ಬ್ರೇಕಿಂಗ್ ನ್ಯೂಸ್
15-12-20 11:37 am Source: FILMIBEAT Mahesh Malnad ಸಿನಿಮಾ
ಚೆನ್ನೈ, ಡಿ. 15: ತಮಿಳು ಕಿರುತೆರೆಯ ಜನಪ್ರಿಯ ನಟಿ ವಿಜೆ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರಾ ಅವರ ಪತ್ನಿ ಹೇಮಂತ್ ಬಂಧನವಾಗಿದೆ. ಸೋಮವಾರ ರಾತ್ರಿ ಹೇಮಂತ್ ಬಂಧಿಸಿರುವುದನ್ನು ಎಸಿಪಿ ಸುದರ್ಶನ್ ದೃಢಪಡಿಸಲಾಗಿದೆ. ಚಿತ್ರಾ ಹಾಗೂ ಹೇಮಂತ್ ಕೆಲ ತಿಂಗಳುಗಳ ಹಿಂದಷ್ಟೇ ವಿವಾಹವಾಗಿದ್ದರು. ಚಿತ್ರಾ ಸಾವಿಗೆ ಪತಿ ಹೇಮಂತ್ ಕಾರಣ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ಈ ಕುರಿತಂತೆ ವಿಚಾರಣೆಗೆ ಹಾಜರಾಗಿದ್ದ ಹೇಮಂತ್ ರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ವಿಜೆ ಚಿತ್ರಾ ನಟನೆ ಕೆಲವು ದೃಶ್ಯಗಳ ಬಗ್ಗೆ ಹೇಮಂತ್ ಆಕ್ಷೇಪ ವ್ಯಕ್ತಪಡಿಸಿ ಜಗಳವಾಡಿದ್ದ ಎಂದು ತಿಳಿದು ಬಂದಿದೆ. ಚಿತ್ರಾ ಆತ್ಮಹತ್ಯೆಗೆ ಶರಣಾದ ದಿನ ಕೂಡಾ ಆಕೆ ಮೇಲೆ ಹಲ್ಲೆ ಮಾಡಿ, ಅಂಥಾ ಸೀನ್ ಗಳಲ್ಲಿ ಏಕೆ ನಟಿಸುತ್ತೀಯಾ ಎಂದು ಪ್ರಶ್ನೆ ಮಾಡಿದ್ದ ಎಂದು ಪೊಲೀಸರು ಹೇಳಿದರು.

ಪಾಂಡಿಯನ್ ಸ್ಟೋರ್ಸ್ ತಮಿಳು ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದ 29ವರ್ಷ ವಯಸ್ಸಿನ ವಿಜೆ ಚಿತ್ರಾ ಚೆನ್ನೈನ ನಜರಥ್ ಪೇಟ್ ನಲ್ಲಿರುವ ಹೋಟೆಲ್ ರೂಮೊಂದರಲ್ಲಿ ಡಿಸೆಂಬರ್ 9ರಂದು ಶವವಾಗಿ ಪತ್ತೆಯಾಗಿದ್ದರು.
''ಅಂದು ಮಧ್ಯಾಹ್ನ 1 ಗಂಟೆಗೆ ಹೋಟೆಲ್ ರೂಮಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ನೇರ ಇಲ್ಲಿಗೆ ಬಂದಿದ್ದಂತೆ ತೋರುತ್ತಿತ್ತು. 3.30ರ ಸುಮಾರಿಗೆ 100 ಸಂಖ್ಯೆ ಡಯಲ್ ಮಾಡಿ ವಿಷಯ ತಿಳಿಸಿದೆ'' ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಚಿತ್ರಾ ಅವರು ಆತ್ಮಹತ್ಯೆ ನಿರ್ಧಾರ ಮಾಡಿದ್ದೇಕೆ ಎಂಬುದು ಇನ್ನೂ ಪತ್ತೆಯಾಗಿಲ್ಲ. ಶೂಟಿಂಗ್ ಮುಗಿದ ಬಳಿಕ ಖುಷಿಯಿಂದಲೆ ತಮ್ಮ ಚಿತ್ರವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ''ಹೇಮಂತ್ ನೀಡುತ್ತಿದ್ದ ಕಿರುಕುಳ ಮುಖ್ಯ ಕಾರಣ, ಅವನಿಗೆ ಇವಳು ನಟಿಸುವುದು ಇಷ್ಟವಿರಲಿಲ್ಲ, ಪದೇ ಪದೇ ಹಿಂಸಿಸುತ್ತಿದ್ದ. ಮಂಗಳವಾರ ನನ್ನ ಜೊತೆ ಚೆನ್ನಾಗಿ ಮಾತನಾಡಿದ್ದಳು'' ಎಂದು ಚಿತ್ರಾ ಅವರ ತಾಯಿ ವಿಜಯ ನೊಂದು ನುಡಿದಿದ್ದಾರೆ.
This News Article is a Copy of FILMIBEAT
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm