ಬ್ರೇಕಿಂಗ್ ನ್ಯೂಸ್
14-12-20 05:58 pm Source: FILMIBEAT Manjunatha C ಸಿನಿಮಾ
ಹಲವು ಜನಪ್ರಿಯ ಹಿಂದಿ ಧಾರಾವಾಹಿಗಳಲ್ಲಿ ನಟಿಸಿರುವ ಹಾಗೂ ಬಿಗ್ಬಾಸ್ ವಿನ್ನರ್ ಸಹ ಆಗಿರುವ ಸಿದ್ಧಾರ್ಥ್ ಶುಕ್ಲಾ ಕುಡಿದು ರಸ್ತೆಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಎರಡು ದಿನ ಹಿಂದೆ (ಡಿಸೆಂಬರ್ 12) ರಂದು ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ಧಾರ್ಥ್, ಅದೇ ದಿನ ತಡರಾತ್ರಿ ಮುಂಬೈನ ಏರಿಯಾವೊಂದರಲ್ಲಿ ಸಿದ್ಧಾರ್ಥ್ ಹಾಗೂ ಅವರ ಗೆಳೆಯರು ಕುಡಿದು ಬಡ ವ್ಯಕ್ತಿಯೊಬ್ಬನನ್ನು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿರುವಂತೆ, ಕಾರಿನಲ್ಲಿ ಕೂತಿರುವ ಸಿದ್ಧಾರ್ಥ್ ಶುಕ್ಲಾ ಅವರಿಗೆ ಕೇಳುತ್ತಿದ್ದಾನೆ, 'ಕುಡಿದು, ಬಡ ವ್ಯಕ್ತಿಯೊಬ್ಬನಿಗೆ ಹೊಡೆದಿದ್ದೀರಲ್ಲವೆ, ಸರಿ ಬಿಡಿ ನಿಮಗೆ ಒಳ್ಳೆಯದಾಗಲಿ' ಎಂದಿದ್ದಾನೆ.
ಕಾರಿನಲ್ಲಿ ಕೂತಿದ್ದ ಸಿದ್ಧಾರ್ಥ್ ಶುಕ್ಲಾ, ವಿಡಿಯೋ ಮಾಡುತ್ತಿದ್ದ ವ್ಯಕ್ತಿಯಿಂದ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಜೊತೆಗೆ 'ಆ ವ್ಯಕ್ತಿ ನನಗೆ ಚಾಕು ತೋರಿಸಿದ' ಎಂದು ಹೇಳುತ್ತಾರೆ. ಅಷ್ಟರಲ್ಲಿ ಮತ್ತೆ ಸಿದ್ಧಾರ್ಥ್ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ, ಅಲ್ಲಿಗೆ ವಿಡಿಯೋ ಎಂಡ್ ಆಗಿದೆ. ಆದರೆ ನಟ ಸಿದ್ಧಾರ್ಥ್ ಬೇರೆಯದೇ ರೀತಿ ಘಟನೆಯನ್ನು ಬಣ್ಣಿಸಿದ್ದು, ತಮ್ಮ ಕಾರಿಗೆ ಗುದ್ದಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದಾಗ, ಅವರು ಜಗಳಕ್ಕೆ ನಿಂತು ಚಾಕು ತೋರಿಸಿದರು, ನಾವು ಅವರನ್ನು ಬಲಪ್ರಯೋಗಿಸಿ ತಳ್ಳಿ, ಆ ಸ್ಥಳದಿಂದ ಹೊರಟು ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದೆವು ಎಂದಿದ್ದಾರೆ.
ಅಲ್ಲದೆ, ಗಾಡಿ ಓಡಿಸಬೇಕಾದರೆ, ತಾವು ಕುಡಿದಿರಲಿಲ್ಲ ಎಂದು ಸಹ ಹೇಳಿದ್ದಾರೆ. ಸಿದ್ಧಾರ್ಥ್ ನೀಡಿರುವ ದೂರಿನಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಸತ್ಯಾಂಶ ಹೊರಬರಬೇಕಿದೆ.
This News Article is a Copy of FILMIBEAT
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm