ಬ್ರೇಕಿಂಗ್ ನ್ಯೂಸ್
17-12-20 12:50 pm Source: FILMIBEAT ಸಿನಿಮಾ
ಸ್ಯಾಂಡಲ್ವುಡ್ ಕಡೆ ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡುವ ಸಿನಿಮಾಗಳನ್ನು ಮಾಡಿದ್ದು ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲಂಸ್ ಸಂಸ್ಥೆ. ಇಂತಹ ಪ್ರತಿಷ್ಠಿತ ಸಂಸ್ಥೆ ಹಾಗೂ ನಿರ್ದೇಶಕ ಕೆಜಿಎಫ್ ನಂತರ ಇತ್ತೀಚೆಗಷ್ಟೆ ಪ್ರಭಾಸ್ ಜೊತೆಗೆ ಸಲಾರ್ ಎಂಬ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾವನ್ನು ಪ್ರಕಟಿಸಿತ್ತು.
ಸದ್ಯ ಇಂದು ಈ ಜೋಡಿ ಶ್ರೀಮುರಳಿ ನಾಯಕತ್ವದಲ್ಲಿ ಬಘೀರ ಎಂಬ ಮತ್ತೊಂದು ಸಿನಿಮಾವನ್ನು ಘೋಷಣೆ ಮಾಡಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ಚಿತ್ರಕಥೆ ವರೆದರೆ, ಡಾಕ್ಟರ್ ಸೂರಿ ನಿರ್ದೇಶನ ಮತ್ತು ಸ್ಕ್ರೀನ್ ಪ್ಲೇ ಇರಲಿದೆ. ವಿಜಯ್ ಕಿರಂಗದೂರು ನಿರ್ಮಾಣ ಮಾಡುತ್ತಿದ್ದಾರೆ. ಇಂದು ಶ್ರೀಮುರಳಿ ಹುಟ್ಟುಹಬ್ಬದ ಪ್ರಯುಕ್ತ ಈ ಘೋಷಣೆಯಾಗಿದೆ. ಟೈಟರ್ ಪೋಸ್ಟರ್ ರಿಲೀಸ್ ಆಗಿದ್ದು ಮುರಳಿ ಪೊಲೀಸ್ ಗೆಟಪ್ನಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.
ಇಂದು ರೋರಿಂಗ್ ಸ್ಟಾರ್ ಮುರಳಿ ಅವರ ಹುಟ್ಟುಹಬ್ಬ. ಈ ಪ್ರಯುಕ್ತ ಚಿತ್ರತಂಡ ಬೆಳಿಗ್ಗೆ ಮದಗಜ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಿತ್ತು. ಫಸ್ಟ್ ನೋಡಿ ಥ್ರಿಲ್ ಆದ ರೋರಿಂಗ್ ಅಭಿಮಾನಿಗಳು ಫಿದಾ ಆಗಿದ್ದಾರೆ.
ಈ ಸುದ್ದಿ ತಣ್ಣಗಾಗುವಷ್ಟರಲ್ಲಿ ರೋರಿಂಗ್ ಸ್ಟಾರ್ ಮುರಳಿಯವರ ಮತ್ತೊಂದು ಚಿತ್ರ ಅನೌನ್ಸ್ ಆಗಿದೆ. ವಿಜಯ್ ಕಿರಂಗದೂರು ಅವರ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ. ಪ್ರಶಾಂತ್ ಕಥೆ ಆಧಾರಿತ, ಡಾಕ್ಟರ್ ಸೂರಿ ನಿರ್ದೇಶನದಲ್ಲಿ “ಬಘೀರ” ಚಿತ್ರ ಇಂದು ಅನೌನ್ಸ್ ಆಗಿದೆ.
ಚಿತ್ರದ ಪೋಸ್ಟರ್ ನೋಡಿದರೆ ಮುರಳಿ ಈ ಚಿತ್ರದಲ್ಲಿ ಒಬ್ಬ ಪೋಲಿಸ್ ಆಫೀಸರ್ ಆಗಿ ಕಾಣಿಸಿಕೊಳ್ಳುತ್ತಿರುವುದು ಗೊತ್ತಾಗುತ್ತದೆ. ಪೋಸ್ಟರ್ ನಲ್ಲಿ ‘ವೆನ್ ಸೊಸೈಟಿ ಬಿಕಮ್ಸ್ ಜಂಗಲ್.. ಅಂಡ್ ಓನ್ಲಿ ಒನ್ ಪ್ರಿಡೇಟರ್ ರೋರ್ಸ್ ಫಾರ್ ಜಸ್ಟಿಸ್ ಅನ್ನೋ ಕ್ಯಾಪ್ಶನ್ ಕೂಡ ಇದೆ. ಚಿತ್ರದ ಬಗ್ಗೆ ಹೆಚ್ಚು ಮಾಹಿತಿ ಇಲ್ಲದಿದ್ದರೂ, ಇದೊಂದು ಪಕ್ಕ ಕಮರ್ಷಿಯಲ್ ಆಕ್ಷನ್ ಚಿತ್ರ ಎಂದು ಪೋಸ್ಟರ್ ನೋಡಿದರೆ ಅನಿಸುತ್ತದೆ.
ಇದು ಹೊಂಬಾಳೆ ಫಿಲಂಸ್ ನ 8ನೇ ಚಿತ್ರ. ಇತ್ತೀಚೆಗಷ್ಟೇ, ಹೊಂಬಾಳೆ ಫಿಲಂಸ್, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ, ಪ್ರಭಾಸ್ ಅಭಿನಯದಲ್ಲಿ ಪ್ಯಾನ್ ಇಂಡಿಯನ್ ಸಿನಿಮಾ ಸಾಲಾರ್ ಅನ್ನು ಅನೌನ್ಸ್ ಮಾಡಿದ್ದರು. ಹೊಂಬಾಳೆ ಫಿಲಂಸ್ ನ ಈ ನಡೆಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಬಂದಿತ್ತು.
This News Article is a Copy of FILMIBEAT
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm