ಬ್ರೇಕಿಂಗ್ ನ್ಯೂಸ್
14-12-20 05:58 pm Source: FILMIBEAT Manjunatha C ಸಿನಿಮಾ
ಹಲವು ಜನಪ್ರಿಯ ಹಿಂದಿ ಧಾರಾವಾಹಿಗಳಲ್ಲಿ ನಟಿಸಿರುವ ಹಾಗೂ ಬಿಗ್ಬಾಸ್ ವಿನ್ನರ್ ಸಹ ಆಗಿರುವ ಸಿದ್ಧಾರ್ಥ್ ಶುಕ್ಲಾ ಕುಡಿದು ರಸ್ತೆಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಎರಡು ದಿನ ಹಿಂದೆ (ಡಿಸೆಂಬರ್ 12) ರಂದು ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ಧಾರ್ಥ್, ಅದೇ ದಿನ ತಡರಾತ್ರಿ ಮುಂಬೈನ ಏರಿಯಾವೊಂದರಲ್ಲಿ ಸಿದ್ಧಾರ್ಥ್ ಹಾಗೂ ಅವರ ಗೆಳೆಯರು ಕುಡಿದು ಬಡ ವ್ಯಕ್ತಿಯೊಬ್ಬನನ್ನು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿರುವಂತೆ, ಕಾರಿನಲ್ಲಿ ಕೂತಿರುವ ಸಿದ್ಧಾರ್ಥ್ ಶುಕ್ಲಾ ಅವರಿಗೆ ಕೇಳುತ್ತಿದ್ದಾನೆ, 'ಕುಡಿದು, ಬಡ ವ್ಯಕ್ತಿಯೊಬ್ಬನಿಗೆ ಹೊಡೆದಿದ್ದೀರಲ್ಲವೆ, ಸರಿ ಬಿಡಿ ನಿಮಗೆ ಒಳ್ಳೆಯದಾಗಲಿ' ಎಂದಿದ್ದಾನೆ.
ಕಾರಿನಲ್ಲಿ ಕೂತಿದ್ದ ಸಿದ್ಧಾರ್ಥ್ ಶುಕ್ಲಾ, ವಿಡಿಯೋ ಮಾಡುತ್ತಿದ್ದ ವ್ಯಕ್ತಿಯಿಂದ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಜೊತೆಗೆ 'ಆ ವ್ಯಕ್ತಿ ನನಗೆ ಚಾಕು ತೋರಿಸಿದ' ಎಂದು ಹೇಳುತ್ತಾರೆ. ಅಷ್ಟರಲ್ಲಿ ಮತ್ತೆ ಸಿದ್ಧಾರ್ಥ್ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ, ಅಲ್ಲಿಗೆ ವಿಡಿಯೋ ಎಂಡ್ ಆಗಿದೆ. ಆದರೆ ನಟ ಸಿದ್ಧಾರ್ಥ್ ಬೇರೆಯದೇ ರೀತಿ ಘಟನೆಯನ್ನು ಬಣ್ಣಿಸಿದ್ದು, ತಮ್ಮ ಕಾರಿಗೆ ಗುದ್ದಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದಾಗ, ಅವರು ಜಗಳಕ್ಕೆ ನಿಂತು ಚಾಕು ತೋರಿಸಿದರು, ನಾವು ಅವರನ್ನು ಬಲಪ್ರಯೋಗಿಸಿ ತಳ್ಳಿ, ಆ ಸ್ಥಳದಿಂದ ಹೊರಟು ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದೆವು ಎಂದಿದ್ದಾರೆ.
ಅಲ್ಲದೆ, ಗಾಡಿ ಓಡಿಸಬೇಕಾದರೆ, ತಾವು ಕುಡಿದಿರಲಿಲ್ಲ ಎಂದು ಸಹ ಹೇಳಿದ್ದಾರೆ. ಸಿದ್ಧಾರ್ಥ್ ನೀಡಿರುವ ದೂರಿನಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಸತ್ಯಾಂಶ ಹೊರಬರಬೇಕಿದೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm