ಕು ವರ್ಷದ ಸುಂದರ ದಾಂಪತ್ಯಕ್ಕೆ ಐರಾ ಮತ್ತು ಯಥರ್ವ್ ಯಶ್ ಎನ್ನುವ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

4ನೇ ವರ್ಷದ ಮದುವೆ ವಾರ್ಷಿಕೋತ್ಸವದ ಫೋಟೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ಯಶ್ ದಂಪತಿ ಮನೆಯಲ್ಲಿ ವಾರ್ಷಿಕೋತ್ಸವ ಸಂಭ್ರಮಿಸಿದ್ದಾರೆ. ಗುಲಾಬಿ ಹೂವಿನ ಗುಚ್ಚದ ಜೊತೆಗೆ ಪತ್ನಿಗೆ ಸಿಹಿಮುತ್ತು ನೀಡುತ್ತಿರುವ ರಾಕಿಂಗ್ ದಂಪತಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸುಂದರ ಫೋಟೋವನ್ನು ರಾಧಿಕಾ ಶೇರ್ ಮಾಡಿ, ನನ್ನ ಪ್ರೀತಿಯ ಪತಿ ಧನ್ಯವಾದಗಳು. ಈ ದಿನವನ್ನು ಮತ್ತಷ್ಟು ವಿಶೇಷಗೊಳಿಸಿದ ಎಲ್ಲಾ ಅಭಿಮಾನಿಗಳು, ಹಿತೈಶಿಗಳಿಗೂ ನಮ್ಮ ಕಡೆಯಿಂದ ಧನ್ಯವಾದ' ಎಂದು ಹೇಳಿದ್ದಾರೆ. ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಯಶ್ ಮತ್ತು ರಾಧಿಕಾ ಇಬ್ಬರು ಒಟ್ಟಿಗೆ ಚಿತ್ರರಂಗದ ಪಯಣ ಶುರು ಮಾಡಿದವರು. ಕಿರುತೆರೆಯಲ್ಲಿ ಒಟ್ಟಿಗೆ ನಟಿಸಿ, ಸಿನಿಮಾರಂಗದಲ್ಲೂ ಒಟ್ಟಿಗೆ ಮಿಂಚಿದವರು. ಉತ್ತಮ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಯಶ್ ನಂತರ ಪ್ರೇಮಿಗಳಾಗಿ ಈಗ ಗಂಡ-ಹೆಂಡತಿಯಾಗಿ ಸಂತೋಷದ ಜೀವನ ನಡೆಸುತ್ತಿದ್ದಾರೆ.
This News Article is a Copy of MYKHEL
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm