ಬ್ರೇಕಿಂಗ್ ನ್ಯೂಸ್
16-12-20 12:11 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನಲ್ಲಿ ಲೂಸಿಯ ಮತ್ತು ಯು ಟರ್ನ್ ಮೂಲಕ ಕನ್ನಡ ಸಿನಿಮಾ ಅಭಿಮಾನಿಗಳ ಹೃದಯ ಗೆದ್ದಿರುವ ನಿರ್ದೇಶಕ ಪವನ್ ಕುಮಾರ್ ಸದ್ಯ ವೆಬ್ ಸರಣಿಯಲ್ಲಿ ಬ್ಯುಸಿಯಾಗಿದ್ದಾರೆ. ಅಂದಹಾಗೆ ಪವನ್ ವೆಬ್ ಸರಣಿ ನಿರ್ದೇಶನ ಮಾಡುತ್ತಿರುವುದು ತೆಲುಗಿನಲ್ಲಿ. ತೆಲುಗು ಒಟಿಟಿಗಾಗಿ ಪವನ್ ಕುಮಾರ್ ವೆಬ್ ಸರಣಿ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗಿನಲ್ಲಿ ತಮ್ಮದೆ ಆದ ಒಟಿಟಿ ಇರಬೇಕೆಂದು ಆಹಾ ಒಟಿಟಿಯನ್ನು ಮಾಡಿಕೊಂಡಿದ್ದಾರೆ. ಅಹಾ ಒಟಿಟಿಗೆ ಪವನ್ ಕುಮಾರ್ ವೆಬ್ ಸಿರೀಸ್ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ವೆಬ್ ಸರಣಿಯ ಚಿತ್ರೀಕರಣ ಪ್ರಾರಂಭವಾಗಿದ್ದು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ವಿಶೇಷ ಎಂದರೆ ವೆಬ್ ಸರಣಿಯಲ್ಲಿ ಅಮಲಾ ಪೌಲ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

'ಕುಡಿ ಎಡಮೈತೆ' ವೆಬ್ ಸರಣಿ ಚಿತ್ರೀಕರಣದಲ್ಲಿ ಪವನ್
ವೆಬ್ ಸರಣಿಗೆ 'ಕುಡಿ ಎಡಮೈತೆ' ಎನ್ನುವ ಟೈಟಲ್ ಇಡಲಾಗಿದೆ. ಚಿತ್ರದಲ್ಲಿ ರಾಹುಲ್ ವಿಜಯ್ ನಾಯಕನಾಗಿ ನಟಿಸುತ್ತಿದ್ದಾರೆ. ಸೈನ್ಸ್ ಫಿಕ್ಷನ್ ಥ್ರಿಲ್ಲರ್ ವೆಬ್ ಸರಣಿಯಾಗಿದ್ದು ನಿರ್ದೇಶಕ ಕುಮಾರ್ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ ಕೊನೆಯಲ್ಲಿ ಚಿತ್ರೀಕರಣ ಮುಗಿಸುವ ಪ್ಲಾನ್ ಮಾಡಿದೆ ತಂಡ.
ಚಿತ್ರೀಕರಣದ ಫೋಟೋ ಹಂಚಿಕೊಂಡ ಪವನ್ ಅಂದಹಾಗೆ 'ಕುಡಿ ಎಡಮೈತೆ' ಪವನ್ ಕುಮಾರ್ ನಿರ್ದೇಶನದ ಎರಡನೇ ವೆಬ್ ಸರಣಿ. ಈಗಾಗಲೇ ಪವನ್ ನೆಟ್ ಫ್ಲಿಕ್ಸ ನಲ್ಲಿ ವೆಬ್ ಸರಣಿ ಮಾಡುವ ಮೂಲಕ ಆನ್ ಲೈನ್ ವಿಭಾಗದಲ್ಲಿ ಸಕ್ರೀಯರಾಗಿದ್ದಾರೆ. 'ಕುಡಿ ಎಡಮೈತೆ' ವೆಬ್ ಸರಣಿಯ ಚಿತ್ರೀಕರಣ ಪೋಟೋಗಳನ್ನು ಪವನ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಯುಟರ್ನ್ ತೆಲುಗು ರಿಮೇಕ್ ನಿರ್ದೇಶನ
ಅಂದಹಾಗೆ ಪವನ್ ಕುಮಾರ್ ತೆಲುಗು ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಕನ್ನಡದ ಯು ಟರ್ನ್ ಸಿನಿಮಾವನ್ನು ತೆಲುಗಿಗೆ ರಿಮೇಕ್ ಮಾಡಿದ್ದಾರೆ. ನಟಿ ಸಮಂತಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇದೀಗ ವೆಬ್ ಸರಣಿ ಮೂಲಕ ಮತ್ತೆ ತೆಲುಗು ಸಿನಿಮಾರಂಗದಲ್ಲಿ ಸದ್ದು ಮಾಡುತ್ತಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm