ಬ್ರೇಕಿಂಗ್ ನ್ಯೂಸ್
16-12-20 12:11 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನಲ್ಲಿ ಲೂಸಿಯ ಮತ್ತು ಯು ಟರ್ನ್ ಮೂಲಕ ಕನ್ನಡ ಸಿನಿಮಾ ಅಭಿಮಾನಿಗಳ ಹೃದಯ ಗೆದ್ದಿರುವ ನಿರ್ದೇಶಕ ಪವನ್ ಕುಮಾರ್ ಸದ್ಯ ವೆಬ್ ಸರಣಿಯಲ್ಲಿ ಬ್ಯುಸಿಯಾಗಿದ್ದಾರೆ. ಅಂದಹಾಗೆ ಪವನ್ ವೆಬ್ ಸರಣಿ ನಿರ್ದೇಶನ ಮಾಡುತ್ತಿರುವುದು ತೆಲುಗಿನಲ್ಲಿ. ತೆಲುಗು ಒಟಿಟಿಗಾಗಿ ಪವನ್ ಕುಮಾರ್ ವೆಬ್ ಸರಣಿ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗಿನಲ್ಲಿ ತಮ್ಮದೆ ಆದ ಒಟಿಟಿ ಇರಬೇಕೆಂದು ಆಹಾ ಒಟಿಟಿಯನ್ನು ಮಾಡಿಕೊಂಡಿದ್ದಾರೆ. ಅಹಾ ಒಟಿಟಿಗೆ ಪವನ್ ಕುಮಾರ್ ವೆಬ್ ಸಿರೀಸ್ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ವೆಬ್ ಸರಣಿಯ ಚಿತ್ರೀಕರಣ ಪ್ರಾರಂಭವಾಗಿದ್ದು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ವಿಶೇಷ ಎಂದರೆ ವೆಬ್ ಸರಣಿಯಲ್ಲಿ ಅಮಲಾ ಪೌಲ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

'ಕುಡಿ ಎಡಮೈತೆ' ವೆಬ್ ಸರಣಿ ಚಿತ್ರೀಕರಣದಲ್ಲಿ ಪವನ್
ವೆಬ್ ಸರಣಿಗೆ 'ಕುಡಿ ಎಡಮೈತೆ' ಎನ್ನುವ ಟೈಟಲ್ ಇಡಲಾಗಿದೆ. ಚಿತ್ರದಲ್ಲಿ ರಾಹುಲ್ ವಿಜಯ್ ನಾಯಕನಾಗಿ ನಟಿಸುತ್ತಿದ್ದಾರೆ. ಸೈನ್ಸ್ ಫಿಕ್ಷನ್ ಥ್ರಿಲ್ಲರ್ ವೆಬ್ ಸರಣಿಯಾಗಿದ್ದು ನಿರ್ದೇಶಕ ಕುಮಾರ್ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ ಕೊನೆಯಲ್ಲಿ ಚಿತ್ರೀಕರಣ ಮುಗಿಸುವ ಪ್ಲಾನ್ ಮಾಡಿದೆ ತಂಡ.
ಚಿತ್ರೀಕರಣದ ಫೋಟೋ ಹಂಚಿಕೊಂಡ ಪವನ್ ಅಂದಹಾಗೆ 'ಕುಡಿ ಎಡಮೈತೆ' ಪವನ್ ಕುಮಾರ್ ನಿರ್ದೇಶನದ ಎರಡನೇ ವೆಬ್ ಸರಣಿ. ಈಗಾಗಲೇ ಪವನ್ ನೆಟ್ ಫ್ಲಿಕ್ಸ ನಲ್ಲಿ ವೆಬ್ ಸರಣಿ ಮಾಡುವ ಮೂಲಕ ಆನ್ ಲೈನ್ ವಿಭಾಗದಲ್ಲಿ ಸಕ್ರೀಯರಾಗಿದ್ದಾರೆ. 'ಕುಡಿ ಎಡಮೈತೆ' ವೆಬ್ ಸರಣಿಯ ಚಿತ್ರೀಕರಣ ಪೋಟೋಗಳನ್ನು ಪವನ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಯುಟರ್ನ್ ತೆಲುಗು ರಿಮೇಕ್ ನಿರ್ದೇಶನ
ಅಂದಹಾಗೆ ಪವನ್ ಕುಮಾರ್ ತೆಲುಗು ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಕನ್ನಡದ ಯು ಟರ್ನ್ ಸಿನಿಮಾವನ್ನು ತೆಲುಗಿಗೆ ರಿಮೇಕ್ ಮಾಡಿದ್ದಾರೆ. ನಟಿ ಸಮಂತಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇದೀಗ ವೆಬ್ ಸರಣಿ ಮೂಲಕ ಮತ್ತೆ ತೆಲುಗು ಸಿನಿಮಾರಂಗದಲ್ಲಿ ಸದ್ದು ಮಾಡುತ್ತಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm