ಬ್ರೇಕಿಂಗ್ ನ್ಯೂಸ್
15-12-20 11:37 am Source: FILMIBEAT Mahesh Malnad ಸಿನಿಮಾ
ಚೆನ್ನೈ, ಡಿ. 15: ತಮಿಳು ಕಿರುತೆರೆಯ ಜನಪ್ರಿಯ ನಟಿ ವಿಜೆ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರಾ ಅವರ ಪತ್ನಿ ಹೇಮಂತ್ ಬಂಧನವಾಗಿದೆ. ಸೋಮವಾರ ರಾತ್ರಿ ಹೇಮಂತ್ ಬಂಧಿಸಿರುವುದನ್ನು ಎಸಿಪಿ ಸುದರ್ಶನ್ ದೃಢಪಡಿಸಲಾಗಿದೆ. ಚಿತ್ರಾ ಹಾಗೂ ಹೇಮಂತ್ ಕೆಲ ತಿಂಗಳುಗಳ ಹಿಂದಷ್ಟೇ ವಿವಾಹವಾಗಿದ್ದರು. ಚಿತ್ರಾ ಸಾವಿಗೆ ಪತಿ ಹೇಮಂತ್ ಕಾರಣ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ಈ ಕುರಿತಂತೆ ವಿಚಾರಣೆಗೆ ಹಾಜರಾಗಿದ್ದ ಹೇಮಂತ್ ರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ವಿಜೆ ಚಿತ್ರಾ ನಟನೆ ಕೆಲವು ದೃಶ್ಯಗಳ ಬಗ್ಗೆ ಹೇಮಂತ್ ಆಕ್ಷೇಪ ವ್ಯಕ್ತಪಡಿಸಿ ಜಗಳವಾಡಿದ್ದ ಎಂದು ತಿಳಿದು ಬಂದಿದೆ. ಚಿತ್ರಾ ಆತ್ಮಹತ್ಯೆಗೆ ಶರಣಾದ ದಿನ ಕೂಡಾ ಆಕೆ ಮೇಲೆ ಹಲ್ಲೆ ಮಾಡಿ, ಅಂಥಾ ಸೀನ್ ಗಳಲ್ಲಿ ಏಕೆ ನಟಿಸುತ್ತೀಯಾ ಎಂದು ಪ್ರಶ್ನೆ ಮಾಡಿದ್ದ ಎಂದು ಪೊಲೀಸರು ಹೇಳಿದರು.

ಪಾಂಡಿಯನ್ ಸ್ಟೋರ್ಸ್ ತಮಿಳು ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದ 29ವರ್ಷ ವಯಸ್ಸಿನ ವಿಜೆ ಚಿತ್ರಾ ಚೆನ್ನೈನ ನಜರಥ್ ಪೇಟ್ ನಲ್ಲಿರುವ ಹೋಟೆಲ್ ರೂಮೊಂದರಲ್ಲಿ ಡಿಸೆಂಬರ್ 9ರಂದು ಶವವಾಗಿ ಪತ್ತೆಯಾಗಿದ್ದರು.
''ಅಂದು ಮಧ್ಯಾಹ್ನ 1 ಗಂಟೆಗೆ ಹೋಟೆಲ್ ರೂಮಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ನೇರ ಇಲ್ಲಿಗೆ ಬಂದಿದ್ದಂತೆ ತೋರುತ್ತಿತ್ತು. 3.30ರ ಸುಮಾರಿಗೆ 100 ಸಂಖ್ಯೆ ಡಯಲ್ ಮಾಡಿ ವಿಷಯ ತಿಳಿಸಿದೆ'' ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಚಿತ್ರಾ ಅವರು ಆತ್ಮಹತ್ಯೆ ನಿರ್ಧಾರ ಮಾಡಿದ್ದೇಕೆ ಎಂಬುದು ಇನ್ನೂ ಪತ್ತೆಯಾಗಿಲ್ಲ. ಶೂಟಿಂಗ್ ಮುಗಿದ ಬಳಿಕ ಖುಷಿಯಿಂದಲೆ ತಮ್ಮ ಚಿತ್ರವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ''ಹೇಮಂತ್ ನೀಡುತ್ತಿದ್ದ ಕಿರುಕುಳ ಮುಖ್ಯ ಕಾರಣ, ಅವನಿಗೆ ಇವಳು ನಟಿಸುವುದು ಇಷ್ಟವಿರಲಿಲ್ಲ, ಪದೇ ಪದೇ ಹಿಂಸಿಸುತ್ತಿದ್ದ. ಮಂಗಳವಾರ ನನ್ನ ಜೊತೆ ಚೆನ್ನಾಗಿ ಮಾತನಾಡಿದ್ದಳು'' ಎಂದು ಚಿತ್ರಾ ಅವರ ತಾಯಿ ವಿಜಯ ನೊಂದು ನುಡಿದಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm